Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಉಚಿತ ಶಿಕ್ಷಣ: ಪರೀಕ್ಷೆ ಬರೆದ 20,146 ವಿದ್ಯಾರ್ಥಿಗಳು
    alvas nudisiri

    ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಉಚಿತ ಶಿಕ್ಷಣ: ಪರೀಕ್ಷೆ ಬರೆದ 20,146 ವಿದ್ಯಾರ್ಥಿಗಳು

    No Comments
    Facebook Twitter Pinterest LinkedIn WhatsApp Reddit Tumblr Email
    DCIM100GOPROGOPR0063.JPG
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ರಾಜ್ಯದ ನಂ. 1 ಕನ್ನಡ ಮಾಧ್ಯಮ ಶಾಲೆಯಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2026-27ನೇ ಸಾಲಿನ, 6 ರಿಂದ 9ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆಯಲ್ಲಿ 20,146 ವಿದ್ಯಾರ್ಥಿಗಳು ಮೂಡುಬಿದಿರೆಯ ವಿದ್ಯಾಗಿರಿ ಹಾಗೂ ಪುತ್ತಿಗೆ ಆವರಣದಲ್ಲಿ ಭಾನುವಾರ ಹಾಜರಾದರು.

    Click Here

    Call us

    Click Here

    ರಾಜ್ಯಾದ್ಯಂತ ಹಾಗೂ ಕರ್ನಾಟಕದ ಗಡಿ ಪ್ರದೇಶ ಕೇರಳದ ಕಾಸರಗೋಡು, ಮಹಾರಾಷ್ಟ್ರದ ಗಡಿ ಪ್ರದೇಶವೂ ಸೇರಿದಂತೆ 32 ಶೈಕ್ಷಣಿಕ ಜಿಲ್ಲೆಗಳ 23,141 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 20,146 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 6ನೇ ತರಗತಿಗೆ 16,014, 7ನೇ ತರಗತಿಗೆ 1,374, 8ನೇ ತರಗತಿಗೆ 1,983 ಹಾಗೂ 9ನೇ ತರಗತಿಗೆ 775 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದರು. ಬೆಳಗಾವಿ ಜಿಲ್ಲೆಯಿಂದ 7,353 ವಿದ್ಯಾರ್ಥಿಗಳು, ಬಾಗಲಕೋಟೆ ಜಿಲ್ಲೆಯಿಂದ 4,080 ಹಾಗೂ ವಿಜಯಪುರದಿಂದ ಕ್ರಮವಾಗಿ 2,961 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು.

    ಪರೀಕ್ಷಾ ಅರ್ಜಿ ಸಲ್ಲಿಕಾ ವ್ಯವಸ್ಥೆಯು ಕಳೆದ 3 ವರ್ಷದಿಂದ ಪ್ರತಿಭಾನ್ವಿತ ಮಕ್ಕಳನ್ನು ತಲುಪುವ ನಿಟ್ಟಿನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ನಮೂನೆಯನ್ನು ವ್ಯವಸ್ಥೆಗೊಳಿಸಿಲಾಗಿತ್ತು. ಕ್ಯೂಆರ್ ಕೋಡ್ ಸಹಿತವಾಗಿ ವ್ಯವಸ್ಥೆಗೊಳಿಸಿಲಾಗಿತ್ತು.

    ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಅರ್ಜಿ ಸಲ್ಲಿಸಿದ್ದರಿಂದ 5 ಕೇಂದ್ರಗಳಲ್ಲಿ ಪರೀಕ್ಷಾ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. ಆಳ್ವಾಸ್ ವಿದ್ಯಾಗಿರಿ ಹಾಗೂ ಪುತ್ತಿಗೆ ಕ್ಯಾಂಪಸ್‌ನ ಯಶೋಕಿರಣ ಬ್ಲಾಕ್, ಜಗನ್ಮೋಹನ ಬ್ಲಾಕ್, ಕಾಮರ್ಸ್ ಬ್ಲಾಕ್, ಆಳ್ವಾಸ್ ಪದವಿ ಕಾಲೇಜು ಮತ್ತು ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆ ಪ್ರವೇಶ ಪರೀಕ್ಷೆ ನಡೆಸಲಾಗಿದೆ.

