Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಸೈಂಟ್ ಥಾಮಸ್ ಶಾಲೆಯ ಕಿಂಡರ್ ಗಾರ್ಟನ್‌ ಪುಟಾಣಿಗಳಿಂದ ರೈತರ ದಿನಾಚರಣೆ
    ಊರ್ಮನೆ ಸಮಾಚಾರ

    ಬೈಂದೂರು ಸೈಂಟ್ ಥಾಮಸ್ ಶಾಲೆಯ ಕಿಂಡರ್ ಗಾರ್ಟನ್‌ ಪುಟಾಣಿಗಳಿಂದ ರೈತರ ದಿನಾಚರಣೆ

    Updated:11/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಇಲ್ಲಿನ ಸೈಂಟ್ ಥಾಮಸ್ ಶಾಲೆಯ ಕಿಂಡರ್ ಗಾರ್ಟನ್ ಪುಟಾಣಿಗಳಿಂದ ರೈತರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಶಾಲೆಯ ಗೌರವಾನ್ವಿತ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ಮತ್ತು ಕಿಂಡರ್ ಗಾರ್ಟನ್ ಮುಖ್ಯ ಶಿಕ್ಷಕಿ ಸಿಸ್ಟರ್ ಸೋಫಿಯಾ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

    ಕಾರ್ಯಕ್ರಮದಲ್ಲಿ ರೈತರ ಮಹತ್ವವನ್ನು ಸಾರುವ ವಿಶೇಷ ಸಂದೇಶ ನೀಡಲಾಯಿತು. ರೈತರು ದೇಶದ ಅನ್ನದಾತರು, ಅವರ ಪರಿಶ್ರಮದಿಂದಲೇ ಪ್ರತಿಯೊಬ್ಬರ ಬದುಕು ಸಾಗುತ್ತಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಪುಟಾಣಿ ಮಕ್ಕಳು ರೈತರ ವೇಷ ಧರಿಸಿ, ಕೃಷಿ ಉಪಕರಣಗಳೊಂದಿಗೆ ಮೆರವಣಿಗೆ ನಡೆಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ರೈತರ ಜೀವನ, ಕೃಷಿಯ ಮಹತ್ವ ಹಾಗೂ ಪ್ರಕೃತಿ ಸಂರಕ್ಷಣೆಯ ಕುರಿತು ಹಾಡು, ನೃತ್ಯ ಹಾಗೂ ಭಾಷಣಗಳ ಮೂಲಕ ಮಕ್ಕಳು ಮನಮುಟ್ಟುವ ಸಂದೇಶವನ್ನು ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ  ಉಪಪ್ರಾಂಶುಪಾಲೆ ಸಿಸ್ಟರ್  ಕಾರ್ಮೆಲ್ “ರೈತರ ಪರಿಶ್ರಮವನ್ನು ಸದಾ ಗೌರವಿಸಬೇಕು. ಅನ್ನ ಬೆಳೆಯುವ ರೈತರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ” ಎಂದು ಹೇಳಿದರು. ಸಿಸ್ಟರ್ ಸೋಫಿಯಾ ಅವರು ಮಕ್ಕಳಲ್ಲಿ ಕೃಷಿಯ ಬಗ್ಗೆ ಗೌರವ ಹಾಗೂ ಪ್ರಕೃತಿಯ ಬಗ್ಗೆ ಪ್ರೀತಿ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕ-ಶಿಕ್ಷಕಿಯರು, ಸಹಾಯಕ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಶಾಲಾ ಆವರಣದಲ್ಲಿ ರೈತರ ದಿನದ ವಿಶೇಷ ಸಂದೇಶಗಳನ್ನು ಒಳಗೊಂಡ ಫಲಕಗಳನ್ನು ಪ್ರದರ್ಶಿಸಲಾಗಿತ್ತು. ಮಕ್ಕಳ ಸಾಂಪ್ರದಾಯಿಕ ವೇಷಭೂಷಣ ಹಾಗೂ ಸೃಜನಾತ್ಮಕ ಪ್ರದರ್ಶನಗಳು ಕಾರ್ಯಕ್ರಮದ ಆಕರ್ಷಣೆಯಾಗಿದ್ದವು.

