ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ ಶೆಟ್ಟಿ ಅವರ ನೇತ್ರತ್ವದಲ್ಲಿ ಬೈಂದೂರು ರೈತರ ನಿಯೋಗ ಸಚಿವ ಯು.ಟಿ. ಖಾದರ್ ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
ರೈತರು ಪಪಂ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಲು ಆಗ್ರಹಿಸಿ ಕಳೆದ 292 ದಿನಗಳಿಂದ ತಾಲೂಕು ಆಡಳಿತ ಕಛೇರಿ ಎದುರು ಧರಣಿ ನಡೆಸುತ್ತಿದ್ದು ಸಚಿವರು ಸಂಪೂರ್ಣ ಮಾಹಿತಿ ಪಡೆದು ರಾಜ್ಯ ಅಧೀನ ಕಾರ್ಯದರ್ಶಿ ಜೊತೆ ಸ್ಥಳದಲ್ಲೆ ಮಾತನಾಡಿದರು ಮತ್ತು ಸರಕಾರದ ಮಟ್ಟದಲ್ಲಿ ಮಾಹಿತಿ ಪಡೆದು ರೈತರ ಹೋರಾಟಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದರು.

ಬೈಂದೂರಿಗೆ ತಾಲೂಕು ಆಸ್ಪತ್ರೆ:
ಬೈಂದೂರು ಅತ್ಯಂತ ವಿಸ್ತಾರವಾದ ಕ್ಷೇತ್ರವಾಗಿದ್ದು ಬಹುತೇಕ ಗ್ರಾಮೀಣ ಭಾಗಗಳನ್ನು ಹೊಂದಿದೆ ಹೀಗಾಗಿ ಈ ಭಾಗದಲ್ಲಿ ತಾಲೂಕು ಆಸ್ಪತ್ರೆ ಅತ್ಯಗತ್ಯವಾಗಿದೆ ಶೀಘ್ರ ಬೈಂದೂರಿಗೆ ತಾಲೂಕು ಆಸ್ಪತ್ರೆ ಮಂಜೂರು ಮಾಡಲಾಗುವುದು ಎಂದರು.
ತಾಲೂಕು ರಕ್ಷಾ ಸಮಿತಿ ಪರವಾಗಿ ವೀರಭದ್ರ ಸಚಿವರಿಗೆ ಮನವಿ ನೀಡಿದರು. ಈ ಸಂಧರ್ಭದಲ್ಲಿ ಮುಖಂಡರಾದ ಅರುಣ್ ಕುಮಾರ ಶಿರೂರು, ಮ್ಯಾಥ್ ಗಣೇಶ ಪೂಜಾರಿ, ಪದ್ಮಾಕ್ಷ ಗೋಳಿಬೇರು, ನರಸಿಂಹ ಹಳಗೇರಿ, ಶಬೀರ್ ಬೈಂದೂರು, ನೂರ್ ಮಹ್ಮದ್ ದೇವಪ್ಪ ಮರಾಠಿ ಸುಧೀರ್ ಪೂಜಾರಿ, ಸಿದ್ದೀಕ್, ವಾಸುದೇವ ಮರಾಠಿ, ಹೊಸೂರು ಮಾಹಾದೇವ ಪೂಜಾರಿ, ಹರಿಯ ಪೂಜಾರಿ ಗೋಳಿಬೇರು, ಕೇಶವ ಮುಂತಾದವರು ಹಾಜರಿದ್ದರು.
















