ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲ್ಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಬಸ್ರೂರು ಶ್ರೀ ಶಾರದಾ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿಯ ನೂತನ ಸಂಚಾಲಕರನ್ನಾಗಿ ಅನುಪಮಾ ಎಸ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.
ಫೆ.11 ರಂದು ನಡೆದ ಶ್ರೀಶಾರದಾ ಕಾಲೇಜು ಟ್ರಸ್ಟ್ ರಿ. ಇದರ ಸಭೆಯಲ್ಲಿ ಹಿಂದಿನ ಆಡಳಿತ ಮಂಡಳಿಯ ಸಂಚಾಲಕರಾಗಿದ್ದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನೂತನ ಸಂಚಾಲಕರ ಆಯ್ಕೆ ನಡೆಸಲಾಗಿದೆ.
ಆಡಳಿತ ಮಂಡಳಿಯ ನೂತನ ಸಂಚಾಲಕರಾಗಿ ಆಯ್ಕೆಯಾಗಿರುವ ಅನುಪಮಾ ಎಸ್ ಶೆಟ್ಟಿ ಅವರು, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾಗಿ ಕಾಲೇಜಿನ ಅಭಿವೃಧ್ಧಿಗೆ ಗಣನೀಯ ಸೇವೆ ಸಲ್ಲಿಸಿದ್ದರು. ಅವರು ಪ್ರತಿಷ್ಠಿತ ಬಾಂಡ್ಯ ಎಜುಕೇಶನಲ್ ಟ್ರಸ್ಟ್ನ ಅಧೀನದಲ್ಲಿ ವಕ್ವಾಡಿಯ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಅನುಪಮ ಅವರು ಜಂಟಿ ಕಾರ್ಯನಿರ್ವಾಹಕ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಂಡ್ಯ ಎಜುಕೇಶನಲ್ ಟ್ರಸ್ಟ್ ದತ್ತು ಸ್ವೀಕಾರ ಮಾಡಿರುವ ಕೊಡ್ಲಾಡಿ-ಬಾಂಡ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿಯಲ್ಲಿಯೂ ¸ÁPÀµÀÄÖÖ ಅವರು ಕೊಡುಗೆ ನೀಡಿದ್ದಾರೆ.










