Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ʼನಮಾಮಿ ಶಕ್ತಿಚರಣಮ್ʼ ಸಮಾರಂಭ
    ಊರ್ಮನೆ ಸಮಾಚಾರ

    ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ʼನಮಾಮಿ ಶಕ್ತಿಚರಣಮ್ʼ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶ್ರೀ ವೇದಮೂರ್ತಿ ರಾಮಚಂದ್ರ ಭಟ್ಟರ ಸ್ಮರಣಾರ್ಥ ಆರಾಧನೆ ಕಾರ್ಯಕ್ರಮದ ಭಾಗವಾಗಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ತಮ್ಮ ತಾಯಿ-ತಂದೆಯರ ಆಶೀರ್ವಾದವನ್ನು ಪಡೆಯಲು ’ನಮಾಮಿ ಶಕ್ತಿಚರಣಮ್’ ಎಂಬ ಹೆಸರಿನಲ್ಲಿ ಮಾತೃವಂದನಾ ಕಾರ್ಯಕ್ರಮವು ನೆರವೇರಲ್ಪಟ್ಟಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಗಳ ಪಾದ ತೊಳೆದು, ಆರತಿ ಬೆಳಗಿ, ಗೌರವಿಸಿದರು.

    Click Here

    Call us

    Click Here

    ಬಾರ್ಕೂರಿನ ಖ್ಯಾತ ವಾಗ್ಮಿಗಳಾದ ಎನ್. ಆರ್. ದಾಮೋದರ ಶರ್ಮರು ಪೋಷಕರು ಮತ್ತು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ,  ಭಾರತ ದೇಶವನ್ನು ವೇದಗಳು ಮತ್ತು ಇತಿಹಾಸಗಳು ಕರ್ಮದ ನೆಲ, ಧರ್ಮದ ನೆಲ ಹಾಗೂ ಸಾಧನೆಯ ನೆಲವೆಂದು ಕೊಂಡಾಡಿವೆ. ಇಲ್ಲಿ ಜನಿಸುವ ಜನರು ಮೌಲ್ಯಗಳನ್ನೊಳಗೊಂಡ ಭಾವನಾತ್ಮಕ ಜೀವನ ನಡೆಸುತ್ತಾರೆ. ನಮ್ಮ ದೇಶವು ಉತ್ತಮವಾಗಿ ಅಭಿವೃದ್ಧಿ ಹೊಂದಬೇಕಾದರೆ ವಿದ್ಯಾರ್ಥಿಗಳಲ್ಲಿ ಸತ್ಸಂಸ್ಕಾರ ಹಾಗೂ ಉತ್ತಮ ಗುಣಗಳನ್ನು ಬೆಳೆಸುವುದು ಅಗತ್ಯ. ಮಕ್ಕಳಿಗೆ ಭಾರತೀಯ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಸ್ಪಷ್ಟ ಜ್ಞಾನ ನೀಡಬೇಕು.

    ಇತಿಹಾಸವನ್ನು ಅರಿತ ವ್ಯಕ್ತಿಯು ಭವಿಷ್ಯವನ್ನು ದೃಢವಾಗಿ ನಿರ್ಮಿಸಬಹುದು. ಮಕ್ಕಳು ’ಮಾತೃದೇವೋ ಭವ’ ಎಂಬ ಮಹತ್ವದ ಮಾತಿನ ಅರ್ಥವನ್ನು ತಿಳಿದುಕೊಳ್ಳಬೇಕು. ಯಾವ ಮಹತ್ತರ ಸಾಧನೆ ಮಾಡಿದರೂ ಮಗನು ತಾಯಿಗೆ ಮಗನೇ ಆಗಿರುತ್ತಾನೆ. ಮಕ್ಕಳ ಯಶಸ್ಸಿನ ಹಿಂದೆ ತಾಯಿಯ ಪ್ರೋತ್ಸಾಹ ಮತ್ತು ತ್ಯಾಗ ಸದಾ ಇರುತ್ತದೆ. ನಮಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟ ತಾಯಿ ದೇವಿಯಂತೆ ಪೂಜ್ಯಳು. ತಂದೆ-ತಾಯಿಯರಲ್ಲಿ ದೇವರನ್ನು ಕಂಡ ಶ್ರವಣಕುಮಾರನ ಭಕ್ತಿ ನಮಗೆ ಮಾದರಿಯಾಗಿದೆ.

    ಬೀಸುವ ಗಾಳಿ, ನಿಂತಿರುವ ನೆಲ, ತಿನ್ನುವ ಅನ್ನ ಎಲ್ಲದಲ್ಲೂ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು. ಆದ್ದರಿಂದ ಮಕ್ಕಳು ತಮ್ಮ ತಂದೆ-ತಾಯಿಯಲ್ಲಿ ದೇವರನ್ನು ಕಾಣಬೇಕು. ಮಕ್ಕಳ ಸಂತೋಷದಲ್ಲೇ ಅಪ್ಪ-ಅಮ್ಮನ ಸಂತೋಷ ಅಡಗಿದೆ. ಅವರು ತಲೆತಗ್ಗಿಸುವ ಕಾರ್ಯಗಳನ್ನು ಮಾಡಬಾರದು. ಕೆಟ್ಟ ಪ್ರಭಾವಗಳಿಗೆ ಒಳಗಾಗಿ ಜೀವನವನ್ನು ಹಾಳುಮಾಡಿಕೊಳ್ಳಬಾರದು.ಕ್ಷಣಿಕ ಸುಖಕ್ಕಾಗಿ ಶಾಶ್ವತ ಸುಖವನ್ನು ಕಳೆದುಕೊಳ್ಳಬಾರದು. ವಿದ್ಯೆ ನೀಡಿದ ಗುರುಗಳು ಮತ್ತು ಆಶ್ರಯ ನೀಡಿದ ಸಂಸ್ಥೆಯನ್ನು ಎಂದಿಗೂ ಮರೆಯಬಾರದು ಎಂದು ಕಿವಿಮಾತು ನುಡಿದರು.

    ವಿದ್ಯಾರ್ಥಿಗಳು ಹಾಗೂ ಪೋಷಕರು ಸಂಸ್ಥೆಯಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡರು.

    Click here

    Click here

    Click here

    Click Here

    Call us

    Call us

    ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮಿ ಎಮ್., ಶಾಲಾ ಉಪಪ್ರಾಂಶುಪಾಲ ರಾಮ ದೇವಾಡಿಗ ಹಾಗೂ ಎಲ್ಲಾ ಶಿಕ್ಷಕ- ಶಿಕ್ಷಕೇತರ ವೃಂದದವರೂ ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    one × 5 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.