Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಗೆ ಅಧ್ಯಯನ ಭೇಟಿ
    ಊರ್ಮನೆ ಸಮಾಚಾರ

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಗೆ ಅಧ್ಯಯನ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯಕ್ಷಗಾನ ಸಂಘ ಹಾಗೂ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಉಪ್ಪಿನಕುದ್ರು ಯಕ್ಷಗಾನ ಗೊಂಬೆಯಾಟ ರಂಗಭೂಮಿಗೆ ವಿದ್ಯಾರ್ಥಿಗಳು ಅಧ್ಯಯನ ಭೇಟಿ ನಡೆಸಿದರು.

    Click Here

    Call us

    Click Here

    ಉಪ್ಪಿನಕುದ್ರು ದೇವಣ್ಣ ಪದ್ಮನಾಭ ಕಾಮತ್ ಸ್ಮಾರಕ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ನ ಅಧ್ಯಕ್ಷರಾದ ಭಾಸ್ಕರ ಕೊಗ್ಗ ಕಾಮತ್ ಅವರು ವಿದ್ಯಾರ್ಥಿಗಳಿಗೆ ಗೊಂಬೆಯಾಟ ಕುರಿತು ವಿಸ್ತೃತ ಮಾಹಿತಿ ನೀಡಿದರು. ಕರ್ನಾಟಕದ ಜನಪದ ಕಲಾಪರಂಪರೆಯಲ್ಲಿ ಯಕ್ಷಗಾನ ಗೊಂಬೆಯಾಟವು ವಿಶಿಷ್ಟ ಹಾಗೂ ಅಪರೂಪದ ಸ್ಥಾನವನ್ನು ಪಡೆದಿದೆ. ಸುಮಾರು 12ನೇ ಶತಮಾನದಿಂದಲೇ ಈ ಕಲೆ ಆರಂಭವಾಗಿದೆ ಎಂದು ಹೇಳಲಾಗುತ್ತದೆ.

    ಈ ಕಲೆ ಕೇವಲ ಮನರಂಜನೆಯ ಸಾಧನವಲ್ಲ; ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಜೀವನ ಸತ್ವವನ್ನು ಪ್ರತಿಬಿಂಬಿಸುವ ಅದ್ಭುತ ಕಲಾ ರೂಪವಾಗಿದೆ. ಕಳೆದ 350 ವರ್ಷಗಳಿಂದಲೂ ತೀರ ಅಳಿವಿನಂಚಿನಲ್ಲಿರುವ ಗೊಂಬೆಯಾಟ ಕಲೆಯನ್ನು ನಿರಂತರವಾಗಿ ಆರು ತಲೆಮಾರುಗಳಿಂದ ಮುನ್ನಡೆಸಿಕೊಂಡು ಬರಲಾಗುತ್ತಿದೆ. ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಹಾಗೂ ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ ಮೂಲಕ ಈ ಸತ್ಕಾರ್ಯದಲ್ಲಿ ತೊಡಗಿದ್ದೇವೆ ಎಂದರು.

    ಗೊAಬೆಗಳ ತಯಾರಿಕೆಯಲ್ಲಿ ಕೂಡ ವಿಶಿಷ್ಟ ನೈಪುಣ್ಯತೆಯನ್ನು ಹೊಂದಿದ ಭಾಸ್ಕರ್ ಕಾಮತ್‌ರು ಪಾರಂಪರಿಕ ಮರದ ಗೊಂಬೆಗಳ ಜೊತೆಗೆ ಗಿಳಿ, ಮರಕುಟಿಗ, ನವಿಲು ಮೊದಲಾದ ಹೊಸ ವಿನ್ಯಾಸದ ಗೊಂಬೆಗಳನ್ನು ತಯಾರಿಸುತ್ತಿರುವ ಬಗ್ಗೆ ಹಾಗೂ ಗೊಂಬೆಗಳಿಗೆ ಬಳಸುವ ಬೇಗಡೆಗೆ ವಿಶೇಷ ಹೊಳಪು ಹಾಗೂ ದೀರ್ಘಕಾಲಿಕ ಮೆರುಗು ಬರಲು ಜೇನು ಮೇಣ ಹಾಗೂ ಹಲಸಿನ ಮೇಣವನ್ನು ಮಿಶ್ರಣ ಮಾಡಿ ಬಳಸಲಾಗುತ್ತದೆ ಎಂದರು. ಸಾಮಾನ್ಯವಾಗಿ ಮರದಿಂದ ನಿರ್ಮಿಸಲ್ಪಟ್ಟ ಈ ಗೊಂಬೆಗಳು ಕಲಾವಿದರ ಕೈಚಳಕದಿಂದ ಜೀವಂತ ಪಾತ್ರಗಳಂತೆ ಕಾಣುತ್ತದೆ ಎಂದು ವಿದ್ಯಾರ್ಥಿಗಳಿಗೆ ವಿವರಿಸಿದರು.

