Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಪ್ಪಣ್ಣ ಹೆಗ್ಡೆ ಜನ್ಮದಿನ: ಪೈಲೂರು ಶ್ರೀನಿವಾಸ ರಾವ್ ಗೆ ಬಿ.ಅಪ್ಪಣ್ಣ ಹೆಗ್ಡೆ ಕೃಷಿ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಅಪ್ಪಣ್ಣ ಹೆಗ್ಡೆ ಜನ್ಮದಿನ: ಪೈಲೂರು ಶ್ರೀನಿವಾಸ ರಾವ್ ಗೆ ಬಿ.ಅಪ್ಪಣ್ಣ ಹೆಗ್ಡೆ ಕೃಷಿ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬಸ್ರೂರು ಅಪ್ಪಣ್ಣ ಹೆಗ್ಡೆ ಬದುಕು ತೆರೆದ ಪುಸ್ತಕ. ದತ್ತಿನಿಧಿ ವಿತರಣೆಯಲ್ಲಿ ಶ್ರೀ ಸ್ವಾಮಿ ವಿನಾಯಕನಂದಜೀ ಮಹರಾಜ್

    Click Here

    Call us

    Click Here

    ಕುಂದಾಪುರ: ಪ್ರಸಕ್ತ ಆದರ್ಶ ನಾಯಕರ ಹಾಗೂ ವ್ಯಕ್ತಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು, ಸಮಾಜ ಸನ್ಮಾರ್ಗದಲ್ಲಿ ನಡೆಸುವ ನಾಯಕರಿಲ್ಲದೆ ಯುವ ಸಮಾಜಕ್ಕೆ ಉತ್ತಮ ದಾರಿ ತಿಳಿಯದೆ ದಿಕ್ಕು ತಪ್ಪುತ್ತಿದ್ದಾರೆ ಎಂದು ಕಾರ್ಕಳ ಬೈಲೂರು ಶ್ರೀ ರಾಮಕೃಷ್ಣಾಶ್ರಮ ಶ್ರೀ ಸ್ವಾಮಿ ವಿನಾಯಕನಂದಜೀ ಮಹರಾಜ್ ಅಭಿಪ್ರಾಯಪಟ್ಟಿದ್ದಾರೆ.

    ಬಸ್ರೂರು ಅಪ್ಪಣ್ಣ ಹೆಗ್ಡೆ ದತ್ತಿನಿಧಿ ಪ್ರತಿಷ್ಠಾನ ಆಶ್ರಯದಲ್ಲಿ ಬಸ್ರೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆದ ಬಸ್ರೂರು ಅಪ್ಪಣ್ಣ ಹೆಗ್ಡೆ 81 ನೇ ಜನ್ಮ ದಿನಾಚರಣೆ ಮತ್ತು ದತ್ತಿ ನಿಧಿ ವಿತರಣೆಯಲ್ಲಿ ಆಶೀರ್ವಚನ ನೀಡಿ, ಬಸ್ರೂರು ಅಪ್ಪಣ್ಣ ಹೆಗ್ಡೆ ಬದುಕು ತೆರೆದ ಪುಸ್ತಕವಿದ್ದಂತೆ ಎಂದು ಬಣ್ಣಿಸಿದರು. ಸ್ವತಂತ್ರ್ಯ ನಂತರ ಈ ದೇಶ ಉತ್ತಮ ನಾಯಕರ ಅಭಾವ ಎದುರಿಸುತ್ತಿದ್ದು, ಅರ್ಪnews 24KND_1ಣಾ ಮನೋಭಾವ ಬದಲು ದೋಚಿ ತಿನ್ನುವವರೇ ಹೆಚ್ಚಿದ್ದಾರೆ. ಇದರಿಂದ ಆದರ್ಶದ ದಾರಿ ತೋರಿಸುವ ನಾಯಕರಿಲ್ಲದಂತಾಗಿದೆ. ಬರೇ ಬುದ್ದಿ ಬೆಳೆದಿದೆಯೇ ಹೊರತು, ಹೃದಯ ಬೆಳೆದಿಲ್ಲ. ಹೃದಯ ವೈಶಾಲ್ಯತೆಯಿಂದ ಸಮಾಜ ಸನ್ಮಾರ್ಗದಲ್ಲಿ ನಡೆಸುವ ನಾಯಕತ್ವ ಗುಣ ಹುಟ್ಟಿತ್ತದೆ ಎಂದು ಹೇಳಿದರು.

