ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇದರ ವತಿಯಿಂದ ಕಟ್ ಬೆಲ್ತೂರು ಹೊಲಿಗೆ ತರಬೇತಿ ಕೇಂದ್ರದಲ್ಲಿ ಸ್ವದ್ಯೋಗ ಮಾಡಲು ಬ್ಯಾಂಕಿಂಗ್ ಸೌಲಭ್ಯ ಬಗ್ಗೆ ಕರ್ನಾಟಕ ಗ್ರಾಮೀಣ ವಿಕಾಸ ಹೆಮ್ಮಾಡಿಯ ಶಾಖಾಧಿಕಾರಿಯಾದ ನಾಗರತ್ನಾ ನಾಯಕ್ ಅವರು ಮಾಹಿತಿಯನ್ನು ಹಂಚಿಕೊಂಡರು.
ಶಿಬಿರದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಕುಂದಾಪುರ ರಿವರ್ಸೈಡ್ ಇದರ ಅಧ್ಯಕ್ಷ ಸದಾನಂದ ಬಳ್ಕೂರು ಅವರು ಮಾತನಾಡಿ, ಮಹಿಳೆಯರು ಶಿಕ್ಷಣ, ಕೌಶಲ್ಯ, ಆರ್ಥಿಕ ಸ್ವಾವಲಂಬಿಗಳಾಗಿ ಆತ್ಮ ವಿಶ್ವಾಸದ ಮೂಲಕ ಸಬಲರಾದರೆ ಒಂದು ಕುಟುಂಬ ಅಭಿವೃದ್ಧಿ ಹೊಂದಿದಂತೆ. ಈ ನಿಟ್ಟಿನಲ್ಲಿ ಮಹಿಳೆಯರು ಹೋಲಿಗೆಯನ್ನು ಕಲಿತು ಸ್ವ ಉದ್ಯೋಗವನ್ನು ಆರಂಭಿಸಬಹುದು. ಗಾರ್ಮೆಂಟ್ ಅಥವಾ ಬಟ್ಟೆ ತಯಾರಿಕಾ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಬಹುದು .ಇದರಿಂದ ಕುಟುಂಬದ ಆದಾಯ ಹೆಚ್ಚುವುದರ ಜೊತೆಗೆ ಆತ್ಮ ವಿಶ್ವಾಸವು ವೃದ್ಧಿಯಾಗುತ್ತದೆ ಎಂದು ಹೇಳಿದರು.
ವೇದಿಕೆಯಲ್ಲಿ ಶಿಬಿರದ ತರಬೇತುದಾರರಾದ ಯಾಸ್ಮಿನ್ ಮತ್ತು ಯಶೋಧ ಇವರು ಉಪಸ್ಥಿತರಿದ್ದರು. ನರಸಿಂಹ ಗಾಣಿಗ ಹರೆಗೋಡು ಪ್ರಾಸ್ತವಿಕ ನುಡಿಗಳನ್ನಾಡಿದರು. ಮಾಜಿ ಅಧ್ಯಕ್ಷ ರಾಜು ಪೂಜಾರಿ ರೋಟರಿ ಮಾಹಿತಿಗಳನ್ನು ನೀಡಿದರು. ಮಾಜಿ ಕಾರ್ಯದರ್ಶಿ ರೋನಾಲ್ಡ್ ಡಿಮೆಲ್ಲೊ ತರಬೇತಿ ಶಿಬಿರದ ಮಹತ್ವ ತಿಳಿಸಿದರು.
ರೋಟರಿಯ ಮಾಜಿ ಅಧ್ಯಕ್ಷ ನರಸಿಂಹ ಹೊಳ್ಳ ಸ್ವಾಗತಿಸಿ, ಮಾಜಿ ಅಧ್ಯಕ್ಷ ಕೆ.ಎಸ್. ಮಂಜುನಾಥ್ ಕಾರ್ಯಕ್ರಮವನ್ನು ನಿರೂಪಿಸಿ, ಕಾರ್ಯದರ್ಶಿ ಗುರುರಾಜ್ ವಂದಿಸಿದರು.
















