ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಬಹಳ ಸಂಭ್ರಮದಿಂದ ಇತ್ತೀಚೆಗೆ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ತಾಲೂಕು ಹೆಲ್ತ್ ಆಫೀಸರರಾದ ಡಾ. ಪ್ರೇಮಾನಂದ ಕೆ. ಅವರು ಆಗಮಿಸಿ ಮಾತನಾಡಿ, ಇಂದಿನ ಮಕ್ಕಳ ಜೀವನದಲ್ಲಿ ಹೊರಾಂಗಣ ಆಟಗಳ ಅಗತ್ಯತೆ ಅತ್ಯಂತ ಮಹತ್ವದ್ದು ಎಂದು ಒತ್ತಿ ಹೇಳಿದರು. ಹಾಗೆಯೇ ಆಹಾರ ಕ್ರಮದ ಕುರಿತು ಪೋಷಕರಿಗೆ ಮೌಲ್ಯಯುತ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗ್ಡೆ ಹಾಗೂ ಪ್ರೊ. ಜೆನ್ನಿಫರ್ ಫ್ರೀಡಾ ಮೆನೇಜಸ್, ಪ್ರಿನ್ಸಿಪಲ್ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಡಾ. ಪ್ರತಿಭಾ ಪಾಟೀಲ್, ಪ್ರಿನ್ಸಿಪಾಲ್ ಆಫ್ ಐ ಎಂ ಜೆ ಇನ್ಸ್ಟಿಟ್ಯೂಷನ್, ಸೆಬಾಸ್ಟಿನ್, ಅಕಾಡೆಮಿಸಿನ್ ಅವರು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳು ಹಿತನುಡಿಯನ್ನಾಡಿದರು. ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ, ನಾಟಕ, ಯಕ್ಷಗಾನದ ಮೂಲಕ ಕಣ್ಮನ ಸೆಳೆದರು.
ಕಾರ್ಯಕ್ರಮದಲ್ಲಿ ಶಿಕ್ಷಕಿ ರಶ್ಮಾ ಶೆಟ್ಟಿ ವಾರ್ಷಿಕ ವರದಿ ಓದಿದರು. ಸೋಫಿಯಾ ಕಾರ್ವಾಲ್ಲೊ ಕಾರ್ಯಕ್ರಮದ ನಿರೂಪಿಸಿದರು. ಶಿಕ್ಷಕಿ ವಿದ್ಯಾ ಅತಿಥಿ ಪರಿಚಯ ಮಾಡಿದರು. ಸುನಿತಾ ರೆಬೆಲ್ಲೊ ಸ್ವಾಗತ ಭಾಷಣ ಮಾಡಿದರು. ಶಿಕ್ಷಕಿಯರಾದ ಪದ್ಮಾವತಿ ಮತ್ತು ಪ್ರಜ್ಞಾ ಶೆಟ್ಟಿ ಬಹುಮಾನ ವಿಜೇತರ ಪಟ್ಟಿಯನ್ನು ಓದಿದರು. ಶಿಕ್ಷಕಿ ಸ್ವಾತಿ ವಂದಿಸಿದರು.















