Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಿಜಿಟಲ್ ಆಪ್ ಆಧಾರಿತ ಆಟೋ ಸಂಚಾರ, ಸಾಧಕ-ಬಾಧಕಗಳನ್ನು ಚರ್ಚಿಸಿ: ಜಿಲ್ಲಾಧಿಕಾರಿ
    Uncategorized

    ಡಿಜಿಟಲ್ ಆಪ್ ಆಧಾರಿತ ಆಟೋ ಸಂಚಾರ, ಸಾಧಕ-ಬಾಧಕಗಳನ್ನು ಚರ್ಚಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಉಡುಪಿ ನಗರ ವ್ಯಾಪ್ತಿಯಲ್ಲಿ ಡಿಜಿಟಲ್ ಆಪ್ ಆಧಾರಿತ ಆಟೋ ಸಾರ್ವಜನಿಕ ಸಾಗಾಣಿಕೆಗೆ ಸರಕಾರದ ಪರವಾನಿಗೆ ಪತ್ರ ಪಡೆಯುವುದು ಕಡ್ಡಾಯ. ಪರವಾನಿಗೆ ಹೊಂದಿದ್ದಲ್ಲಿ ಸಾಧಕ-ಬಾಧಕಗಳನ್ನು ಚರ್ಚಿಸಿ, ಚಲಾವಣೆ ಮಾಡುವುದು ಸೂಕ್ತ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.

    Click Here

    Call us

    Click Here

    ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ನಮ್ಮ ಯಾತ್ರಿ ಆಪ್ ಹಾಗೂ ರ‍್ಯಾಪಿಡ್ ಆಪ್ ಆಟೋ ಸಂಚಾರ ಕುರಿತ ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಉಡುಪಿ ನಗರ ವ್ಯಾಪ್ತಿಯ ಮಣಿಪಾಲ್ ನಲ್ಲಿ ಡಿಜಿಟಲ್ ಆಪ್ ಆಧಾರಿತ ಬಾಡಿಗೆ ಆಟೋಗಳ ಚಾಲನೆಯ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ಕೇಳಿಬರುತ್ತಿವೆ. ಡಿಜಿಟಲ್ ಆಪ್ ಆಧಾರಿತ ಕೆಲವು ಸಂಸ್ಥೆಗಳು ಸೇವೆಗಳನ್ನು ಒದಗಿಸುತ್ತಿವೆ. ಈ ಬಗ್ಗೆ ಸರಕಾರದ ಪರವಾನಿಗೆ ಸೇರಿದಂತೆ ಮತ್ತಿತರ ದಾಖಲೆಗಳನ್ನು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಮುಂದೆ ಹಾಜರುಪಡಿಸಿದ್ದಲ್ಲಿ ಸ್ಥಳೀಯ ಆಟೋ ಚಾಲಕರ ಯೂನಿಯನ್‌ಗಳ ಪದಾಧಿಕಾರಿಗಳು ಹಾಗೂ ಆಪ್ ಆಧಾರಿತ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಾಧಕ-ಬಾಧಕಗಳನ್ನು ಚರ್ಚಿಸಿ, ತೀರ್ಮಾನಿಸಲಾಗುವುದು ಎಂದರು.

    ಉಡುಪಿ ನಗರದ ವಲಯ -1 ರಲ್ಲಿ ಸುಮಾರು 4000 ಕ್ಕೂ ಹೆಚ್ಚು ಆಟೋರಿಕ್ಷಾಗಳು ನೋಂದಣಿ ಮಾಡಿಕೊಂಡು ಸಂಚರಿಸುತ್ತಿದ್ದು, ಆಟೋ ನಿಲ್ದಾಣಗಳಲ್ಲಿ ಚಾಲಕರು ಸರತಿ ಸಾಲಿನ ಅನ್ವಯ ಸೇವೆಗಳನ್ನು ಒದಗಿಸುತ್ತಿದ್ದಾರೆ. ಇವರಲ್ಲಿ ಕೆಲವರು ಹಲವು ವರ್ಷಗಳಿಂದ ಈ ವೃತ್ತಿಯನ್ನು ನಡೆಸಿಕೊಂಡು ಬರುತ್ತಿದ್ದು, ಅವರ ಅಭಿಪ್ರಾಯಗಳನ್ನು ಪಡೆಯಲಾಗುವುದು ಎಂದ ಅವರು, ಪ್ರಸ್ತುತ ಚಾಲನೆಯಲ್ಲಿರುವ ಪ್ರತಿಯೊಂದು ಆಟೋಗಳು ಕಡ್ಡಾಯವಾಗಿ ಮೀಟರ್ ಬಳಕೆ ಮಾಡಿ, ಚಲಾಯಿಸಬೇಕು ಎಂದರು.

    ಶಾಸಕ ಯಶ್‌ಪಾಲ್ ಎ. ಸುವರ್ಣ ಮಾತನಾಡಿ, ಉಡುಪಿ ನಗರ ಭಾಗದಲ್ಲಿ ಜನರ ಹಾಗೂ ಪ್ರವಾಸಿಗರ ಬೇಡಿಕೆ ಮತ್ತು ಆಟೋ ನಿಲ್ದಾಣಗಳಲ್ಲಿ ಸಾಮರ್ಥ್ಯಕ್ಕೆ ಅನುಗುಣವಾಗಿ ಬಾಡಿಗೆ ಮಾಡಲು ಅವಕಾಶ ನೀಡಬೇಕು. ಆಟೋರಿಕ್ಷಾ ನಿಲ್ದಾಣಗಳಲ್ಲಿ ರಿಕ್ಷಾ ಚಾಲಕರುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಗಮನಹರಿಸಬೇಕು. ಡಿಜಿಟಲ್ ಆಪ್ ಆಧಾರಿತ ಆಟೋ ಸಂಚಾರದಿಂದ ನಗರದಲ್ಲಿ ಸುಮಾರು 25 ರಿಂದ 30 ವರ್ಷಗಳಿಂದ ಆಟೋ ಚಾಲನೆ ಮಾಡಿ, ಜೀವನೋಪಾಯ ನಡೆಸುತ್ತಿರುವವರಿಗೆ ಉಂಟಾಗುವ ಸಮಸ್ಯೆಗಳನ್ನು ಚರ್ಚಿಸಿ, ನಂತರ ಡಿಜಿಟಲ್ ಆಪ್ ಆಟೋ ಸಂಚಾರಕ್ಕೆ ಅವಕಾಶ ನೀಡಬೇಕು ಎಂದರು. 

