ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ, ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದೆ. ಇದರಿಂದ ಸಾಕಷ್ಟು ಸಮಸ್ಯೆಗಳನ್ನು ಈಗಾಲೇ ಎದುರಿಸುತ್ತಿದ್ದೇವೆ. ಈ ದಿಸೆಯಲ್ಲಿ ಪಂಚವರ್ಣ ಈ ಹಸಿರು ಹೆಜ್ಜೆ ಗ್ರಾಮೀಣ ಭಾಗಗಳಲ್ಲಿ ಮೇಳೈಸಿಕೊಂಡಿದೆ ಎಂದು ಕೋಡಿ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಅಭಿಪ್ರಾಯಪಟ್ಟರು.
ಅವರು ಶುಕ್ರವಾರ ಕೋಡಿ ಗ್ರಾಮಪಂಚಾಯತ್ ನೇತೃತ್ವದಲ್ಲಿ ಕೋಟದ ಪಂಚವರ್ಣ ಸಂಘಟನೆ,ಗೀತಾನಂದ ಫೌಂಡೇಶನ್ ಮಣೂರು ಮಾರ್ಗದರ್ಶನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ,ಸಂಜೀವಿನಿ ಒಕ್ಕೂಟ ಕೋಡಿ ಪಂಚಾಯತ್ ,ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರ ಸಹಯೋಗದೊಂದಿಗೆ ಮೂರನೇ ವರ್ಷದ ಹಸಿರು ಹೆಜ್ಜೆ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಾತಾವರಣದ ವ್ಯತ್ಯಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಇದರ ಪರಿಣಾಮದಿಂದ ಬಿಸಿ ಗಾಳಿ,ಮಳೆಯ ಪ್ರಮಾಣ ಕಡಿತಗೊಂಡಿದೆ ಹೀಗಿರುವಾಗ ಪ್ರತಿ ಗ್ರಾಮ ವ್ಯಾಪ್ತಿಯಲ್ಲಿ ಹಸಿರು ಅಭಿಯಾನ ಕೈಗೊಂಡರೆ ಪರಿಸರ ಮತ್ತೆ ಸಮತೋಲನ ಕಾಣಲಿದೆ ಇದರಿಂದ ಮುಂದಿನ ಜನಾಂಗಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ ಎಂದು ಕೋಡಿ ಪಂಚಾಯತ್ ಹಸಿರು ಹೆಜ್ಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹಸಿರು ಹೆಜ್ಜೆ ಕಾರ್ಯಕ್ರಮದ ಸಂಯೋಜಕ ಪಂಚವರ್ಣದ ರವೀಂದ್ರ ಕೋಟ ಕಾರ್ಯಕ್ರಮದ ರೂಪುರೇಷೆಗಳನ್ನು ಸಭೆಗೆ ತಿಳಿಸಿದರು. ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಗಿಡವನ್ನು ನೆಡಲಾಯಿತು.
ಇದೇ ವೇಳೆ ಪಿಡಿಒ ರವೀಂದ್ರ ರಾವ್ ಪ್ರತಿಜ್ಞಾವಿಧಿಯನ್ನು ಮಕ್ಕಳಿಗೆ ನೆರೆದಿದ್ದವರಿಗೆ ಭೋದಿಸಿದರು.
ಕಾರ್ಯಕ್ರಮದಲ್ಲಿ ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸದಸ್ಯ ಕೇಶವ ಆಚಾರ್, ಕೋಡಿ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಪ್ರಭಾಕರ್ ಮೆಂಡನ್, ಗೀತಾ ಖಾರ್ವಿ, ಮಾಜಿ ಸದಸ್ಯರಾದ ಅಂತೋನಿ ಡಿಸೋಜ,ಕೃಷ್ಣ ಪೂಜಾರಿ ಪಿ., ಸತೀಶ್ ಕುಂದರ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮಾ, ಎಂಬಿಕೆ ಅನಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಯಮುನಾ ಎಲ್ ಕುಂದರ್, ಕೋಡಿಕನ್ಯಾನ ಪ್ರೀತಿ ಎಸ್, ಕೋಡಿ ಲೀಲಾವತಿ, ಕೋಡಿತಲೆ ನಿರೋಷ, ಕೋಡಿ ಶಾಲಾ ಮುಖ್ಯ ಶಿಕ್ಷಕಿ ಸಂಪಾ ಟೀಚರ್ ಸೇರಿದಂತೆ ಅನೇಕರು ಇದ್ದರು.

















