Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಬೇತಿ
    ಊರ್ಮನೆ ಸಮಾಚಾರ

    ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಬೇತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ
    : ಯಕ್ಷಗಾನ ಕಲಿಕೆಯು ವ್ಯಕ್ತಿತ್ವ ವಿಕಸನಕ್ಕೆ ದಾರಿದೀಪ ಇಂತಹ ಯಕ್ಷಗಾನವನ್ನು ಮಕ್ಕಳಿಗೆ ಕಲಿಸುವುದರಿಂದ ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳನ್ನು ಕಾಣಿಕೆಯಾಗಿ ನೀಡಬಹುದಾಗಿದೆ ಎಂದು ಯಕ್ಷಗಾನ ಕಲಾಕೇಂದ್ರ ಹಂಗರಕಟ್ಟೆಯ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಇತ್ತೀಚಿಗೆ ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆ, ವಿವೇಕ ಪದವಿಪೂರ್ವ ಕಾಲೇಜು ಹೈಸ್ಕೂಲ್ ವಿಭಾಗ, ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ನಡೆದ ಯಕ್ಷ ಶಿಕ್ಷಣ ಟ್ರಸ್ಟ್, ಉಡುಪಿ ಇವರು ಏರ್ಪಡಿಸುವ ಯಕ್ಷಗಾನ ತರಬೇತಿಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

    ಇದೇ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್ ಅವರು ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯ ಚಟುವಟಿಕೆಗಳ ಬಗ್ಗೆ ಸ್ಥೂಲ ಪರಿಚಯ ನೀಡಿ ವಿದ್ಯಾರ್ಥಿಗಳು ಇದರಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿದರು.

    ವಿವೇಕ ಪದವಿಪೂರ್ವ ಕಾಲೇಜಿನ ಹಿಂದಿನ ವಿದ್ಯಾರ್ಥಿಯಾದ ಎಸ್ ವಿಶ್ವೇಶ್ವರ ಭಟ್ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ ನಾವಡ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಮಕ್ಕಳ ಬೌದ್ಧಿಕ ಹಾಗೂ ಮಾನಸಿಕ ವಿಕಾಸಕ್ಕೆ ಪೂರಕವಾಗಿದೆ ಹಾಗೂ ಇದೇ ಧ್ಯೇಯ ವಾಕ್ಯದೊಂದಿಗೆ ನಮ್ಮ ಸಂಸ್ಥೆ ನಡೆದು ಬಂದಿದೆ ಎಂದು ಅಭಿಪ್ರಾಯಪಟ್ಟರು.

    Click here

    Click here

    Click here

    Click Here

    Call us

    Call us

    ಇದೇ ಸಂದರ್ಭದಲ್ಲಿ ಮೂರು ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣವನ್ನು ಒದಗಿಸುತ್ತಿರುವ  ನರಸಿಂಹ ತುಂಗರನ್ನು ಗೌರವಿಸಲಾಯಿತು.

    ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಪ್ರೀತಿರೇಖಾ ಉಪಸ್ಥಿತಿಯಲ್ಲಿ ವಿವೇಕ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ ಉಡುಪ ಸ್ವಾಗತಿಸಿದರೆ, ವಿವೇಕ ಪದವಿ ಪೂರ್ವ ಕಾಲೇಜು, ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕರಾದ  ಪ್ರೇಮಾನಂದ ಧನ್ಯವಾದಗೈದರು. ವಿವೇಕ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಂದ ಯಕ್ಷಗಾನಪೂರ್ವ ರಂಗದ ಬಾಲ ಗೋಪಾಲದೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ಶಿಕ್ಷಕಿ ಮಹಾಲಕ್ಷ್ಮಿಎಂಪಿ ನಿರೂಪಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿದ್ಯಾರಣ್ಯ ಅಂಗಳದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ-9’ ಭರತನಾಟ್ಯ ಪ್ರಾತ್ಯಕ್ಷಿಕೆ

    27/06/2026

    ಬೈಂದೂರು: ಸೈಂಟ್ ಥಾಮಸ್ ಶಾಲೆಯಲ್ಲಿ ವಿದ್ಯಾರ್ಥಿ ಸಚಿವ ಸಂಪುಟ ಪದಗ್ರಹಣ ಸಮಾರಂಭ

    27/06/2026

    ಸಂಸದರು ವಾರಾಹಿ ನೀರಾವರಿ ಯೋಜನೆಯ ವಾಸ್ತವ ಅರಿತು ಮಾತನಾಡಲಿ: ಕೆ. ವಿಕಾಸ್ ಹೆಗ್ಡೆ

    27/06/2026
    Leave A Reply Cancel Reply

    17 − sixteen =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ
    • ಸ್ತ್ರೀ ಸೃಜನಶೀಲತೆ ಸಮಾಜದ ಅಂತರಂಗವನ್ನು ಬೆಳಗಿಸುವ ಶಕ್ತಿ: ಡಾ. ಎಂ. ಮೋಹನ್ ಆಳ್ವ
    • ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಬೇತಿ
    • ವಿದ್ಯಾರಣ್ಯ ಅಂಗಳದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ-9’ ಭರತನಾಟ್ಯ ಪ್ರಾತ್ಯಕ್ಷಿಕೆ
    • ಬೈಂದೂರು: ಸೈಂಟ್ ಥಾಮಸ್ ಶಾಲೆಯಲ್ಲಿ ವಿದ್ಯಾರ್ಥಿ ಸಚಿವ ಸಂಪುಟ ಪದಗ್ರಹಣ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.