Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜು.29 ರಿಂದ 48 ದಿನಗಳ ಕಾಲ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ ವೃತಾಚರಣೆ – ಪೂರ್ವಭಾವಿ ಸಭೆ
    ಊರ್ಮನೆ ಸಮಾಚಾರ

    ಜು.29 ರಿಂದ 48 ದಿನಗಳ ಕಾಲ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ ವೃತಾಚರಣೆ – ಪೂರ್ವಭಾವಿ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬೈಂದೂರು ಗೋಳಿಹೊಳೆ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಜು.29 ರಿಂದ ಸೆ.14ರವರೆಗೆ ನಡೆಯುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ ವೃತಾಚರಣೆಯ ಪೂರ್ವಭಾವಿ ಸಭೆಯು ರವಿವಾರದಂದು ಕುಂದಾಪುರ ಶ್ರೀ ನಾರಾಯಣ ಗುರು ಕಲ್ಯಾಣ ಮಂದಿರದಲ್ಲಿ ನಡೆಯಿತು.

    Click Here

    Call us

    Click Here

    ಈ ಸಂದರ್ಭದಲ್ಲಿ ಚಾತುರ್ಮಾಸ ಸಮಿತಿ ಅಧ್ಯಕ್ಷರು, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಮಾತನಾಡಿ, ಚಾತುರ್ಮಾಸ ಎನ್ನುವುದು ಶುದ್ಧ ಭಕ್ತಿ, ಪುಣ್ಯದ ಕಾರ್ಯ. ಇಡೀ ಸಮುದಾಯವನ್ನು ಒಗ್ಗೂಡಿಸಿಕೊ೦ಡು ಚಾತುರ್ಮಾಸ ವೃತ ಮಾಡುವ ಮೂಲಕ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ಕೈಂಕರ್ಯ ಮಾಡುತ್ತಿದ್ದಾರೆ. 48 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಭಕ್ತಿ-ಭಯ ಸಮ್ಮಿಲನವಾಗಬೇಕಿದೆ. ಬೈಂದೂರು,ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಗ್ಗೆ ಅಗತ್ಯ ತಯಾರಿ ಮಾಡಬೇಕಿದೆ. ಈಗಾಗಾಲೇ ವಿವಿಧ ಸಮಿತಿಗಳು ಸಜ್ಜಾಗಿದೆ. ಪಕ್ಷ, ರಾಜಕೀಯ ಮಿರಿ ಇದೊಂದು ಅಭೂತಪೂರ್ವ ಧಾರ್ಮಿಕ ಸೇವೆಯಾಗಬೇಕು ಎಂದರು.

    ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಲಿ ಮಾತನಾಡಿ, ಬೈಂದೂರಿನಲ್ಲಿ ನಡೆಯುವ ಚಾತುರ್ಮಾಸ ಕಾರ್ಯಕ್ರಮದ ಹಿನ್ನೆಲೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಲ್ಲವ ಸಮಾಜದ ಅಧ್ಯಕ್ಷರೊಡಗೂಡಿ ಆಯಾಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಭೆ ನಡೆಸಿ ಜನರನ್ನು ಒಗ್ಗೂಡಿಸುವ ಕೆಲಸವನ್ನು ಪಕ್ಷಾತೀತವಾಗಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಯಶಸ್ಸುಗೊಳಿಸೋಣ ಎಂದರು.

    ಚಾತುರ್ಮಾಸ ಸಮಿತಿ ಗೌರವಾಧ್ಯಕ್ಷ, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಈಗಾಗಾಲೇ ಬೈಂದೂರು ಕ್ಷೇತ್ರದ ಎಲ್ಲಾ ಭಾಗಗಳಲ್ಲಿ ಸಮಿತಿಗಳು ಸಿದ್ಧವಾಗಿದೆ. ಕುಂದಾಪುರ ತಾಲೂಕಿನ ಜನರನ್ನು ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಬಿಲ್ಲವ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ನೇತೃತ್ವದಲ್ಲಿ ಇಲ್ಲಿನ ಶಾಸಕರೊಡಗೂಡಿ ಸಭೆ ರೂಪಿಸಲಾಗುತ್ತದೆ. ಎಲ್ಲಾ ಸಮುದಾಯವನ್ನು ಒಗ್ಗೂಡಿಸಿಕೊಂಡು ಚಾತುರ್ಮಾಸ ವೃತಾಚರಣೆ ನಡೆಯಲಿದೆ.

    ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಮಾತನಾಡಿ, ಗುರುಗಳು ಒಂದೇ ಜಾತಿ, ಮತಕ್ಕೆ ಸೀಮಿತರಾಗಿಲ್ಲ. ಸರ್ವರನ್ನೂ ಸಮಾನವಾಗಿ ಕಾಣುವ ಶ್ರೀಗಳ ಚಾತುರ್ಮಾಸ ವೃತ ಉಡುಪಿ ಜಿಲ್ಲೆಯ ಬೈಂದೂರಿನ ಪುಣ್ಯಭೂಮಿಯಲ್ಲಿ ನಡೆಯುತ್ತಿದ್ದು ಶ್ರದ್ಧಾಭಕ್ತಿಯಿಂದ ಕೈಜೋಡಿಸೋಣ ಎಂದರು.

    Click here

    Click here

    Click here

    Call us

    Call us

    ಮಹಿಳಾ ಸಂಘಟನೆಯ ಅಧ್ಯಕ್ಷೆ ಶಾಂತಾ ವಾಸುದೇವ, ಬೈಂದೂರು ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್‌ ಪೂಜಾರಿ, ಪ್ರಮುಖರಾದ ಉದಯ್ ಪೂಜಾರಿ ಬೆಳ್ವೆ, ರಾಜು ಪೂಜಾರಿ ಜಡ್ಕಲ್‌ ಮಾತನಾಡಿದರು.

    ಬಿಲ್ಲವ ಸಮಾಜ ಸೇವಾ ಸ೦ಘ ಕು೦ದಾಪುರದ ಉಪಾಧ್ಯಕ್ಷ ರಾಮ ಪೂಜಾರಿ ಮುಲ್ಲಿಮನೆ, ಶ್ರೀ ನಾರಾಯಣ ಗುರು ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಸಂತೋಷ್ ಪೂಜಾರಿ ಬೀಜಾಡಿ, ಕು೦ದಾಪುರ, ಬೈಂದೂರು ಭಾಗದ ಬಿಲ್ಲವ ಸಮಾಜದ ಪ್ರಮುಖರು ಇದ್ದರು.

    ಕುಂದಾಪುರ ಬಿಲ್ಲವ ಸಮಾಜ ಸೇವಾಸಂಘದ ಪ್ರಧಾನ ಕಾರ್ಯದರ್ಶಿ ಯೋಗೇಶ್ ಪೂಜಾರಿ ಕೋಡಿ ಸ್ವಾಗತಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಳೆ ಹಾಗೂ ಉತ್ತಮ ಬೆಳೆಗಾಗಿ ಕೋಟೇಶ್ವರದ ಕೋಟಿತೀರ್ಥ ಸರೋವರದಲ್ಲಿ ಪರ್ಜನ್ಯ ಜಪ

    20/07/2026

    ಸರಕಾರಿ ಪ್ರೌಢಶಾಲೆ ಗುಂಡ್ಮಿ ಸಾಸ್ತಾನ: ಇಂಟ್ರ್ಯಾಕ್ಟ್‌ ಕ್ಲಬ್‌ ಪದಪ್ರದಾನ

    20/07/2026

    ಗಂಗೊಳ್ಳಿ ಎಸ್.ವಿ. ಕಾಮರ್ಸ್ ಕ್ಲಬ್‌ನ ದ್ವಿತೀಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ 

    20/07/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಮಳೆ ಹಾಗೂ ಉತ್ತಮ ಬೆಳೆಗಾಗಿ ಕೋಟೇಶ್ವರದ ಕೋಟಿತೀರ್ಥ ಸರೋವರದಲ್ಲಿ ಪರ್ಜನ್ಯ ಜಪ
    • ಸರಕಾರಿ ಪ್ರೌಢಶಾಲೆ ಗುಂಡ್ಮಿ ಸಾಸ್ತಾನ: ಇಂಟ್ರ್ಯಾಕ್ಟ್‌ ಕ್ಲಬ್‌ ಪದಪ್ರದಾನ
    • ಗಂಗೊಳ್ಳಿ ಎಸ್.ವಿ. ಕಾಮರ್ಸ್ ಕ್ಲಬ್‌ನ ದ್ವಿತೀಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ 
    • ಅಂಡರ್-17 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌: ಆರಾಧ್ಯ ಎಸ್. ಶೆಟ್ಟಿ ಆಯ್ಕೆ
    • ಜು.29 ರಿಂದ 48 ದಿನಗಳ ಕಾಲ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ ವೃತಾಚರಣೆ – ಪೂರ್ವಭಾವಿ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.