Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಇ. ಸ್ವತ್ತು ಸಮಸ್ಯೆಯನ್ನು ಸರಿಪಡಿಸಿ, ಬಸವ ವಸತಿ ಮನೆ ಹಣ ಬಿಡುಗಡೆಗೊಳಿಸಿ, ಗ್ರಾಮಸ್ಥರ ಆಗ್ರಹ
    ಊರ್ಮನೆ ಸಮಾಚಾರ

    ಇ. ಸ್ವತ್ತು ಸಮಸ್ಯೆಯನ್ನು ಸರಿಪಡಿಸಿ, ಬಸವ ವಸತಿ ಮನೆ ಹಣ ಬಿಡುಗಡೆಗೊಳಿಸಿ, ಗ್ರಾಮಸ್ಥರ ಆಗ್ರಹ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಹಲವು ಸಮಯಗಳಿಂದ ಗ್ರಾಮಸ್ಥರಿಗೆ ಕಗ್ಗಂಟ್ಟಾಗಿರುವ ಇ. ಸ್ವತ್ತು ಸಮಸ್ಯೆಯನ್ನು ಬಗೆಹರಿಸಿ ಅಲ್ಲದೆ ಪಂಚಾಯತ್ ವ್ಯಾಪ್ತಿಯಲ್ಲಿ ಸರಕಾರದ ವಿವಿಧ ವಸತಿ ಯೋಜನೆಗಳ ಹಣ ಬಿಡುಗಡೆಗೊಳಿಸಿ ಎಂಬ ಕೂಗು ಕೋಟತಟ್ಟು ಗ್ರಾಮಪಂಚಾಯತ್‌ನಲ್ಲಿ ಕೇಳಿಬಂತು.

    Click Here

    Call us

    Click Here

    ಶನಿವಾರ ಕೋಟತಟ್ಟು ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ಸಭಾಭವನದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಇದರ ಜಮಾಬಂದಿ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಭಾಗವಹಿಸಿ ಜಮಾಬಂದಿ ಅಧಿಕಾರಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಬಳಿ ತಮ್ಮ ಅಹವಾಲನ್ನು ತೊಡಿಕೊಂಡರು.

    ಈ ಬಗ್ಗೆ ಮಾಹಿತಿ ನೀಡಿದ ಬಾಯಲ್ ರವರು ಈ ಹಿಂದೆ ಇದ್ದ ಕೆಲವು ಸಮಸ್ಯೆಗಳನ್ನು ಸರಿಪಡಿಸಲು ಹೊಸ ತಂತ್ರಾಂಶಗಳ ಮೂಲಕ ಈ ಸ್ವತ್ತನ್ನು ಜಾರಿಗೊಳಿಸಲಾಗಿದೆ. ಕೆಲವೆ ತಿಂಗಳುಗಳಲ್ಲಿ ಈ ಸಮಸ್ಯೆ ಬಗೆಹರಿಯಲಿದೆ ಎಂದರಲ್ಲದೆ, ಬಸವ ವಸತಿ ಸೇರಿದಂತೆ ಯಾವಾವ ವಸತಿ ಯೋಜನೆಗಳ ಹಣ ಬಾಕಿ ಇರಿಸಲಾಗಿದೆ ಅದರ ಬಗ್ಗೆ ಸಮಗ್ರ ವರದಿ ನೀಡಿ ಈ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

    ಕೋಟತಟ್ಟು ಗ್ರಾಮಪಂಚಾಯತ್ ಅತ್ಯುತ್ತಮ ಕಾರ್ಯನಿರ್ವಣೆಯ ಪಂಚಾಯತ್ ಎಂಬ ಹೆಗ್ಗಳಿಕೆ ಇದೆ ಆದರೆ ಕೇಂದ್ರ ಅಥವಾ ರಾಜ್ಯ ಸರಕಾರದ ವಿವಿಧ ಪುರಸ್ಕಾರ ಪಡೆಯಲು ಅರ್ಹವಾಗಿದ್ದು ಕೆಲವೊಂದು ತೊಡಕುಗಳನ್ನು ಎದುರಿಸುತ್ತಿದ್ದು ಅದನ್ನು ಮುಂದಿನ ದಿನಗಳಲ್ಲಿ ಸಮರ್ಪಕಗೊಳಿಸಲು ಸೂಚಿಸಿದರು.

