ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೆದುಳಿಗೆ ನೀಡುವ ಶಿಕ್ಷಣಕ್ಕಿಂತ ಹೃದಯಕ್ಕೆ ನೀಡುವ ಶಿಕ್ಷಣ ಬಹಳ ಮುಖ್ಯವಾಗಿದ್ದು. ಹೃದಯವಂತಿಕೆ ಇರುವ ಮನುಷ್ಯ ಒಳ್ಳೆಯ ವಿದ್ಯಾರ್ಥಿ, ವಿಜ್ಞಾನಿ ಎನ್ನುವ ಯಾವ ಪದವಿಯನ್ನು ಬೇಕಾದರೂ ಪಡೆಯಬಹುದು. ಅಸೂಯೆಯಿಂದ ದೂರವಾಗಿ ದಯಾಗುಣಗಳನ್ನು ಬೆಳಸಿಕೊಳ್ಳುವ ಮೂಲಕ ಉತ್ತಮ ಬದುಕು ರೂಪಿಸಿಕೊಳ್ಳಿ ಎಂದು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ ಹೇಳಿದರು.
ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆ 9ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ದೀಕ್ಷಾ ಅತಿಥಿಗಳನ್ನು ಪರಿಚಯಿಸಿ, ಪ್ರಥ್ವಿ ಸ್ವಾಗತಿಸಿ, ಪ್ರಥ್ವಿನಿ ವಂದಿಸಿ, ಅಭಿಷೇಕ್ ಪ್ರಾರ್ಥಿಸಿ, ನಿಶ್ಮಿತಾ ನಿರೂಪಿಸಿದರು.
