    ಯಕ್ಷಗಾನದ ಹೆಜ್ಜೆಗಳು, ನೃತ್ಯ ಭಂಗಿಗಳು ಹಾಗೂ ಅಭಿನಯವನ್ನು ಸೂತ್ರಗಳ ಆಧಾರದಲ್ಲಿ ಗೊಂಬೆಗಳ ಮೂಲಕ ಹೇಗೆ ಪ್ರದರ್ಶಿಸಬಹುದು ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿದರು. ವಿದ್ಯಾರ್ಥಿಗಳಿಗೆ ಸ್ವತ: ಗೊಂಬೆಗಳನ್ನು ನೀಡಿ ಅವುಗಳನ್ನು ಹೇಗೆ ಕುಣಿಸಬಹುದು ಎಂಬುದನ್ನು ಪ್ರಾಯೋಗಿಕವಾಗಿ ತಿಳಿಸಿದರು.

    Click here

    Click here

    Click here

    Call us

    Call us

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ಮಾಹಿತಿ ಪಡೆದ ವಿದ್ಯಾರ್ಥಿಗಳು ನಂತರ ಮ್ಯೂಸಿಯಂಗೆ ಭೇಟಿ ನೀಡಿ ಅಲ್ಲಿ ಇರುವ ಹಳೆಯ ಕಾಲದ ಪಾರಂಪರಿಕ ಯಕ್ಷಗಾನ ಗೊಂಬೆಗಳು, ದೇಶ-ವಿದೇಶಗಳಲ್ಲಿ ಪಡೆದ ಪ್ರಶಸ್ತಿ ಹಾಗೂ ಸನ್ಮಾನಗಳನ್ನು ವೀಕ್ಷಿಸಿದರು. ಇದೇ ಸಂದರ್ಭ ಅವರು ಪ್ರತಿ ತಿಂಗಳು ಪ್ರತಿಭಾವಂತರಿಗೆ ವೇದಿಕೆಯನ್ನು ಒದಗಿಸುವ ಮೂಲಕ ಹೊಸ ಕಲಾವಿದರನ್ನು ಪ್ರೋತ್ಸಾಹಿಸುವ ಬಗ್ಗೆ ತಿಳಿಸಿದರು. ಅಪರೂಪದ ಗೊಂಬೆಯಾಟ ಕಲೆಯನ್ನು ಉಳಿಸಲು ದೊಡ್ಡ ಮಟ್ಟದ ನೆರವನ್ನು ನೀಡುತ್ತಿರುವ ಇನ್ಫೋಸಿಸ್ ಫೌಂಡೇಶನ್ ಡಾ. ಸುಧಾ ಮೂರ್ತಿ ಹಾಗೂ ಇತರರ ಸಹಕಾರವನ್ನು ಸ್ಮರಿಸಿದರು.

    ಅಧ್ಯಯನ ಭೇಟಿಯ ಸಂದರ್ಭ ಗೀತಾಂಜಲಿ ಭಾಸ್ಕರ್ ಕಾಮತ್, ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಯಕ್ಷಗಾನ ಸಂಘದ ಸಂಯೋಜಕರಾದ ರಶ್ಮಿತಾ ಶೆಟ್ಟಿ ಮತ್ತು ಮಹೇಶ್ ಪೂಜಾರಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 40ನೇ ಸಂಸ್ಥಾಪನಾ ದಿನಾಚರಣೆ

    15/07/2026

    ಸಿ.ಎಂ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

    15/07/2026

    ಕಲಾವಿದರಿಗೆ ಅವಕಾಶ ಕಲ್ಪಿಸಿಕೊಡುವ ಉಭಯ ಸಂಸ್ಥೆಗಳ ಕಾಯಕ ಅರ್ಥಾಂಕುರ ಜನಮನ್ನಣೆ ಗಳಿಸಿದೆ: ತಾರಾನಾಥ ಹೊಳ್ಳ

    15/07/2026
    Leave A Reply Cancel Reply

    thirteen − 6 =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 40ನೇ ಸಂಸ್ಥಾಪನಾ ದಿನಾಚರಣೆ
    • ಸಿ.ಎಂ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ
    • ಮಹಿಳೆಯರ ಸಬಲೀಕರಣದಿಂದಲೇ ಕುಟುಂಬ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ: ಪ್ರಣಮ್ಯ ಭಟ್
    • ಕಲಾವಿದರಿಗೆ ಅವಕಾಶ ಕಲ್ಪಿಸಿಕೊಡುವ ಉಭಯ ಸಂಸ್ಥೆಗಳ ಕಾಯಕ ಅರ್ಥಾಂಕುರ ಜನಮನ್ನಣೆ ಗಳಿಸಿದೆ: ತಾರಾನಾಥ ಹೊಳ್ಳ
    • ಸೀನಿಯರ್ ಛೆಂಬರ್ ಇಂಟರ್ ನ್ಯಾಷನಲ್ ಕೋಟ ಲಿಜನ್ ಪದಪ್ರದಾನ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.