    6 ಮತ್ತು 9ನೇ ತರಗತಿಯವರೆಗೆ ಎಲ್ಲಾ ಪಠ್ಯ ವಿಷಯಗಳು ಸೇರಿದಂತೆ ತಾರ್ಕಿಕ ಸಾಮರ್ಥ್ಯ ಆಧಾರಿತವಾಗಿ 150 ಅಂಕಗಳಿಗೆ 2.30 ಗಂಟೆಗಳ ಕಾಲ ಪರೀಕ್ಷೆ ನಡೆದಿದೆ.

    Click here

    Click here

    Click here

    Click Here

    Call us

    Call us

    ಪ್ರಾಥಮಿಕ ಹಂತದಲ್ಲಿ ಒಎಮ್‌ಆರ್ ಆಧಾರಿತ ಬಹು ಆಯ್ಕೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಸ್ಪರ್ಧಾತ್ಮಕ ಪರೀಕ್ಷೆಯಂತೆ ಪ್ರಶ್ನೆ ಪ್ರತ್ರಿಕೆಗಳನ್ನು ಎ, ಬಿ, ಸಿ, ಡಿ, ಇ ಸಿರೀಸ್‌ನಲ್ಲಿ ನೀಡಲಾಗಿದೆ. ವಿದ್ಯಾರ್ಥಿಯ ಚಿಂತನಾ ಸಾಮರ್ಥ್ಯವನ್ನು ಗುರುತಿಸಿದ ನಂತರ, ಸಂಸ್ಥೆ ನಿಗದಿ ಪಡಿಸಿದ ಮಾನದಂಡ ಗಳಿಸಿದವರು ಮುಖ್ಯ ಹಂತಕ್ಕೆ ಆಯ್ಕೆಯಾಗಲಿದ್ದಾರೆ. ಮುಖ್ಯ ಹಂತದಲ್ಲಿ ಬರವಣಿಗೆ ಆಧಾರಿತ ಪರೀಕ್ಷೆ ಇದ್ದು ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ಮತ್ತು ಕೌಶಲ್ಯಗಳನ್ನು ಗಮನಿಸಿ ಸಂದರ್ಶನ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ.

    ಸಂದರ್ಶನ ಹಂತದಲ್ಲಿ ಶಿಕ್ಷಣ ತಜ್ಞರು ಮತ್ತು ವಿಷಯ ತಜ್ಞರಿದ್ದ ತಂಡವನ್ನು ರಚಿಸಲಾಗಿದ್ದು ಖುದ್ದು ತಂಡದ ಮುಖ್ಯಸ್ಥರಾಗಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಸಂದರ್ಶನವನ್ನು ನಡೆಸಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ, ಭಾಷಾ ಸಾಮರ್ಥ್ಯ ಮತ್ತು ಆಳ್ವಾಸ್‌ನ ಕಲಿಕಾ ವ್ಯವಸ್ಥೆಗಳಿಗೆ ಪೂರಕವಾಗಿರುವವರನ್ನು, ಜೊತೆಗೆ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಪಾಲಕರ ಮಕ್ಕಳಿಗೆ, ತಂದೆ ತಾಯಿಯವರನ್ನು ಕಳೆದುಕೊಂಡ ಮಕ್ಕಳಿಗೆ ಸಮಾಜದ ಅತ್ಯಂತ ಹಿಂದುಳಿದ ವರ್ಗಗಳಿಗೆ ವಿಶೇಷ ಆದ್ಯತೆಯನ್ನು ನೀಡಿ ದಾಖಲಾತಿ ವ್ಯವಸ್ಥೆಯನ್ನು ಮಾಡಲಾಗುತ್ತದೆ.

