Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಾಲೆಗಳು ಸಮಾಜದ ಕೇಂದ್ರಗಳಾಗಬೇಕು: ಉದ್ಯಾವರ ಮಾಧವ ಆಚಾರ್ಯ
    ಊರ್ಮನೆ ಸಮಾಚಾರ

    ಶಾಲೆಗಳು ಸಮಾಜದ ಕೇಂದ್ರಗಳಾಗಬೇಕು: ಉದ್ಯಾವರ ಮಾಧವ ಆಚಾರ್ಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಮರವಂತೆ: ಶಾಲೆಗಳು ಕೇವಲ ಕಲ್ಲು ಮಣ್ಣಿನಿಂದ ಕಟ್ಟಿದ ಕಟ್ಟೋಣವಲ್ಲ. ಇದೊಂದು ಯಜ್ಞಭೂಮಿಯಾಗಿದ್ದು, ಸಮಾಜಕ್ಕೆ ಶಕ್ತಿ ಕೊಡುವ ಕೇಂದ್ರವಾಗಿದೆ. ಇಲ್ಲಿ ಧನಾತ್ಮಕ ಚಿಂತನೆಗಳು ದೊಡ್ಡ ಶಕ್ತಿಯಾಗಬೇಕು. ಇಂತಹ ಸಂಸ್ಥೆಗಳಲ್ಲಿ ಮಕ್ಕಳಿಗೆ ಭಾವನಾತ್ಮಕ ವ್ಯಕ್ತಿತ್ವ ವಿಕಸನದ ಶಿಕ್ಷಣ ಸಿಗುವಂತಾಗಬೇಕು ಎಂದು ಉದ್ಯಾವರ ಮಾಧವ ಆಚಾರ್ಯ ಹೇಳಿದರು.

    Click Here

    Call us

    Click Here

    ನಾಗೂರು ಸಂದೀಪನ್ ಆಂಗ್ಲಮಾಧ್ಯಮ ಶಾಲೆಯ 28ನೇ ವಾರ್ಷಿಕೋತ್ಸವದ ಅಧ್ಯಕ್ಷತೆವಹಿಸಿ ಮಾತನಾಡಿದರು. ಹಿಂದಿನವರಿಂದ ಬಂದ, ಎಲ್ಲರೂ ಒಂದಾಗಿ ಬಾಳೋಣ ಎಂಬ ಕಲ್ಪನೆಗಳು ಶಾಲೆಯಲ್ಲಿ ಮಾತ್ರ ಸಾಧ್ಯ. ಕಿವಿಯಿಂದ ಕೇಳಿದ ಪಾಠ ಮನಸ್ಸಿನೊಳಗೆ ಹೋಗದಿದ್ದರೆ ಏನೂ ಪ್ರಯೋಜನವಾಗದು. ಭಗವಂತ ಕೊಟ್ಟ ಸೂಕ್ಷ್ಮ ಅಂಗಾಗಗಳಲ್ಲಿ ಸಮರ್ಪಕ ವ್ಯವಸ್ಥೆಯಿದೆ. ಪ್ರತಿಯೊಂದನ್ನು ಸ್ವೀಕರಿಸಿ ಪುನಃ ಜಗತ್ತಿಗೆ ನೀಡುವಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದರು.

    ವಿಶೇಷ ಅತಿಥಿಯಾಗಿ ಆಗಮಿಸಿದ ಗುಜರಾತ್ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಾಧನಾ ರಾವ್ ಮಾತನಾಡಿ, ಮಗು ದೇವರು ಕೊಟ್ಟ ದೇಣಿಗೆ. ಮಕ್ಕಳಿಗೆ ಶಿಕ್ಷಣ ಶಿಕ್ಷೆಯಾಗಬಾರದು. ನಿಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಕೆ ಮಾಡಬೇಡಿ. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಆ ಮಾರ್ಗದಲ್ಲಿಯೇ ಅವರನ್ನು ಮುನ್ನೆಡೆಸಿ. ಇದರಿಂದ ಮಕ್ಕಳ ಭವಿಷ್ಯ ಉತ್ತಮಗೊಳಿಸಲು ಸಾಧ್ಯವಾಗುತ್ತದೆ ಎಂದು ಹೆತ್ತವರಿಗೆ ಸಲಹೆ ನೀಡಿದರು.

    ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲಮಾಧ್ಯಮ ಶಾಲಾ ಸಂಚಾಲಕ ಹಾಗೂ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ, ಹವ್ಯಾಸಿ ಯಕ್ಷಗಾನ ಭಾಗವತ ಅಣ್ಣಪ್ಪ ದೇವಾಡಿಗ ಬಿಜೂರು, ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದ ಶ್ರೇಯಸ್ ಎಂ. ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ-2015ರ ಪ್ರತಿಭಾವಂತ ವಿದ್ಯಾರ್ಥಿಗಳು, ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

    ಸಿಂಡಿಕೇಟ್ ಬ್ಯಾಂಕಿನ ಫೀಲ್ಡ್ ಜನರಲ್ ಮೆನೇಜರ್ ಕೆ. ತಿಮ್ಮಪ್ಪ ರೈ, ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಕೆ. ಸಂಜೀತ್ ರಾವ್ ಉಪಸ್ಥಿತರಿದ್ದರು. ಆರ್.ಕೆ ಸಂಜೀವ್ ರಾವ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಕೆ. ಎಸ್. ಪ್ರಕಾಶ್ ರಾವ್ ಪ್ರಾಸ್ತಾವಿಸಿ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಬಿ. ವಿಶ್ವೇಶ್ವರ ಅಡಿಗ ವರದಿ ವಾಚಿಸಿದರು. ವಿದ್ಯಾರ್ಥಿನಿಯರಾದ ಸಹನಾ ಪ್ರಭು, ಧರ್ಮಶ್ರೀ ನಿರೂಪಿಸಿ, ರಾಜೇಶ್ ನಾಯ್ಕ್ ವಂದಿಸಿದರು. ಬಳಿಕ ಮಕ್ಕಳಿಂದ ನೃತ್ಯ, ನಾಟಕ ಮತ್ತು ಯಕ್ಷಗಾನ ಪ್ರದರ್ಶನ ನಡೆಯಿತು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    five + eleven =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.