Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮುನಿಯಾಲು ಶ್ರೀಮನ್ನಾಗಮಂಡಲದಲ್ಲಿ ʼರೈತಪೀಠʼ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಮುನಿಯಾಲು ಶ್ರೀಮನ್ನಾಗಮಂಡಲದಲ್ಲಿ ʼರೈತಪೀಠʼ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮುಂದಿನ ಪೀಳಿಗೆಗೆ ನಾವು ಪರಿಶುದ್ಧ ಪ್ರಕೃತಿಯನ್ನು ಬಿಟ್ಟುಹೋಗಬೇಕು. ಅಂತಹ ಮಹಾನ್‌ ಕಾರ್ಯವನ್ನು ಮುನಿಯಾಲು ಸಂಜೀವಿನಿ ಗೊಧಾಮದ ಮೂಲಕ ರಾಮಕೃಷ್ಣ ಆಚಾರ್ಯರು ಮಾಡುತ್ತಿದ್ದಾರೆ ಎಂದು ಮಹಾರಾಷ್ಟ್ರ ಕೊಲ್ಲಾಪುರ ಸಿದ್ದಗಿರಿ ಮಠದ  ಪೂಜ್ಯಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ನುಡಿದರು.

    Click Here

    Call us

    Click Here

    ಅವರು ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದಲ್ಲಿ ಶುಕ್ರವಾರ ಸಂಜೆ ಶ್ರೀನಿವಾಸ ಸಭಾಮಂಟಪದಲ್ಲಿ ರೈತಪೀಠ ಪ್ರಶಸ್ತಿಯನ್ನು ಪ್ರದಾನ ಸಡಗರದಲ್ಲಿ ಆಶೀರ್ವಚನ ನೀಡಿದರು.

    ಕೃಷಿಯಿಂದಲೇ ದೇಶದ ಭವ್ಯ ಬೆಳವಣಿಗೆ ಸಾಧ್ಯವಿದೆ. ಅದು ಮುಂದಿನ ಅನಿವಾರ್ಯ ಕೂಡ ಆಗಲಿದೆ, ಅಂತಹ ಮಹಾನ್‌ ಕಾರ್ಯಗಳು ನಮ್ಮಿಂದಲೇ ಆರಂಭವಾಗಬೇಕು, ಪ್ರಕೃತಿ ನಾಶ ಮಾಡಿದರೆ, ಮನುಷ್ಯ ನಾಶವಾದಂತೆ. ಪ್ರಕೃತಿ ಚೆನ್ನಾಗಿದ್ದರೆ ನಾವೆಲ್ಲರೂ ಚೆನ್ನಾಗಿದ್ದೇವೆ ಎಂದರ್ಥ.  ಪ್ರಕೃತಿಯನ್ನು ನಾಶ ಮಾಡಿ  ಬೆಳವಣಿಗೆ ಎನ್ನುವುದು ಹುಚ್ಚುತನ. ನಮ್ಮ ಕ್ಷಣಿಕ ಸಂತೋಷಕ್ಕೆ  ಮುಂದಿನ ಪೀಳಿಗೆಗೆ ನಾವೇನು ಕೊಡುಗೆ ನೀಡುತ್ತೇವೆ. ಮಣ್ಣು, ನೀರು, ಗಾಳಿ, ಬೆಂಕಿ, ಆಕಾಶ ಈ ಶುದ್ಧವಾಗಿರಬೇಕು. ಗೋಧಾಮದಲ್ಲಿ  ಕೃಷಿ ಪೂರಕ ಉತ್ತಮ ಚಟುವಟಿಕೆ ನಡೆಯುತ್ತಿರುವುದು.

    ಮಣ್ಣಿನಲ್ಲಿ ಸ್ವಾಯಿಲ್‌ ಕಾರ್ಬನ್‌ ಹೆಚ್ಚಿಸುವ ಕಾರ್ಯ ನಡೆದಾಗ ಅಂತರ್ಜಲ ಉಳಿಯುತ್ತದೆ, ಊರಿನ ಸಮಸ್ಯೆ ಕಾಡುವುದಿಲ್ಲ. ಅದರಿಂದ ಕೃಷಿ ಸಮೃದ್ಧವಾಗುತ್ತದೆ. ರಾಸಾಯನಿಕ ರಸಗೊಬ್ಬರ ಹಾಕಿ ಬೆಳೆಸಿದ ವಿಷಯುಕ್ತ ಆಹಾರಗಳೇ ಭಾರತದ ಜನರ ಬದುಕನ್ನು ನಾಶ ಪಡಿಸುತ್ತಿದೆ. ನಾವೆಲ್ಲ ಊಟ ಮಾಡುವ ಅನ್ನ ಮತ್ತು ನೀರು ಸರಿಯಿಲ್ಲ, ಹಾಗಾಗಿಯೇ ಬಹುತೇಕರ ಬದುಕು ಅತಂತ್ರವಾಗುತ್ತಿದೆ, ಮುಂದೆ ಎಲ್ಲರೂ ಸಾವಯವ ಭತ್ತ ಬೇಸಾಯ ಮತ್ತು ಕೃಷಿಯನ್ನು ಮಾಡಿದಾಗ ನಮ್ಮೇಲ್ಲರ ಬದುಕು ಉಳಿಯುತ್ತದೆ, ಪುರಾತನ ಭತ್ತ ತಳಿಗಳನ್ನು ಉಳಿಸಬೇಕು, ಅದೇ ಅನ್ನವನ್ನು ಉಂಡಾಗ ಮಾತ್ರ ನಮ್ಮ ಜೀವ ಉಳಿಯುತ್ತದೆ, ಮೊದಲು ನಾವೇ ನಮ್ಮ ಆರೋಗ್ಯದ ಬೆಲೆ ತಿಳಿದು ಕಾಪಾಡಬೇಕು, ಮುಂದೆ ಕೃಷಿಯು ಪುನಶ್ಚೇತನವಾಗಲಿದೆ ಎಂದು ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ಹೇಳಿದರು.