    ಈಗಾಗಲೇ ಕ್ರೀಡಾ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಗಾಗಿ ಪತ್ರಿಕಾ ಪ್ರಕಟಣೆ ನೀಡಿದ್ದು, ಕ್ರೀಡಾ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿಶೇಷ ಆದ್ಯತೆಯನ್ನು ನೀಡಿ ಪ್ರತ್ಯೇಕ ಆಯ್ಕೆ ಶಿಬಿರಗಳನ್ನು ನಡೆಸಿ ಆಯ್ಕೆ ಮಾಡಲಾಗುತ್ತದೆ.

    35,000ಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆಗಮಿಸಿದ್ದರೂ ಬಹಳ ಅಚ್ಚುಕಟ್ಟಿನ ವ್ಯವಸ್ಥೆಯೊಂದಿಗೆ ಪರೀಕ್ಷೆ ನಡೆಸಲಾಯಿತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಆಳ್ವಾಸ್ ಸಂಸ್ಥೆಯ ವತಿಯಿಂದ, ವ್ಯವಸ್ಥಿತ ಶೌಚಾಲಯದೊಂದಿಗೆ ಉಚಿತ ತಂಗುವ ವ್ಯವಸ್ಥೆ ಕಲ್ಪಿಸಲಾಗಿತ್ತು.

    ಕನ್ನಡ ಮಾಧ್ಯಮದ ಉಚಿತ ಶಿಕ್ಷಣ ಸೌಲಭ್ಯದಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಿಕ್ಷಣ ಶುಲ್ಕ, ವಿದ್ಯಾರ್ಥಿನಿಲಯ, ಪಠ್ಯಪುಸ್ತಕ ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಶಾಲಾ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಸ್ಪರ್ಧಾತ್ಮಕವಾದ ಬುದ್ಧಿಮತ್ತೆ ಜತೆಗೆ ಸುಸಂಸ್ಕೃತವಾದ ಮನಸ್ಸನ್ನು ಕಟ್ಟುವ ವಿವಿಧ ಚಟುವಟಿಕೆಗಳನ್ನು ಕಲಿಸಲಾಗುತ್ತದೆ. ಸದ್ಯ ಇಡೀ ಕನ್ನಡ ಮಾಧ್ಯಮ ಶಾಲೆಯಲ್ಲಿ 6ರಿಂದ 10ನೇ ತರಗತಿಯವರೆಗೆ 750ಕ್ಕೂ ಅಧಿಕ ಮಕ್ಕಳಿದ್ದು, ಉಚಿತ ವಸತಿ, ಊಟ ವ್ಯವಸ್ಥೆಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ.

    ಈವರೆಗೆ 10ನೇ ತರಗತಿಯಿಂದ 1,862 ವಿದ್ಯಾರ್ಥಿಗಳು ಮುಗಿಸಿದ್ದು ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ, ವೈದ್ಯಕೀಯ, ಇಂಜಿನಿಯರಿಂಗ್, ಕಾನೂನು ಇನ್ನಿತರ ಪದವಿಗಳೊಂದಿಗೆ ಸಾಧಕ ವಿದ್ಯಾರ್ಥಿಗಳಾಗಿ ಮೂಡಿ ಬಂದಿದ್ದಾರೆ. ವಾರ್ಷಿಕ ಓರ್ವ ವಿದ್ಯಾರ್ಥಿಗೆ ಸಂಸ್ಥೆಯ ವತಿಯಿಂದ 1 ಲಕ್ಷದ 50 ಸಾವಿರ ರೂಪಾಯಿ ವ್ಯಯಿಸಲಾಗುತ್ತಿದ್ದು, ಒಟ್ಟು 10 ಕೋಟಿಗೂ ಮಿಕ್ಕು ಹಣವನ್ನು ಸಂಸ್ಥೆ ವಾರ್ಷಿಕವಾಗಿ ವ್ಯಯಿಸುತ್ತಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    19 + fourteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.