Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟತಟ್ಟು ಪಂಚಾಯತ್ ನೇತೃತ್ವದಲ್ಲಿ ಚಿಟ್ಟಿಬೆಟ್ಟು ಕೊರಗ ಸಮುದಾಯಕ್ಕೆ ಎಂಟು ಮನೆ ಹಸ್ತಾಂತರ
    ಊರ್ಮನೆ ಸಮಾಚಾರ

    ಕೋಟತಟ್ಟು ಪಂಚಾಯತ್ ನೇತೃತ್ವದಲ್ಲಿ ಚಿಟ್ಟಿಬೆಟ್ಟು ಕೊರಗ ಸಮುದಾಯಕ್ಕೆ ಎಂಟು ಮನೆ ಹಸ್ತಾಂತರ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ದುರ್ಬಲರ ಸಮಾಜದ ಏಳಿಗೆಗಾಗಿ ಶ್ರಮಿಸುವ ಕಾರ್ಯ ಭಗವಂತನಿಗೆ ಸಲಿಸುವ ಭಕ್ತಿಯಷ್ಟೆ ಶ್ರೇಷ್ಠವಾದದ್ದು ಎಂದು ಉಡುಪಿ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ಶ್ರೀಪಾದಂಗಳ ನುಡಿದರು.

    Click Here

    Call us

    Click Here

    ಅವರು ಶನಿವಾರ ಕೋಟತಟ್ಟು ಗ್ರಾಮಪಂಚಾಯತ್ ಹಾಗೂ ದಾನಿಗಳಿಂದ ನಿರ್ಮಾಣಗೊಂಡ ಕೋಟತಟ್ಟು ಚಿಟ್ಟಿಬೆಟ್ಟಿನ ಎಂಟು ಗೃಹಗಳ ಲೋಕಾರ್ಪಣಾ ಸಮಾರಂಭ ಆಸರೆ -2026 ಕಾರ್ಯಕ್ರಮದಲ್ಲಿ ಆಶ್ರೀವಚನ ನೀಡಿ ಮಾತನಾಡಿದರು. ಕೊರಗ ಸಮುದಾಯ ಎಂಬ ಕುಲ ಕಸುಬು ಮಾಡಿ ಜೀವನ ಸಾಗಿಸುವ  ಪರಂಪರೆಯ ಮುಗ್ಧ ಜೀವಗಳಿಗೆ ಆಸರೆ ನೀಡಿರುವುದು ಕೋಟತಟ್ಟು ಪಂಚಾಯತ್ ಅತೀ ಶ್ರೇಷ್ಠವಾದ ಕಾಯಕ ಮಾಡಿದೆ, ಅಲ್ಲದೆ ಈ ಕಾರ್ಯದಲ್ಲಿ ಕೈ ಜೋಡಿಸಿಕೊಂಡ ದಾನಿಗಳ ಸಹಕಾರಕ್ಕೆ ಗೌರವ ಸಲ್ಲಿಸಿದ ಸ್ವಾಮೀಜಿ ನಮ್ಮ ಮಠದ ವತಿಯಿಂದ ಐದು ಲಕ್ಷ ರೂಗಳ ದೇಣಿಗೆಯನ್ನು ಘೋಷಿಸಿ ಭಾರತ ವಿಶ್ವಗುರುವಾಗಿ ವಿಶ್ವಮಟ್ಟದಲ್ಲಿ ಆದರ್ಶ ನೀಡುವ ದೇಶವಾಗಲಿ ಎಂದರು.

    ಸಮಾಜಸೇವಕ ಎಚ್. ಎಸ್. ಶೆಟ್ಟಿ ಮಾತನಾಡಿ, ಬದುಕಿನಲ್ಲಿ ಮಾನವೀಯ ಕಾರ್ಯ ಎಂದರೆ ಅದು ಈ ಸಮಾಜಕ್ಕೆ ನೀಡುವ ಕೊಡುಗೆಗಳು ಅದರಲ್ಲಿ ಕೊರಗ ಸಮುದಾಯಕ್ಕೆ ನೀಡಿದ ಕೊರಗು ಅತ್ಯಂತ ಶ್ರೇಷ್ಠವಾದ ಕಾಯಕವಾಗಿದೆ ಎಂದರು.

