Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದರ್ ತೆರೆಸಾ ಪಿಯು ಕಾಲೇಜು ಶಂಕರನಾರಾಯಣ – ವಾಣಿಜ್ಯ ವಿಭಾಗದ (EBACs/EBAS) ಅತ್ಯುತ್ತಮ ಸಾಧನೆ. ಪ್ರವೇಶಾತಿ ಪ್ರಾರಂಭ
    ಕ್ಯಾಂಪಸ್ ಕಾರ್ನರ್

    ಮದರ್ ತೆರೆಸಾ ಪಿಯು ಕಾಲೇಜು ಶಂಕರನಾರಾಯಣ – ವಾಣಿಜ್ಯ ವಿಭಾಗದ (EBACs/EBAS) ಅತ್ಯುತ್ತಮ ಸಾಧನೆ. ಪ್ರವೇಶಾತಿ ಪ್ರಾರಂಭ

    Updated:21/04/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮದರ್ ತೆರೆಸಾ ಪಿಯು ಕಾಲೇಜು, ಶಂಕರನಾರಾಯಣವು ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದು, ಅಂಕಗಳ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಸಮಾನ ಆದ್ಯತೆ ನೀಡುತ್ತಾ ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರಾಗಿ ರೂಪಿಸುತ್ತಾ ಬರುತ್ತಿದೆ. ಹೊರಗಿನ ಹೋಲಿಕೆಗಳಿಗಿಂತ, ತನ್ನದೇ ಹಿಂದಿನ ಸಾಧನೆಗಳನ್ನು ಮೀರಿಸುವುದೇ ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ ಹಾಗೂ ಪ್ರವೇಶಾತಿ ಸಮಯದಲ್ಲಿ ಅಂಕಗಳ ಮಿತಿ ಇಲ್ಲದೆ ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತಿದ್ದು, ಕಡಿಮೆ ಅಂಕ ಗಳಿಸಿ ಬಂದವರೂ ಕೂಡ ಇಲ್ಲಿ ಉನ್ನತ ಸಾಧನೆ ಮಾಡುವಂತಹ ವಾತಾವರಣವನ್ನು ಕಲ್ಪಿಸಲಾಗುತ್ತದೆ.

    Click Here

    Call us

    Click Here

    ಇಲ್ಲಿನ ವಾಣಿಜ್ಯ ವಿಭಾಗದಲ್ಲಿ EBACs ಹಾಗೂ EBAS ಸಂಯೋಜನೆಗಳು ಲಭ್ಯವಿದ್ದು, ವಿಭಾಗದ ಮುಖ್ಯಸ್ಥರು ಹಾಗೂ ಕಾಲೇಜಿನ ಉಪಪ್ರಾಂಶುಪಾಲರಾದ ಕುಮಾರಿ‌ ಗೀತಾ ಇವರ ನೇತೃತ್ವದಲ್ಲಿ ನುರಿತ ಶಿಕ್ಷಕವೃಂದವನ್ನು ವಿಭಾಗವು ಹೊಂದಿಕೊಂಡಿದೆ. ಈ ಅನುಭವಿ ಉಪನ್ಯಾಸಕರ ಮಾರ್ಗದರ್ಶನದ ಮೂಲಕ ಸಂಸ್ಥೆಯು ವಿದ್ಯಾರ್ಥಿಗಳಲ್ಲಿನ ಸಾಮರ್ಥ್ಯವನ್ನು ಹೊರತೆಗೆದು, ಅವರನ್ನು ರಾಜ್ಯಮಟ್ಟದ ಸಾಧನೆ ಮಾಡುವ ದಿಕ್ಕಿನೆಡೆಗೆ  ಪ್ರೇರೇಪಿಸುತ್ತಿದೆ.

    ಈ ವರ್ಷದ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದ 65 ವಿದ್ಯಾರ್ಥಿಗಳಲ್ಲಿ 64 ಮಂದಿ ತಮ್ಮ ಎಸ್‌ಎಸ್‌ಎಲ್‌ಸಿ ಅಂಕಗಳನ್ನು ಮೀರಿಸಿದ್ದು ವಿಶೇಷವಾಗಿದೆ. ಎಸ್‌ಎಸ್‌ಎಲ್‌ಸಿಯಲ್ಲಿ 46% ಪಡೆದ ವಿದ್ಯಾರ್ಥಿಗಳೂ ಪಿಯುಸಿಯಲ್ಲಿ 76% ಮಟ್ಟ ತಲುಪಿರುವುದು ಗಮನಾರ್ಹ.

