Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಯುವಜನತೆಯು ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸುವ ಸಲುವಾಗಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರಿ. ಕಾರ್ಕಳ ನಗರ ವಲಯ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆರಿ., ಕಾರ್ಕಳ ತಾಲೂಕು ಹಾಗೂ ಕಾರ್ಕಳ ನಗರ ಆರಕ್ಷಕ ಠಾಣೆ ಮತ್ತು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳದ ಜಂಟಿ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಎಂಬ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಕಾರ್ಕಳ ನಗರ ವಲಯದ ಪೊಲೀಸ್ ಉಪನಿರೀಕ್ಷಕರಾದ ಶಿವಕುಮಾರ್ ಎಸ್.ಆರ್. ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಬದುಕಿನ ಅದಃಪತನಕ್ಕೆ ಕಾರಣವಾಗುತ್ತದೆ. ಯುವ ಜನತೆ ದೇಶಕ್ಕೆ ಶಕ್ತಿಯಾಗಿ ಪೂರಕವಾಗಬೇಕೇ ವಿನಹ ಮಾರಕವಾಗಬಾರದು ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವವರ ವಿರುದ್ಧ ಕಾನೂನಾತ್ಮಕವಾಗಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಸಮಾಜದಲ್ಲಿ ಇಂತಹ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಭಯಭೀತಿ ಇಲ್ಲದೆ ಮುಕ್ತವಾಗಿ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕ್ರಿಯೇಟಿವ್ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ಮಾತನಾಡಿ, ಬದುಕು ಅತ್ಯಂತ ಅಮೂಲ್ಯವಾದದ್ದು. ದುಶ್ಚಟಗಳಿಗೆ ದಾಸರಾಗದೆ ಆ ಬದುಕನ್ನು ನಡೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕು. ಈ ನಿಟ್ಟಿನಲ್ಲಿ ಬದುಕನ್ನು ಹಸನಾಗಿಸಬೇಕು ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.

    ಕಾರ್ಯಕ್ರಮದ ವೇದಿಕೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಗಣನಾಥ್ ಶೆಟ್ಟಿ ಬಿ., ಡಿವೈಎಸ್ಪಿ ವಿಜಯಕುಮಾರ್ ವೃಷಭರಾಜ್ ಜೈನ್, ಬಾಲಕೃಷ್ಣ ಹಿರಿಂಜ, ವಾಸು ಶೆಟ್ಟಿ, ಕರುಣಾಕರ್ ಕಡಂಬ, ಸುಭಾಷ್ ಪೂಜಾರಿ, ಗೀತಾ ಹೆಗ್ಡೆ, ಸುಜಯ ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಉಪನ್ಯಾಸಕ ಲಕ್ಷ್ಮಿಕಾಂತ್ ನಡೆಸಿಕೊಟ್ಟರು. ಗೀತಾ ಧನ್ಯವಾದ ಗೈದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳದ ವತಿಯಿಂದ ದುಶ್ಚಟಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಆನ್ಲೈನ್ ಜನಜಾಗೃತಿ ಕಾರ್ಯಕ್ರಮ ನಡೆಯಿತು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆ

    01/07/2026

    ಕರ್ನಾಟಕ ಸಂಘ ಶಾರ್ಜಾ: ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಅಧಿಕಾರ ಸ್ವೀಕಾರ

    01/07/2026

    ಆಸಕ್ತಿ ಮತ್ತು ವೃತ್ತಿಯ ನಡುವೆ ಸಮತೋಲನ ಅಗತ್ಯ: ಯುವಜನತೆಗೆ ನಮೃತಾ ಮೋಹನ್ ಕಿವಿಮಾತು

    01/07/2026
    Leave A Reply Cancel Reply

    thirteen − seven =

    Call us

    Click Here

    Call us

    Call us

    Call us
    Highest Viewed Recently
    • ಕ್ರಿಯೇಟಿವ್ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆ
    • ಕರ್ನಾಟಕ ಸಂಘ ಶಾರ್ಜಾ: ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಅಧಿಕಾರ ಸ್ವೀಕಾರ
    • ಆಸಕ್ತಿ ಮತ್ತು ವೃತ್ತಿಯ ನಡುವೆ ಸಮತೋಲನ ಅಗತ್ಯ: ಯುವಜನತೆಗೆ ನಮೃತಾ ಮೋಹನ್ ಕಿವಿಮಾತು
    • ಬೈಂದೂರು: ಮಾದಕ ವ್ಯಸನ ವಿರೋಧಿ ಜಾಗೃತಿ ರ‍್ಯಾಲಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.