    ಕೊರಗ ಸಮುದಾಯದ ಮನೆ ನಿರ್ಮಾಣ ಕಾರ್ಯದ ಮಾರ್ಗದರ್ಶಕ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕ ನುಡಿಗಳನ್ನಾಡಿ ಚಿಟ್ಟಿಬೆಟ್ಟು ನನ್ನ ಸ್ವ ಗ್ರಾಮದಲ್ಲಿದೆ ಈ ಹಿಂದೆ ಇದ್ದ ಸ್ಥಿತಿಗೂ ಪ್ರಸ್ತುತ ಸ್ಥಿತಿಗೂ ಅಜಗಜಾಂತರ ವ್ಯತ್ಯಾಸವಿದೆ, ಇಂದು ಈ ಪರಿಸರ ಸ್ವರ್ಗದಂತೆ ಕಂಗೊಳಿಸುತ್ತಿದೆ ಎಂದು ತಮ್ಮ ಪಂಚಾಯತ್ ಸಾರ್ಥಕ್ಯ ಕಂಡ ಹೋರಾಟಗಳನ್ನು ಸಭೆಯಲ್ಲಿ ಗುಣಗಾನಗೈದರು.

    ಈ ಮೊದಲು ಪುತ್ತಿಗೆ ಶ್ರೀಗಳು ಕೊರಗ ಕಾಲೋನಿಯ ಎಂಟು ಮನೆಗಳಿಗೆ ತೆರಳಿ ದೀಪ ಬೆಳಗಿಸಿ ಶುಭಹಾರೈಸಿದರು.

    Click here

    Click here

    Click here

    Click Here

    Call us

    Call us

    ಗಮನ ಸೆಳೆದ ಕಾಂತಾರ ರಿಷಭ್ ಶೆಟ್ಟಿ:
    ಕೊರಗ ಕಾಲೋನಿಗೆ ವಿಶೇಷವಾಗಿ ಖ್ಯಾತ ಚಿತ್ರನಟ ಕಾಂತಾರ ನಾಯಕನಟ ರಿಷಬ್ ಶೆಟ್ಟಿ ಆಗಮಿಸಿ ಮನೆಯನ್ನು ವಿಕ್ಷೀಸಿ   ಕೋಟತಟ್ಟು ಗ್ರಾಮಪಂಚಾಯತ್ ಈ ಮಹತ್ಕಾರ್ಯವನ್ನು ಶ್ಲಾಘಿಸಿದರು. ಕೊರಗ ಸಮುದಾಯವರೊಂದಿಗಿನ ನನ್ನ ಬಾಂಧವ್ಯವನ್ನು ಸ್ಮರಿಸಿ ಕಾಂತಾರ ಚಿತ್ರಕ್ಕೆ ಕೊರಗರ ಡೋಲಿನ ನಾದ ಹಾಗೂ ಆ ಸಮುದಾಯದಪಾತ್ರ ಕೊಡುಗೆಯನ್ನು ಸ್ಮರಿಸಿದ ಅವರು ಕಾಂತಾರದಲ್ಲಿ ನಮ್ಮ ನೆಲ ಜನ ಸಂಸ್ಕ್ರತಿಯ ಮೂಲ ನಿವಾಸಿಗಳ ಬಗ್ಗೆ ಹೆಚ್ಚಿನ ಮಹತ್ವ ನೀಡಿದೆವು, ಕೊರಗ ಸಮುದಾತದ ಬಗೆಗಿನ ಉಡುಪಿ ಪೇಜಾವರ ಶ್ರೀಗಳ ಪಾತ್ರವನ್ನು ಸಭೆಯಲ್ಲಿ ನೆನಪಿಸಿದ ರಿಷಭ್ ಶೆಟ್ಟಿ ಸುಗುಣೇಂದ್ರ ಶ್ರೀಗಳು ಅದೇ ರೀತಿಯ ಕಾರ್ಯನಿರ್ವಹಣೆಯನ್ನು ಕೊಂಡಾಡಿದರು.