    240ಕ್ಕೂ ಹೆಚ್ಚು ಭಾರತೀಯ ಭತ್ತದ ತಳಿಗಳನ್ನು ಸಂರಕ್ಷಣೆ ಮಾಡಿದ ಅಪರೂಪದ ಕೃಷಿಕ ಋಷಿ ಬಿ.ಕೆ.ದೇವರಾಯ ಮಿತ್ತಬಾಗಿಲು ಅವರು ಮೂಡಬಿದರೆ ಎಸ್‌ ಕೆಎಫ್‌ ಸಂಸ್ಥೆ ನೀಡುವ ನೂತನ ಪ್ರಥಮ ರೈತಪೀಠ ಪ್ರಶಸ್ತಿಯನ್ನು ಮುನಿಯಾಲು ಸಂಜೀವಿನಿ ಗೊಧಾಮದಲ್ಲಿ ಶುಕ್ರವಾರ ಸ್ವೀಕರಿದರು.

    Click here

    Click here

    Click here

    Click Here

    Call us

    Call us

    ಮುನಿಯಾಲು ಗೋಧಾಮ ಮತ್ತು ಮೂಡಬಿದರೆ ಎಸ್‌ ಕೆಎಫ್‌ ಸಮೂಹ ಸಂಸ್ಥೆಯ ಸಂಸ್ಥಾಪಕ ಡಾ. ಜಿ.ರಾಮಕೃಷ್ಣ ಆಚಾರ್‌ ಮಾತನಾಡಿ, ತಮ್ಮ ಬದುಕನ್ನೇ ಕೃಷಿ ಕಾಯಕಕ್ಕೆ ಅರ್ಪಿಸಿರುವ ರೈತರ ತ್ಯಾಗ, ಪರಿಶ್ರಮ ಮತ್ತು ರೈತರ ಮಹತ್ವವನ್ನು ಗುರುತಿಸುವ ಮಹತ್ವದ ಉದ್ದೇಶದಿಂದ “ರೈತಪೀಠ” ಎಂಬ ಗೌರವ ಪ್ರಶಸ್ತಿಯನ್ನು ಸ್ಥಾಪಿಸಿ ರೈತರನ್ನು ಗೌರವಿಸುವುದು ನಮ್ಮ ಮುಖ್ಯ ಉದ್ದೇಶ. ನಮ್ಮ ಯುವ ಸಮುದಾಯ ಕೃಷಿಯತ್ತ ಆಕರ್ಷಿತರಾಗಬೇಕು. ಕೃಷಿಯನ್ನೂ ಕೂಡ ಕಾರ್ಪೋರೇಟ್‌ ವ್ಯವಸ್ಥೆಯ ಹಂತಕ್ಕೆ ಬೆಳೆಸಬೇಕು. ಮುನಿಯಾಲಿನ ಗೋಧಾಮ ಎಂಬ ಕೃಷಿಲೋಕವನ್ನು ಕಂಡು ಯುವಕರು ಕೃಷಿಯಲ್ಲಿ ತೊಡಗಿ ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದರು.

    ಮೂಡಬಿದರೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ  ಡಾ. ಎಂ ಮೋಹನ್ ಆಳ್ವ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ರಾಮಕೃಷ್ಣ ಆಚಾರ್ಯರು ಹೊಸತನದ ನಾಗಮಂಡಲವನ್ನು ಮಾಡಿಸಿ ನಾಡಿಗೆ ಮಾದರಿಯಾಗಿದ್ದಾರೆ, ಅನೇಕ ನಾಗಮಂಡಲ ನಡೆದರು ಇದೊಂದು ಕೃಷಿಗೆ ಹೆಚ್ಚು ಆದ್ಯತೆ ನೀಡಿದ ನಾಗಮಂಡಲ. ಕೃಷಿಯನ್ನು ಮುಂದಿನ ಜನಾಂಗಕ್ಕೆ ಆದರ್ಶವಾಗುವಂತೆ ಕೃಷಿ ನಿರಾಶದಾಯಕವಾಗಿಲ್ಲ ಎಂದು ಗೋದಾನದಲ್ಲಿ ನಡೆದಿರುವ ವಿವಿಧ ರೀತಿಯ ಸಮಗ್ರ ಕೃಷಿಗಳೇ ಕಾರಣ. ಮುಂದೆ ಬಹುಜನರನ್ನು ಆಕರ್ಷಿಸುವ ತಾಣವಾಗಿ ಬೆಳೆಯಲಿ. ನಾಗಮಂಡಲದ ಮೂಲಕ ಕೃಷಿ ಕ್ಷೇತ್ರದ  ಬೆಳವಣಿಗೆಗೆ ಈ ಕಾರ್ಯಕ್ರಮ ನಾಂದಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಬೆಳಗಾವಿ ನಿಡಸೋಸಿ ಶ್ರೀ ದುರದುಂಡೀಶ್ವರ ಸಿದ್ಧಸಂಸ್ಥಾನ ಮಠದ ಪೂಜ್ಯಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ  ಡಾ. ಜಿ  ರಾಮಕೃಷ್ಣ ಆಚಾರ್ ಅವರೊಬ್ಬ ವಿಸ್ಮಯ, ಕಡುಬಳೆತನದಲ್ಲಿ ಬೆಳೆದು ಆದರ್ಶ ಪಾಲಿಸಿಕೊಂಡು ಅನುಷ್ಠಾನ ಮಾಡಿಕೊಂಡು, ಕೃಷಿಗೆ ನೆಚ್ಚಿನ ಮಹತ್ವ ನೀಡುತ್ತಾ, ನಾನೊಬ್ಬನೇ ಬೆಳೆಯದೆ ಎಲ್ಲರನ್ನು ಬೆಳೆಸುತ್ತಾ ಸಾದಕರನ್ನು ಗೌರವಿಸಿ ಸಂಸ್ಕೃತಿಯನ್ನು, ಸಂಸ್ಕಾರವನ್ನು ಪ್ರೋತ್ಸಾಹಿಸಿ ನಮ್ಮ ಏನು ಜಗತ್ತಿಗೆ ನೀಡಬೇಕೆಂದು ಎಲ್ಲರೂ ತಮ್ಮ ನಾಗಮಂಡಲ ಕೆಲಸ ಮಾಡುತ್ತಿದ್ದಾರೆ. ರೈತರಿಗೆ ಕೃಷಿಪೀಠ ಅಭಿನಂದನೀಯ ಎಂದರು.

     ಗೋಧಾಮದ ಪ್ರವರ್ತಕ ಡಾ. ಜಿ ರಾಮಕೃಷ್ಣ ಆಚಾರ್ಯ ಅವರ ಸಾಧನೆ ಯಶೋಗಾಥೆಯನ್ನು ದಾಖಲಿಸಿದ ಡಾ. ನರೇಂದ್ರ ರೈ ದೆರ್ಲ ರಚಿಸಿರುವ ” ರೈತಪೀಠ ಇದು ಈ ನೆಲದ ಜ್ಞಾನಪೀಠ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು.

    ಕಾರ್ಕಳದ ಕಾಂಗ್ರೆಸ್‌ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ, ಗೋಧಾಮದ ಪ್ರವರ್ತಕ ಡಾ. ಜಿ. ರಾಮಕೃಷ್ಣ ಆಚಾರ್, ಸವಿತಾ ಆರ್.‌ ಆಚಾರ್, ಪ್ರಜ್ವಲ್‌ ಆರ್.‌ ಆಚಾರ್‌, ಮಂಗಳೂರು ವಿಶ್ವಕರ್ಮ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಹರೀಶ ಆಚಾರ್ಯ ಜಲಕದಕಟ್ಟೆ, ಮಂಗಳೂರು ಎಸ್ ಕೆ ಜಿ ಐ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಪೆರ್ಡೂರು ಉಪೇಂದ್ರ ಆಚಾರ್ಯ, ಬಿ.ಕೆ.ದೇವರಾಯ ಮಿತ್ತಬಾಗಿಲು ದಂಪತಿಗಳು. ಶ್ರೀಮನ್ನಾಗಮಂಡಲ ಸೇವಾ ಸಮಿತಿಯ ಅಧ್ಯಕ್ಷ ದೇವಿ ಪ್ರಸಾದ ಶೆಟ್ಟಿ ಸಾಣೂರುಗುತ್ತು, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಶೆಟ್ಟಿ ಕಾರ್ಕಳ ಉಪಸ್ಥಿತರಿದ್ದರು. ದೇವಿ ಪ್ರಸಾದ ಶೆಟ್ಟಿ ಸಾಣೂರುಗುತ್ತು ಸ್ವಾಗತಿಸಿದರು. ಬಾರ್ಕೂರು ದಾಮೋಧರ ಶರ್ಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    2 × one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.