    ಪಂಚಾಯತ್ ವ್ಯಾಪ್ತಿಯ ಸಾಕಷ್ಟು ಅರ್ಹ ಫಲಾನುಭವಿ ಕುಟುಂಬಗಳ ರೇಷನ್ ಕಾಡ್೯ ರದ್ಧಿತಯ ಬಗ್ಗೆ ಪಂಚಾಯತ್ ಪ್ರತಿನಿಧಿಗಳು ಸಿ.ಎಸ್. ಪತ್ರೀಕ್ ಬಾಯಲ್ ರ ಬಳಿ ಗಮನ ಸೆಳೆದರು. ಈ ಬಗ್ಗೆ ಅರ್ಹ ಫಲಾನುಭವಿಗಳ ರೇಷನ್ ಕಾಡ್೯ಗಳ ಬಗ್ಗೆ ವಾಡ್೯ ಸಭೆಗಳಲ್ಲಿ ನಿರ್ಣಯ ಕೈಗೊಂಡು ಅರ್ಹ ಅಥವಾ ಅನರ್ಹ ಫಲಾನುಭವಿಗಳ ಬಗ್ಗೆ ನೀವುಗಳೇ ವಿಮರ್ಶಿಸಿ ನಮ್ಮಗೆ ವರದಿ ನೀಡಿ ಪಡಿತರವನ್ನು ರಾಜಮಾರ್ಗದಲ್ಲೆ ಅಂಗಡಿಗೆ ಕೊಂಡ್ಯೋಯುವ ಅಂತಹ ಕಾಡ್೯ ರದ್ದುಗೊಳಿಸುವುದಾಗಿ ಎಚ್ಚರಿಸಿದರು.

    Click here

    Click here

    Click here

    Click Here

    Call us

    Call us

    ಪ್ರತಿ ತಿಂಗಳಿಗೊಮ್ಮೆ ಗ್ರಾಮಸಭೆ ಅಥವಾ ವಾಡ್೯ ಸಭೆಗಳನ್ನು ಆಯೋಜಿಸಬಹುದು ಈ ಮೂಲಕ ಗ್ರಾಮದಲ್ಲಿರುವ ಸಮಸ್ಯೆಗಳಿಗೆ ಮುಕ್ತಿಗಾಣಸಬಹುದಾಗಿದೆ ಎಂದು ಪಂಚಾಯತ್ ಆಡಳಿತ ಕಾರ್ಯವೈಕರಿಯನ್ನು ಸಭೆಯಲ್ಲಿ ಪ್ರಶಂಸಿದರು.

    ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಮಾತನಾಡಿ, ನಮ್ಮ ಪಂಚಾಯತ್‌ಗೆ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಇದೀಗ ಎರಡನೇ ಬಾರಿ ಭೇಟಿ ನೀಡುತ್ತಿದ್ದು ಅವರು ಹಾಕಿ ಕೊಟ್ಟ ಮಾರ್ಗದರ್ಶನದಲ್ಲಿ ಪಂಚಾಯತ್ ಆಡಳಿತ ವ್ಯವಸ್ಥೆಯನ್ನು ಉತ್ತುಂಗಕ್ಕೆ ಕೊಂಡ್ಯೋಯುತ್ತಿದ್ದೇವೆ, ನಮ್ಮ ಪಂಚಾಯತ್ ಗೆ ಈಗಾಗಲೇ ಜಿಲ್ಲೆಯ ಅಥವಾ ಬೇರೆ ಬೇರೆ ಜಿಲ್ಲೆಗಳ ಗ್ರಾಮಪಂಚಾಯತ್ ಪ್ರತಿನಿಧಿಗಳು ಭೇಟಿ ನೀಡುತ್ತಿದ್ದು ಇಲ್ಲಿನ ಆಡಳಿತ ಅಭಿವೃದ್ಧಿ ವೈಕರಿಯನ್ನು ಪ್ರಶಂಸಿದ್ದಾರೆ ಇದು ಕೋಟತಟ್ಟು ಪಂಚಾಯತ್‌ಗೆ ಹೆಮ್ಮೆಯ ವಿಚಾರವಾಗಿದೆ ಎಂದರು.

    ಉಪಾಧ್ಯಕ್ಷೆ ಸರಸ್ವತಿ ಪೂಜಾರಿ,ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

    ಜಮಾಬಂದಿ ನಾಲ್ಕೂರು ಪಂಚಾಯತ್ ಕಾರ್ಯದರ್ಶಿ ಜ್ಯೋತಿ ಶೆಟ್ಟಿ, ವಿವೇಕ ಪದವಿ ಕಾಲೇಜಿನ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸುಬ್ರಹ್ಮಣ್ಯ ಜೆ.  ಜಮಾಬಂದಿ ವರದಿ ಮಂಡಿಸಿದರು. ಜಮಾಬಂದಿ ಕಾರ್ಯಕ್ರಮವನ್ನು ಪಂಚಾಯತ್ ಪಿಡಿಒ ರವೀಂದ್ರ ರಾವ್ ನಿರ್ವಹಿಸಿದರು. ಕಾರ್ಯದರ್ಶಿ ಸುಮತಿ ಅಂಚನ್ ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    8 − 6 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.