ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಅಂತಾರಾಷ್ಟ್ರೀಯ ಸಂಸ್ಥೆಯಾದ ರೋಟರಿ ಸಂಸ್ಥೆ ಸಮಾಜಕ್ಕೆ ತನ್ನದೆ ಆದ ಬಹುದೊಡ್ಡ ಕೊಡುಗೆಗಳನ್ನು ನೀಡುತ್ತಾ ಬಂದಿದೆ ಈ ದಿಸೆಯಲ್ಲಿ ಹಂಗಾರಕಟ್ಟೆ ರೋಟರಿ ಕ್ಲಬ್ ಆರೋಗ್ಯ, ಶಿಕ್ಷಣ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ ಇದು ಶ್ಲಾಘನೀಯ ಕಾರ್ಯ ಎಂದು ರೋಟರಿ ಕ್ಲಬ್ ನಿಕಟಪೂರ್ವ ಗವರ್ನರ್ ಸಿ.ಎ. ದೇವ್ ಆನಂದ್ ಅಭಿಪ್ರಾಯಪಟ್ಟರು.

ಅವರು ಬುಧವಾರ ಬ್ರಹ್ಮಾವರ ಹೋಟೆಲ್ ಅಶ್ರಯದಲ್ಲಿ ನಡೆದ ಹಂಗಾರಕಟ್ಟೆ – ಸಾಸ್ತಾನ ರೋಟರಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು.
ಇದೇ ವೇಳೆ ಹಂಗಾರಕಟ್ಟೆ- ಸಾಸ್ತಾನ ರೋಟರಿಯ ನೂತನ ಅಧ್ಯಕ್ಷರಾಗಿ ಕುಸುಮಾ ಮನೋಜ್ ಹಾಗೂ ಕಾರ್ಯದರ್ಶಿಯಾಗಿ ಕೆ. ರಾಜಾರಾಮ್ ಐತಾಳ್ ಅಧಿಕಾರ ಸ್ವೀಕರಿಸಿದರು.
ಮುಖ್ಯ ಅತಿಥಿಗಳಾಗಿ 2026-27ನೇ ಸಾಲಿನ ಸಹಾಯಕ ಗವರ್ನರ್ ವಿಜಯ ಕುಮಾರ್ ಶೆಟ್ಟಿ, 2026-27ನೇ ಸಾಲಿನ ವಲಯ ಪ್ರತಿನಿಧಿ ಸೀತಾರಾಮ ಎಸ್. ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ ಸ್ವಾಗತಿಸಿದರು. ನಿಕಟಪೂರ್ವ ಕಾರ್ಯದರ್ಶಿ ಮುರಳಿಧರ ನಾಯರಿ ವರದಿ ಮಂಡಿಸಿದರು. ಗಣೇಶ್ ಜಿ. , ಸುಲತಾ ಎಸ್. ಹೆಗ್ಡೆ , ನರೇಂದ್ರ ಕುಮಾರ್ ಕೋಟ, ಬಾಲಕೃಷ್ಣ ಪೂಜಾರಿ ಹಾಗೂ ವಿಘ್ನೆಶ್ವರ ಅಡಿಗ, ಲೀಲಾವತಿ ಜಿ. ಪೂಜಾರಿ, ಮನೋಜ್ ಕುಮಾರ್ ಪರಿಚಯಿಸಿದರು. ಕಾರ್ಯದರ್ಶಿ ಕೆ. ರಾಜಾರಾಮ ಐತಾಳ್ ನಿರೂಪಿಸಿ, ವಂದಿಸಿದರು.
















