ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2026ನೇ ವರ್ಷದ ವಿದ್ಯಾದೀವಿಗೆ’ ಯೋಜನೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳಿಗೆ ಸೂಚನೆಗಳು:
1. ವಿದ್ಯಾರ್ಥಿಯು 2026ನೇ ವರ್ಷದಲ್ಲಿ ನಡೆದ ಎಸ್ಎಸ್ಎಲ್ಸಿ ಅಥವಾ 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ 60% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು.
2. ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿದೆ.
3. ಬಂಟ ಸಮುದಾಯವನ್ನು ಪ್ರತಿನಿಧಿಸುವ ಕುಂದಾಪುರ ತಾಲೂಕಿನ ನಿವಾಸಿಯಾಗಿರಬೇಕು. ಅವಿಭಜಿತ ಬೈಂದೂರು ತಾಲೂಕಿನ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
4. ಹೆತ್ತವರ (ಕುಟುಂಬದ) ವಾರ್ಷಿಕ ಆದಾಯ ಮಿತಿ ಒಂದು ಲಕ್ಷ ರೂಪಾಯಿ ಆಗಿರುತ್ತದೆ.
5. ಪ್ರಸ್ತುತ ಪ್ರಥಮ ವರ್ಷದ ಪದವಿಪೂರ್ವ ತರಗತಿಯಲ್ಲಿ ಅಥವಾ ಯಾವುದೇ ವೃತ್ತಿಪರ ಶಿಕ್ಷಣ/ ತರಬೇತಿಯ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರಬೇಕು ಅಥವಾ ಪ್ರವೇಶ ಪಡೆದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿಯು ಈ ಅಧಿಸೂಚನೆಯೊಂದಿಗೆ ಲಗತ್ತಿಸಿರುವ ‘ನಮೂನೆ-ಸಿ’ ಯಲ್ಲಿ ಮಾತ್ರ ‘ವಿದ್ಯಾದೀವಿಗೆ’ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ‘ನಮೂನೆ-ಸಿ’ ಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿಮಾಡಿ youthbunts.scholarship@gmail.com ಇ ಮೇಲ್ ಗೆ ಕಳುಹಿಸಲು ಸೂಚಿಸಲಾಗಿದೆ. ಅರ್ಜಿಯೊಂದಿಗೆ ಈ ಕೆಳಗಿನ ಪೂರಕ ದಾಖಲೆಗಳನ್ನು PDF ನಮೂನೆಯಲ್ಲಿ ಸಿದ್ದಪಡಿಸಿ ಇ ಮೇಲ್ ನಲ್ಲಿ ಲಗತ್ತಿಸುವುದು ಅತ್ಯವಶ್ಯವಾಗಿದೆ.
1. ಅರ್ಜಿ ನಮೂನೆ
2. 2026ನೇ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಎಸ್ಎಲ್ಸಿ ಅಥವಾ ಹತ್ತನೇ ತರಗತಿಯ ಅಂಕಪಟ್ಟಿ
3. ಜಾತಿ ಮತ್ತು ಆದಾಯ ಪ್ರಮಾಣಪತ್ರ
4. ಪಡಿತರ ಚೀಟಿ
ಅರ್ಜಿ ಸಲ್ಲಿಸುವ ವೇಳೆ ಗಮನಿಸಬೇಕಾದ ಪ್ರಮುಖ ಅಂಶಗಳು:
1. ಅರ್ಜಿಯಲ್ಲಿ ಪ್ರಸ್ತುತ ಬಳಕೆಯಲ್ಲಿರುವ ವಾಟ್ಸಪ್ ಸಂಪರ್ಕ ಹೊಂದಿದ ಮೊಬೈಲ್ ಸಂಖ್ಯೆಯನ್ನು ಸರಿಯಾಗಿ ದಾಖಲಿಸಬೇಕು. ಮುಂದೆ ನೋಂದಾಯಿತ ವಾಟ್ಸಪ್ ಸಂಪರ್ಕವಿರುವ ಮೊಬೈಲ್ ಸಂಖ್ಯೆಗೆ ಮಾತ್ರ ಆಯ್ಕೆ ವಿವರಗಳನ್ನು ರವಾನಿಸಲಾಗುವುದು.
2. ವಿದ್ಯಾರ್ಥಿಯು ತನ್ನ ಆಧಾರ್ ಗುರುತಿನ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣಪತ್ರದ ನೋಂದಣಿ ಸಂಖ್ಯೆ, ಮತ್ತು ಪಡೆದ ಅಂಕಗಳ ವಿವರಗಳನ್ನು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು.
3. ವಿದ್ಯಾರ್ಥಿಯು ದಾಖಲಿಸಿದ ಮಾಹಿತಿಯು ಸಲ್ಲಿಸಿದ ದಾಖಲೆಗಳೊಂದಿಗೆ ಮರುಪರಿಶೀಲನೆಗೆ ಒಳಗಾಗುವುದರಿಂದ ತಪ್ಪು ಅಥವಾ ಅಪೂರ್ಣ ಮಾಹಿತಿ ನೀಡಬಾರದು.
4. ಅರ್ಜಿ ನಮೂನೆ ಮತ್ತು ಪೂರಕ ದಾಖಲೆಗಳನ್ನು ಭೌತಿಕವಾಗಿ ಸಲ್ಲಿಸುವಂತಿಲ ಅಥವಾ ಅಂಚೆಯ ಮೂಲಕ ಕಳುಹಿಸಿಕೊಡುವಂತಿಲ್ಲ. ಇ ಮೇಲ್ ಮೂಲಕ ಸ್ವೀಕೃತಗೊಂಡ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು.
5. ಇ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-07-2026 ಆಗಿರುತ್ತದೆ.
6. ಇದು ಅತ್ಯಂತ ಸರಳ ಮತ್ತು ಬಳಕೆಸ್ನೇಹಿ ವಿಧಾನವಾಗಿದ್ದು ವಿದ್ಯಾರ್ಥಿಗಳು ಅಂತರ್ಜಾಲ ಸಂಪರ್ಕವಿರುವ ಮೊಬೈಲ್ ಫೋನ್ ಬಳಸಿ ಕೆಲವೇ ನಿಮಿಷಗಳೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅಗತ್ಯ ಮಾಹಿತಿಗಾಗಿ ಯೋಜನೆಯ ಸಂಚಾಲಕ ಶ್ರೀ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಇವರನ್ನು 7406196059 ಮೊಬೈಲ್ ಸಂಖ್ಯೆಯ ಮೂಲಕ ಹಾಗೂ ತಾಂತ್ರಿಕ ನೆರವಿಗಾಗಿ ವೆಬ್ ಸೈಟ್ ನಿರ್ವಾಹಕ ಪ್ರತಾಪಚಂದ್ರ ಶೆಟ್ಟಿ ಹಳ್ಳಾಡು ಇವರನ್ನು 8762822427 ಮೊಬೈಲ್ ಸಂಖ್ಯೆಯ ಮೂಲಕ ಸಂಪರ್ಕಿಸಬಹುದಾಗಿದೆ. ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳ ವಾಟ್ಸಪ್ ಸಂಪರ್ಕವಿರುವ ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಲಾಗುವುದು.
















