ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಕೃತಕ ಕಾಲುಗಳನ್ನು ವಿತರಿಸಲಾಯಿತು.

ಶಾಸಕರ ಕಚೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಫಲಾನುಭವಿಗಳಿಗೆ ಕೃತಕ ಕಾಲು ವಿತರಿಸಿದರು.
ಈ ಸಂದರ್ಭದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳಾದ ಶಿವಾಜಿ, ಜೇನಿಸ್ ಮತ್ತು ಪ್ರದೀಪ್ ಉಪಸ್ಥಿತರಿದ್ದರು.