    Click here

    Click here

    Click here

    Call us

    Call us

    ಕಾರ್ಯಕ್ರಮದ ಕೊನೆಯಲ್ಲಿ ರೈತ ಸಮುದಾಯಕ್ಕೆ ಕೃತಜ್ಞತೆ ಸಲ್ಲಿಸಿ, “ರೈತ ಉಳಿದರೆ ದೇಶ ಉಳಿಯುತ್ತದೆ”ಎಂಬ ಸಂದೇಶದೊಂದಿಗೆ ಎಲ್ಲರೂ ರೈತರನ್ನು ಗೌರವಿಸುವ ಪ್ರತಿಜ್ಞೆ ಕೈಗೊಂಡರು. ಈ ಆಚರಣೆಯು ವಿದ್ಯಾರ್ಥಿಗಳಲ್ಲಿ ರೈತರ ಬಗ್ಗೆ ಗೌರವ, ಕೃತಜ್ಞತೆ ಹಾಗೂ ಕೃಷಿಯ ಮಹತ್ವದ ಕುರಿತು ಉತ್ತಮ ಅರಿವು ಮೂಡಿಸಿತು ಕಾರ್ಯ ಕ್ರಮವನ್ನು. ಶಿಕ್ಷಕಿ  ಮರಿಯಮ್ಮ ಬೋಸ್ ನಿರೂಪಿಸಿ, ವಂದಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲಕಟ್ಟೆ: ಆರ್ಟಿಫಿಶಿಯಲ್ ಇಂಟಲಿಜೆನ್ಸ್ – ಬ್ರಿಡ್ಜ್ಯಿಂಗ್‌ ಮ್ಯಾನೇಜ್ಮೆಂಟ್ & ಕಂಪ್ಯೂಟರ್‌ ಅಪ್ಲಿಕೇಶನ್‌ ವಿಷಯದ ಕುರಿತು ಕಾರ್ಯಾಗಾರ

    11/07/2026

    ಕುಂದಾಪುರ ಆರ್. ಎನ್. ಶೆಟ್ಟಿ ಕಾಲೇಜಿನಲ್ಲಿ ʼನವಸಂಕೇತ್‌ʼ ಫ್ರೆಷರ್ಸ್‌ ಡೇ ಫಿಯಾಸ್ಟಾ‌ ಕಾರ್ಯಕ್ರಮ

    11/07/2026

    ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ

    11/07/2026
    Leave A Reply Cancel Reply

    thirteen + two =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ಸೈಂಟ್ ಥಾಮಸ್ ಶಾಲೆಯ ಕಿಂಡರ್ ಗಾರ್ಟನ್‌ ಪುಟಾಣಿಗಳಿಂದ ರೈತರ ದಿನಾಚರಣೆ
    • ಮೂಡ್ಲಕಟ್ಟೆ: ಆರ್ಟಿಫಿಶಿಯಲ್ ಇಂಟಲಿಜೆನ್ಸ್ – ಬ್ರಿಡ್ಜ್ಯಿಂಗ್‌ ಮ್ಯಾನೇಜ್ಮೆಂಟ್ & ಕಂಪ್ಯೂಟರ್‌ ಅಪ್ಲಿಕೇಶನ್‌ ವಿಷಯದ ಕುರಿತು ಕಾರ್ಯಾಗಾರ
    • ಕುಂದಾಪುರ ಆರ್. ಎನ್. ಶೆಟ್ಟಿ ಕಾಲೇಜಿನಲ್ಲಿ ʼನವಸಂಕೇತ್‌ʼ ಫ್ರೆಷರ್ಸ್‌ ಡೇ ಫಿಯಾಸ್ಟಾ‌ ಕಾರ್ಯಕ್ರಮ
    • ಎಸ್‌ಐಆರ್ ಕುರಿತು ಡಿಸಿ ಜೊತೆ ಸಂವಾದ: ಸನ್ಮತಿ ಪತ್ರಿಕೆಯ ಸಂಚಿಕೆ ಬಿಡುಗಡೆ
    • ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.