    ಬರೇ ಸ್ವಾರ್ಥವೇ ಎಲ್ಲೆಲ್ಲೂ ತುಂಬಿದ್ದು, ಪಶುಭಾವ, ಜ್ಞಾನ ಬಾವ, ದೈವತ್ವ ಬಾವದಲ್ಲಿ ಪಶು ಭಾವ ಹೋಗಿ, ದೇವತ್ವ ಭಾವ ಬರಬೇಕು. ಜ್ಞಾನ ಭಾವ ಮಾತ್ರ ಬೆಳೆದು, ಹೃದಯ ಭಾವ ಕ್ಷೀಣಿಸುತ್ತಿದೆ. ಪರ ಸುಖ, ಸಹೃದಯ ಮತ್ತು ಸಂಸ್ಕೃತಿ ಮೂಲಕ ಅಪ್ಪಣ್ಣೆ ಹೆಗ್ಡೆ ತಮ್ಮ ಬದುಕನ್ನು ಆದರ್ಶವಾಗಿ ರೂಪಿಸಿಕೊಳ್ಳುವ ಜೊತೆ ಸಾಮಾಜಕ್ಕೂ ಮಾದರಿಯಾಗಿದ್ದಾರೆ ಎಂದು ಹೇಳಿದರು. ಮಣಿಪಾಲ ವಿವಿ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಿಕೊಂಡಿದ್ದರು. ನಾಗರತ್ನ ಅಪ್ಪಣ್ಣ ಹೆಗ್ಡೆ ಇದ್ದರು. ಅಪ್ಪಣ್ಣ ಹೆಗ್ಡೆ ಅವರು ತಮ್ಮ ಮೊಮ್ಮಕ್ಕಳಿಗೆ ಆರ್ಶೀವಾದ ಮಾಡುವ ಮೂಲಕ ತಮ್ಮ 81 ಹುಟ್ಟು ಹಬ್ಬ ಆಚರಿಸಿಕೊಂಡರು.

    ಇದೇ ಸಂದರ್ಭದಲ್ಲಿ ಸುಳ್ಯ ಪೈಲೂರು ಶ್ರೀನಿವಾಸ ರಾವ್ ಅವರಿಗೆ ಬಿ.ಅಪ್ಪಣ್ಣ ಹೆಗ್ಡೆ ಕೃಷಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಬಡ ರೋಗಿಗಳಿಗೆ ವೈದ್ಯಕೀಯ ಸಹಾಯ ಧನ ವಿತರಿಸಲಾಯಿತು. ಬಸ್ರೂರು ಶ್ರೀ ಶಾರದಾ ಕಾಲೇಜ್ ಪ್ರಾಂಶುಪಾಲ ಕೆ.ರಾಧಾಕೃಷ್ಣ ಶೆಟ್ಟಿ ಸ್ವಾಗತಿಸಿದರು. ದೀಕ್ಷಾ ಪ್ರಾರ್ಥಿಸಿದರು. ಬಸ್ರೂರು ಅಪ್ಪಣ್ಣ ಹೆಗ್ಡೆ ದತ್ತಿ ನಿಧಿ ಆಡಳಿತ ವ್ಯವಸ್ಥಾಪಕ ರಾಮಕಿಶನ್ ಹೆಗ್ಡೆ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕ ಹಳ್ನಾಡು ಪ್ರಕಾಶ್‌ಚಂದ್ರ ಶೆಟ್ಟಿ ಮತ್ತು ಅಕ್ಷಯ ಹೆಗ್ಡೆ ನಿರೂಪಿಸಿದರು. ನಿವೇದಿತಾ ಶಾಲೆ ಮುಖ್ಯಶಿಕ್ಷಕ ದಿನಕರ ಆರ್. ಪ್ರಶಸ್ತಿ ಪತ್ರ ವಾಚಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.