ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದದ ಉಪಪ್ರಾಂಶುಪಾಲರಾದ ಕೃಷ್ಣಮೂರ್ತಿ ಪಿ.ಕೆ. ಮಾತನಾಡಿ, “ಪುರಾಣ ಪುರುಷರು ನಡೆದಾಡಿದ ಈ ನೆಲದಲ್ಲಿ ಉಸಿರಾಡಿದ ಈ ಪರಿಸರದಲ್ಲಿ ವಿದ್ಯಾರ್ಥಿಗಳು ಘನ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸಾಧಕರಾಗಿ ಬೆಳೆಯಬೇಕು” ಎಂದು ನುಡಿದರು.

ಕಾಲೇಜಿನ ಹಿರಿಯ ವಿಶ್ವಸ್ಥರಾದ ದೇವದಾಸ ಕಾಮತ್ ಸಭೆಯನ್ನುದ್ದೇಶಿಸಿ ಕಣ್ಣಿಗೆ ಕಾಣುವ ದೇವರು ತಾಯಿ ತಂದೆ, ಸತತ ಪರಿಶ್ರಮ, ಪ್ರಯತ್ನದಿಂದ ವಿದ್ಯಾರ್ಥಿ ಗಳು ಸಾಧಕರಾಗಿ ಬೆಳೆಯಿರಿ ಎಂದು ಹಿತನುಡಿಗಳನ್ನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜಾ ಎಂ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಹಳೆ ವಿದ್ಯಾರ್ಥಿ ಸಿಎ ಪರೀಕ್ಷೆಯ ಮೊದಲ ಅವಧಿಯಲ್ಲಿ ಪಾಸಾದ ಹೆಮ್ಮೆಯ ಹಳೆ ವಿದ್ಯಾರ್ಥಿ ಕೆ. ಕಿರಣ್ ಕಾಮತ್ ಅವರಿಗೆ ಕಾಲೇಜಿನ ಆಡಳಿತ ಮಂಡಳಿಯ ಪರವಾಗಿ ಸನ್ಮಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿದ ಸಿಎ ಕೆ ಕಿರಣ್ ಕಾಮತ್ ಸಭೆಯನ್ನು ಉದ್ದೇಶಿಸಿ, ನಾನು ಈ ಮಟ್ಟಕ್ಕೆ ಬೆಳೆಯಲು ನನಗೆ ಈ ಕಾಲೇಜು ಎಲ್ಲವನ್ನು ಕೊಟ್ಟಿದೆ ಎಂದು ಪ್ರಶಂಸಿದರು.
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ವಿದ್ಯಾರ್ಥಿನಿ ಐಶ್ವರ್ಯ ಕಾರ್ಯಕ್ರಮ ನಿರೂಪಿಸಿ, ವೈಷ್ಣವಿ ಸ್ವಾಗತಿಸಿ, ದ್ವಿತೀಯ ಪಿಯುಸಿ ಕಲಾ ವಿಭಾಗ ವಿದ್ಯಾರ್ಥಿನಿ ವರ್ಷ ವಂದಿಸಿದರು.
















