Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಡೇರಹೋಬಳಿ ಶಾಲಾ ವಾರ್ಷಿಕೋತ್ಸವ
    ಕುಂದಾಪ್ರದ್ ಸುದ್ಧಿ

    ವಡೇರಹೋಬಳಿ ಶಾಲಾ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಶಾಸಕರ ಮಾ.ಹಿ.ಪ್ರಾ. ಶಾಲೆ, ವಡೇರಹೋಬಳಿ ಇಲ್ಲಿನ ವಾರ್ಷಿಕೋತ್ಸವ ಸಮಾರಂಭದ ಬೆಳಗ್ಗಿನ ಧ್ವಜಾರೋಹಣವನ್ನು ಹೋಟೆಲ್ ಹರಿಪ್ರಸಾದ್ ಇದರ ಮಾಲೀಕರಾದ ಶ್ರೀಯುತ ಅಭಿನಂದನ್ ಶೆಟ್ಟಿ ಇವರು ನೆರವೇರಿಸುವುದರ ಮೂಲಕ ಪ್ರಾರಂಭಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಯುತ ಕೆ. ಸೀತಾರಾಮ ಶೆಟ್ಟಿ, ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ, ಕುಂದಾಪುರ ಇವರು ವಹಿಸಿದ್ದರು ಹಾಗೂ ಮುಖ್ಯ ಅತಿಥಿಗಳಾಗಿ ಶ್ರೀ ಚಂದ್ರಶೇಖರ ಶೆಟ್ಟಿ, ಮುಖ್ಯ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ ವಡೇರಹೋಬಳಿ ಹಾಗೂ ಶ್ರೀಮತಿ ದೇವಿಕುಮಾರಿ ಉಪಸ್ಥಿತರಿದ್ದರು. ಪದವೀಧರ ಮುಖ್ಯ ಶಿಕ್ಷಕರಾದ ಶ್ರೀ ಬಿ. ಸುಧಾಕರ್ ಶೆಟ್ಟಿ ಸ್ವಾಗತಿಸಿದರು. ಶ್ರೀಮತಿ ವಯಲ್ಲಾ ಮಿರಾಂಡ ವಂದಿಸಿದರು.

    Click Here

    Call us

    Click Here

    ಮದ್ಯಾಹ್ನದ ಸಮಾರಂಭದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಹೆಚ್. ಶೋಭಾ ಶೆಟ್ಟಿಯವರು ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಕರ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಅಲ್ಲದೆ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಿಗೆ ಸಹಕರಿಸುತ್ತಿರುವುದನ್ನು ಸ್ಮರಿಸಿದರು.

    ಶ್ರೀ ದತ್ತಾನಂದ, ಗಂಗೊಳ್ಳಿ ಇವರು ಬಹುಮಾನ ವಿತರಣೆ ಮಾಡಿ ಇಲ್ಲಾ ವಿದ್ಯಾರ್ಥಿಗಳಿಗೂ ಬಹುಮಾನ ನೀಡುತ್ತಿರುವುದು ಹಾಗೂ ಹೆಚ್ಚಿನ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಲು ಅನುವು ಮಾಡಿಕೊಟ್ಟ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರನ್ನು ಅಭಿನಂದಿಸಿದರು. ಶ್ರೀ ಕೆ. ಆರ್. ನಾಯಕ್, ಸೂಪರ್ ಗ್ರೇಡ್ ಇಲೆಕ್ಟ್ರಿಕಲ್ ಗುತ್ತಿಗೆದಾರರು, ಶ್ರೀ ಅಮರಪ್ರಸಾದ ಶೆಟ್ಟಿ, ಯೋಜನಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ, ಕುಂದಾಪುರ, ಶ್ರೀ ಎಂ. ಸದಾರಾಮ ಶೆಟ್ಟಿ ಹಾಗೂ ಡಾ: ಭವಾನಿ ರಾವ್ ಮುಖ್ಯ ಅತಿಥಿಗಳಾಗಿದ್ದರು. ಸರಕಾರಿ ಪ್ರೌಢ ಶಾಲೆ, ಬಸ್ರೂರಿನ ಶ್ರೀ ಶ್ರೀಕಾಂತ ವಿ., ವಾಚನ ಮಾಡಿದರು. ವರದಿವಾಚನವನ್ನು ಶ್ರೀಮತಿ ರತ್ನಾರವರು ಮಾಡಿದರು.

    ಎಲ್ಲಾ ಅತಿಥಿಗಣ್ಯರನ್ನು ಪದವೀಧರ ಮುಖ್ಯ ಶಿಕ್ಷರಾದ ಶ್ರೀ ಬಿ. ಸುಧಾಕರ ಶೆಟ್ಟಿ ಸ್ವಾಗತಿಸುತ್ತಾ, ಶಾಲೆಯ ಮುಂದಿನ ಯೋಜನೆಯ ಬಗ್ಗೆ ತಿಳಿಸುತ್ತಾ, ಹಿಂದಿನ ವರ್ಷಕ್ಕಿಂತ ಈ ವರ್ಷ ನಮ್ಮ ಶಾಲೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ದಾಖಲಾಗಿರುವರು ಎಂದು ತಿಳಿಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ. ಆಧ್ಯಕ್ಷರಾದ ಶ್ರೀ ಕೆ. ಅಶೋಕ ಹಾಗೂ ವಿದ್ಯಾರ್ಥಿ ನಾಯಕರಾದ ಮಾ: ಕಿಶೋರ್‌ರವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀ ಶಂಕರ ನಾಯ್ಕ ಹಾಗೂ ಶ್ರೀಮತಿ ಸುಮಿತ್ರಾ ನಿರ್ವಹಿಸಿದರು. ಧನ್ಯವಾದವನ್ನು ಶ್ರೀಮತಿ ಇಂದಿರಾ ಮಾಡಿದರು. ಅನಂತರ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು. ಇದರಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪ್ರೇಕ್ಷಕರನ್ನು ರಂಜಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    nine + fifteen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.