    ವೈಭವದ ಮೆರವಣಿಗೆ:
    ಸಭೆಗೂ ಮೊದಲು ರಾಷ್ಟ್ರೀಯ ಹೆದ್ದಾರಿ ಚಿಟ್ಟಿಬೆಟ್ಟು ಸಂಪರ್ಕಿಸುವ ರಸ್ತೆಯಿಂದ ಡೋಲು ವಾದನದ ಮೂಲಕ ಸ್ವಾಮೀಜಿಯವರನ್ನು ಕರೆತರಲಾಯಿತು. ಕೊರಗ ಸಮುದಾಯದ ಮಹಿಳೆಯರು ಬಣ್ಣ ಬಣ್ಣದ ಸೀರೆಯನ್ನುಟ್ಟು ಪುರುಷರು ಪಂಚೆಯಲ್ಲಿ ಭಾಗವಹಿಸಿ ಸಂಭ್ರಮದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

    ದಾನಿಗಳಿಗೆ ಕೃತಜ್ಞತೆ:
    ಕೋಟತಟ್ಟು ಪಂಚಾಯತ್ ಹಮ್ಮಿಕೊಂಡ ಕೊರಗ ಸಮಯದಾಯದ ಮನೆ ನಿರ್ಮಾಣ ಕಾರ್ಯಕ್ಕೆ ಕೈಜೋಡಿಸಿದ ಹಲವಾರು ದಾನಿಗಳನ್ನು ಸಭೆಯಲ್ಲಿ ಗೌರವಿಸಲಾಯಿತು. ಅಲ್ಲದೆ ಸಭೆಯಲ್ಲಿ ನಾಡೋಜ ಡಾ.ಜಿ ಶಂಕರ್,ಶಾಸಕ ಕಿರಣ್ ಕೊಡ್ಗಿ ಸಹಿತ ಹಲವರು ತಮ್ಮ ಹೆಚ್ಚಿನ ದೇಣಿಗೆಯನ್ನು ಘೋಷಿಸಿದರು.

    ಗೀತಾನಂದ ಫೌಂಡೇಶನ್ ಊಟೋಪಚಾರದ ವ್ಯವಸ್ಥೆಯನ್ನು ನೀಡಿತು.ಸಭೆಯಲ್ಲಿ ಆಶ್ರಿತ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸ್ಥಳೀಯ ಸಂಘಸಂಸ್ಥೆಗಳು ಭಾಗಿಯಾದರು.

    ಸಭೆಯ ಅಧ್ಯಕ್ಷತೆಯನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ನಾಡೋಜ ಡಾ. ಜಿ. ಶಂಕರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ ಗಫೂರ್, ಉದ್ಯಮಿಗಳಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು, ಸಂಪತ್ ಕುಮಾರ್ ಶೆಟ್ಟಿ, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್, ಮನೋವೈದ್ಯ ಡಾ.ಪ್ರಕಾಶ್ ತೋಳಾರ್,ಐಟಿಡಿಪಿ ಇಲಾಖೆಯ ವಿಶ್ವನಾಥ್, ಕೋಟತಟ್ಟು ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ ಪೂಜಾರಿ, ಕೊರಗ ಸಮುದಾಯದ ಮುಖಂಡ ಗಣೇಶ್ ಕುಂಭಾಶಿ, ಕೋಟತಟ್ಟು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

    ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಸ್ವಾಗತಿಸಿದರು. ವಿಜಯ ಭಟ್ ಕಡೆಕಾರ್ ವಂದೇ ಮಾತರಂ ಗೀತೆ ಹಾಡಿದರು. ಕಾರ್ಯಕ್ರಮವನ್ನು ಪಂಚಾಯತ್ ಪಿಡಿಒ ರವೀಂದ್ರ ರಾವ್ ನಿರೂಪಿಸಿದರು. ಪಂಚಾಯತ್ ಸದಸ್ಯ ಎಚ್ ಪ್ರಮೋದ್ ಹಂದೆ ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    seventeen − twelve =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.