Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕುಂದಾಪುರ ಶಾಸಕರ ಜನಸಂಪರ್ಕ ಸಭೆ ಸ್ವಾಗತಾರ್ಹ ಆದರೆ ಕಳೆದ ಮೂರು ವರ್ಷಗಳಿಂದ ಶಾಸಕ ಸ್ಥಾನದಲ್ಲಿರುವ ಕಿರಣ್ ಕುಮಾರ್ ಕೊಡ್ಗಿ ಅವರು ಸ್ಥಳೀಯ ಸಂಸ್ಥೆಯ ಜನಪ್ರತಿನಿದಿನಗಳ ಅಧಿಕಾರವಧಿ ಮುಗಿದ ಮೇಲೆ ಈಗ ಗ್ರಾಮಗಳಲ್ಲಿ ಹೋಗಿ ಜನಸಂಪರ್ಕ ಸಭೆ ನಡೆಸುತ್ತಿರುವುದು ಅಧಿಕಾರ ವೀಕೆಂದ್ರಿಕರಣದ ವಿರೋಧಿ ಮನಸ್ಥಿತಿಯ ಭಾಗವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಟೀಕಿಸಿದ್ದಾರೆ.

    Click Here

    Call us

    Click Here

    ನಿರಂತರ ರಾಜ್ಯ ಸರ್ಕಾರವನ್ನು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಾ ಸುಮಾರು ಮೂರು ವರ್ಷಗಳ ಅಧಿಕಾರ ಕಳೆದ ಕುಂದಾಪುರದ ಮಾನ್ಯ ಶಾಸಕರು ಈಗ ಸರ್ಕಾರಿ ಅಧಿಕಾರಿಗಳನ್ನು ಇಟ್ಟುಕೊಂಡು ಗ್ರಾಮ ಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸುತ್ತಿರುವುದು ಕೇವಲ ರಾಜಕಾರಣದ ಒಂದು ಭಾಗವಾಗಿದೆ. ಕೇವಲ ಅನುದಾನ ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರವನ್ನು ಟೀಕಿಸುವ ಶಾಸಕರು ಜನಸಾಮಾನ್ಯರಿಗೆ ಪೆಟ್ರೋಲ್, ಡಿಸೇಲ್ ಮತ್ತು ಗ್ಯಾಸ್ ಬೆಲೆ ಏರಿಕೆಯ ಬಗ್ಗೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಬಗ್ಗೆ ಕೂಡ ಉತ್ತರವನ್ನು ನೀಡಬೇಕು. ಇವತ್ತು ಒಂದು ಕಡೆಯಲ್ಲಿ ರಾಜ್ಯ ಸರ್ಕಾರ ಅನುದಾನ ಕೊಡುತ್ತಿಲ್ಲ ಸರ್ಕಾರ ದಿವಾಳಿಯಾಗಿದೆ ಎನ್ನುವ ಶಾಸಕರು ಮತ್ತೊಂದು ಕಡೆ ಬೇರೆ ಬೇರೆ ಇಲಾಖೆಯಿಂದ ಕುಂದಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಆದ ಅಭಿವೃದ್ಧಿ ಕಾಮಗಾರಿಗಳಿಗೆ ಎಲ್ಲಿಂದ ಅನುದಾನ ಬಂದಿದೆ ಎನ್ನುವುದನ್ನು ಕೂಡ ಸಾರ್ವಜನಿಕವಾಗಿ ಉತ್ತರಿಸಬೇಕು.

    ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ಹೆದ್ದಾರಿ ಸಮಸ್ಯೆ, ರೈಲ್ವೆ ಬೇಡಿಕೆಗಳು, ಸಿ ಆರ್ ಝೆಡ್ ಮರಳುಗಾರಿಕೆಗೆ ಇರುವ ಅಡೆತಡೆಗಳು, ಪೆಟ್ರೋಲ್, ಡಿಸೇಲ್, ಗ್ಯಾಸ್ ಪೂರೈಕೆಯಲ್ಲಿನ ವ್ಯತ್ಯಯಗಳನ್ನು ಮಾನ್ಯ ಸಂಸದರ ಮೂಲಕ ಬಗೆಹರಿಸುವ ಪ್ರಯತ್ನ ಮಾಡಬೇಕು. ಮತ್ತು ಇವತ್ತಿನ ಜನಸಂಪರ್ಕ ಸಭೆಯನ್ನು ಗ್ರಾಮ ಪಂಚಾಯತ್ ನಲ್ಲಿ ಜನಪ್ರತಿನಿದಿನಗಳ ಆಡಳಿತವಿರುವಾಗ ಮಾಡಿದ್ದರೆ ರಾಜಕೀಯ ರಹಿತವಾಗಿರುವ ಗ್ರಾಮ ಪಂಚಾಯತ್ ಗಳಲ್ಲಿ ಜನರಿಂದ ಆಯ್ಕೆಯಾದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿದಿನಗಳಿಗೆ ಅವರನ್ನು ಆಯ್ಕೆ ಮಾಡಿದ ಜನರ ಆಶೋತ್ತರಗಳಿಗೆ ಸರ್ಕಾರದ ಭಾಗವಾಗಿರುವ ಶಾಸಕರ ಉಪಸ್ಥಿತಿಯಲ್ಲಿ ಸ್ಪಂದಿಸುವ ಅವಕಾಶ ಸಿಗುತ್ತಿತ್ತು. ಆದರೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿದಿನಗಳ ಅಧಿಕಾರವಧಿ ಮುಗಿದ ಮೇಲೆ ಈಗ ಶಾಸಕರು ನಡೆಸುತ್ತಿರುವ ಜನಸಂಪರ್ಕ ಸಭೆ ಅವರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಟೀಕಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    24/07/2026

    ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್‌ ವಿತರಣೆ

    24/07/2026

    ಆನೆಗುಡ್ಡೆ ದೇಗುಲಕ್ಕೆ ಎಡನೀರು ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳ ಭೇಟಿ

    24/07/2026
    Leave A Reply Cancel Reply

    six − 1 =

    Call us

    Click Here

    Call us

    Call us

    Call us
    Highest Viewed Recently
    • ಕಲಾ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಊರಿನ ಜೀವಂತಿಕೆ ಅಡಗಿದೆ – ಗಮ್ಮತ್ತ್‌ ಪೋಸ್ಟರ್‌ ಅನಾವರಣಗೊಳಿಸಿ  ಓಂ ಗಣೇಶ್‌ ಉಪ್ಪುಂದ
    • ನಾಳೆ (ಜುಲೈ 25) ಉಡುಪಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
    • ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್‌ ವಿತರಣೆ
    • ಆನೆಗುಡ್ಡೆ ದೇಗುಲಕ್ಕೆ ಎಡನೀರು ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳ ಭೇಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.