    ಒಟ್ಟು 36 ಮಂದಿ ಡಿಸ್ಟಿಂಕ್ಷನ್ (85% ಕ್ಕಿಂತ ಹೆಚ್ಚು) ಪಡೆದಿದ್ದು, ಉಳಿದ ಎಲ್ಲಾ ವಿದ್ಯಾರ್ಥಿಗಳು 70% ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉನ್ನತ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. 14 ಮಂದಿ 95% ಕ್ಕಿಂತ ಹೆಚ್ಚು, 14 ಮಂದಿ 90–95%, 21 ಮಂದಿ 80–90% ಹಾಗೂ ಉಳಿದವರು 70–80% ಅಂಕಗಳನ್ನು ಪಡೆದಿದ್ದಾರೆ.

    ವಿದ್ಯಾರ್ಥಿನಿ ಅಮೂಲ್ಯಾ 595 ಅಂಕಗಳೊಂದಿಗೆ ರಾಜ್ಯದಲ್ಲಿ 6ನೇ, ಜಿಲ್ಲೆಗೆ 4ನೇ ಹಾಗೂ ತಾಲೂಕಿಗೆ 3ನೇ ರ‍್ಯಾಂಕ್ ಗಳಿಸಿದ್ದು , ಪ್ರಗತಿ ಮತ್ತು ರಿಷಿತಾ ತಲಾ 591 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದಿದ್ದಾರೆ. ಅಮೂಲ್ಯಾ ಮತ್ತು ಕ್ಷಮಾ 590 ಅಂಕಗಳೊಂದಿಗೆ ರಾಜ್ಯಕ್ಕೆ 11ನೇ ರ‍್ಯಾಂಕ್ ಪಡೆದರೆ, ಅಭಿನಯಾ ಮತ್ತು ರಾಶಿ ತಲಾ 589 ಅಂಕಗಳೊಂದಿಗೆ ರಾಜ್ಯಕ್ಕೆ 12ನೇ ರ‍್ಯಾಂಕ್ ಗಳಿಸಿದ್ದಾರೆ.

    Click here

    Click here

    Click here

    Click Here

    Call us

    Call us

    ಪಠ್ಯಕ್ರಮದ ಜೊತೆಗೆ ಸಿಎ, ಸಿಎಸ್, ಸಿಎಮ್ಎ ಫೌಂಡೇಶನ್ ತರಬೇತಿ ನೀಡಲಾಗುತ್ತಿದ್ದು, ಕಳೆದ ವರ್ಷ ಫೌಂಡೇಶನ್ ಪರೀಕ್ಷೆಯಲ್ಲಿ ಸಂಸ್ಥೆಯ 9 ವಿದ್ಯಾರ್ಥಿಗಳಲ್ಲಿ 7 ಮಂದಿ ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದಿ ಉತ್ತಮ ಫಲಿತಾಂಶ ಸಾಧಿಸಿದ್ದಾರೆ‌. ಸಾಂಸ್ಕೃತಿಕ, ಕ್ರೀಡೆ ಹಾಗೂ ಅಂತರ್‌ಕಾಲೇಜು ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳ ಸಮಗ್ರ ವಿಕಸನಕ್ಕೂ ಉತ್ತೇಜನ ನೀಡಲಾಗುತ್ತಿದೆ.

    ಕುಂದಾಪುರ ತಾಲೂಕಿನಲ್ಲಿ ಮಿತವಾದ ಶುಲ್ಕದೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸಂಸ್ಥೆಯಾಗಿ ಈ ಕಾಲೇಜು ಪೋಷಕರಲ್ಲಿ ವಿಶ್ವಾಸ ಗಳಿಸಿದೆ. ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವಲ್ಲಿ ಈ ಸಂಸ್ಥೆಯ ಬೋಧನಾ ವಿಧಾನ ಮತ್ತು ಮಾರ್ಗದರ್ಶನ ಪರಿಣಾಮಕಾರಿಯಾಗಿದೆ ಎಂಬ ಅಭಿಪ್ರಾಯವನ್ನು ಅನೇಕ ಪೋಷಕರು ವ್ಯಕ್ತಪಡಿಸುತ್ತಿದ್ದಾರೆ

    ಇದೀಗ 2026–27ನೇ ಸಾಲಿನ ಪ್ರವೇಶ ಪ್ರಾರಂಭವಾಗಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡಿ ಪ್ರವೇಶಾತಿ ಪಡೆಯಲು ಆಹ್ವಾನಿಸಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    5 × two =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.