    Click here

    Click here

    Click here

    Call us

    Call us

    ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, ಡಿಜಿಟಲ್ ಆಪ್ ಬೇಸ್ಡ್ ಅಟೋ ಸಂಚಾರವನ್ನು ಅಭಿವೃದ್ಧಿಗೊಳಿಸಿದಾಗ ಅದರಿಂದ ಇತರೆ ಆಟೋ ಚಾಲಕರುಗಳಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಬೇಕು ಎಂದ ಅವರು, ವಲಯ-2 ರಲ್ಲಿ ಪರವಾನಿಗೆ ಪಡೆದು ನಗರ ವ್ಯಾಪ್ತಿಯಲ್ಲಿ ಆಟೋ ಚಾಲನೆ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಆಟೋ ನಿಲ್ದಾಣಗಳಲ್ಲಿ ಈ ಹಿಂದೆ ನೋಂದಣಿ ಹೊಂದಿದವರಿಗೆ ಮಾತ್ರ ಅವಕಾಶ ಇದೆ. ನಿಲ್ದಾಣ ಹೊಂದದೇ ಇರುವ ಅಟೋ ಚಾಲಕರು ನೋಂದಣಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಅಲ್ಲಿನ ಆಟೋ ದಟ್ಟಣಿಕೆ ನೋಡಿ ನಗರಸಭೆಯ ಪೌರಾಯುಕ್ತರೊಂದಿಗೆ ಚರ್ಚಿಸಿ ಅನುಮತಿ ನೀಡಲಾಗುವುದು ಎಂದರು.

    ಸಭೆಯಲ್ಲಿ ಆಟೋ ರಿಕ್ಷಾ ಚಾಲಕರು, ಆಪ್ ಬೇಸ್ಡ್ ಆಟೋ ಸಂಚಾರದಿAದ ಇತರೆ ಆಟೋ ಚಾಲಕರುಗಳಿಗೆ ಉಂಟಾಗುವ ಸಮಸ್ಯೆಗಳ ಬಗ್ಗೆ, ಆಟೋ ರಿಕ್ಷಾ ವಲಯ-1, ವಲಯ-2 ರ ಸಂಚರಿಸುವ ಕುರಿತು ಸರಳವಾಗಿ ಗುರುತಿಸಲು, ಕಲರ್ ಕೋಡಿಂಗ್ ಅಳವಡಿಕೆ ಕುರಿತು ಹಾಗೂ ಆಟೋ ನಿಲ್ದಾಣದಲ್ಲಿ ಹೊಸದಾಗಿ ನೋಂದಣಿಗೆ ಅವಕಾಶ ಕಲ್ಪಿಸುವ ಬಗ್ಗೆ ಸಭೆಯ ಗಮನಕ್ಕೆ ತಂದರು.

    ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಂತೋಷ್ ಶೆಟ್ಟಿ, ಆಟೋ ರಿಕ್ಷಾ ಯೂನಿಯನ್ ಪದಾಧಿಕಾರಿಗಳು, ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರುಗಳು, ನಮ್ಮ ಯಾತ್ರಿ ಹಾಗೂ ರ‍್ಯಾಪಿಡ್ ಆಪ್ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಲಿಗ್ರಾಮದಲ್ಲಿ ಅಯೋಧ್ಯ ಶ್ರೀರಾಮ ಜಪ, ಮುಖ್ಯ ಪೇಟೆಯಲ್ಲೆ ಕುಣಿತ ಭಜನೆ, ಪ್ರಸಾದ ವಿತರಣೆ

    24/01/2026

    ಸುರಭಿ ರಿ. ಬೈಂದೂರು ಆಯೋಜಿಸಿದ್ದ ರಾಜ್ಯಮಟ್ಟದ ನಾಟಕ ಸ್ಪರ್ಧೆಯ ಬಹುಮಾನ ವಿತರಣೆ

    21/01/2026

    ಬೈಂದೂರು ಉತ್ಸವ 2026ರ ಅಂಗವಾಗಿ ಶಿರೂರು ಗ್ರಾಮೋತ್ಸವ ಹಾಗೂ ಆರೋಗ್ಯ ಮೇಳ

    17/01/2026
    Leave A Reply Cancel Reply

    4 × 1 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಚಿನ್ನ ಖರೀದಿ ನೆಪದಲ್ಲಿ ಜ್ಯುವೆಲರಿಯಿಂದ ಚಿನ್ನದ ಸರ ಕಳ್ಳತನ- ಆರೋಪಿ ಬಂಧನ
    • ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ ನಿಧನ
    • ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
    • ಕುಂದಾಪುರ: ಟ್ಯಾಟೂ ಕಲಾವಿದನ ಎದೆಗೆ ಗುಂಡು
    • ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ: ಲಕ್ಷ್ಮೀ ಹೆಬ್ಬಾಳಕರ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.