Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಡರ್-17 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌: ಆರಾಧ್ಯ ಎಸ್. ಶೆಟ್ಟಿ ಆಯ್ಕೆ
    ಊರ್ಮನೆ ಸಮಾಚಾರ

    ಅಂಡರ್-17 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌: ಆರಾಧ್ಯ ಎಸ್. ಶೆಟ್ಟಿ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಿವಮೊಗ್ಗದಲ್ಲಿ 2026ರ ಜುಲೈ 17 ರಿಂದ 19ರವರೆಗೆ ನಡೆದ ಕರ್ನಾಟಕ ರಾಜ್ಯ ಅಂಡರ್-17 ಬಾಲಕಿಯರ ಫಿಡೆ ರೇಟೆಡ್ ಚೆಸ್ ಚಾಂಪಿಯನ್ಶಿಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆರಾಧ್ಯ ಎಸ್. ಶೆಟ್ಟಿ ಅವರು ಅಂಡರ್-17 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ ಪಡೆದಿದ್ದಾರೆ.

    Click Here

    Call us

    Click Here

    ರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಅಂಡರ್-17 ರಾಷ್ಟ್ರೀಯ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಆರಾಧ್ಯ, ಇದೀಗ ಮತ್ತೊಮ್ಮೆ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆಯುವ ಮೂಲಕ ತಮ್ಮ ಪ್ರತಿಭೆ, ಶಿಸ್ತು, ಪರಿಶ್ರಮ ಮತ್ತು ಸಮರ್ಪಣೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

    ಟೂರ್ನಮ್ನೆಟ್ ಆರಂಭದಿಂದಲೇ ಆರಾಧ್ಯ ಅತ್ಯುತ್ತಮ ಆಟವನ್ನು ಪ್ರದರ್ಶಿಸಿದರು. ಕರ್ನಾಟಕ ಅಂಡರ್-19 ತಂಡವನ್ನು ಪ್ರತಿನಿಧಿಸಿದ್ದ ಹಾಗೂ ಬೆಂಗಳೂರು ಅರ್ಬನ್‌ AFM ದೀಪ್ತಾ ಶ್ರೀನಿವಾಸ್ ಅವರನ್ನು ಸೋಲಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಎಲ್ಲರಿಗೂ ತೋರಿಸಿದರು.

    7ನೇ ಸುತ್ತಿನಲ್ಲಿ, ಮಂಗಳೂರಿನ 1884 ರೇಟಿಂಗ್ ಹೊಂದಿರುವ ಆರುಶ್ರಿ ಸೆವೆರಿನ್ ಹೆಲೆನ್ ಡಿ ವಿರುದ್ಧ ಅತ್ಯುತ್ತಮ ಮಧ್ಯದಾಟ (Middlegame) ಪ್ರದರ್ಶಿಸಿದರೂ, ಕೊನೆಯ ಹಂತದಲ್ಲಿ ನಡೆದ ಸಣ್ಣ ತಾಂತ್ರಿಕ ತಪ್ಪಿನಿಂದ ಪಂದ್ಯವನ್ನು ಕಳೆದುಕೊಂಡರು.

    ಆದರೆ, ನಿಜವಾದ ಚಾಂಪಿಯನ್‌ನ ಗುಣವನ್ನು ತೋರಿದ ಆರಾಧ್ಯ ಯಾವುದೇ ನಿರಾಶೆಗೆ ಒಳಗಾಗದೆ 8ನೇ ಸುತ್ತಿನಲ್ಲಿ 1547 ರೇಟಿಂಗ್ ಹೊಂದಿದ್ದ ದ್ರಿಥಿ ವಿ ಚಿತ್ರದುರ್ಗ ಅವರನ್ನು ಸೋಲಿಸಿ ಅದ್ಭುತವಾಗಿ ಪುನರಾಗಮನ ಮಾಡಿದರು.

    Click here

    Click here

    Click here

    Call us

    Call us

    ಅತ್ಯಂತ ನಿರ್ಣಾಯಕವಾಗಿದ್ದ ಕೊನೆಯ ಸುತ್ತಿನಲ್ಲಿ, 1751 ರೇಟಿಂಗ್ ಹೊಂದಿರುವ ಸಿಮ್ರಾ ನದಾಫ್ ಧಾರವಾಡ ಅವರನ್ನು ಮಣಿಸಿ ಅದ್ಭುತ ಗೆಲುವು ದಾಖಲಿಸುವ ಮೂಲಕ ಕರ್ನಾಟಕವನ್ನು ಪ್ರತಿನಿಧಿಸಿ ಅಂಡರ್-17 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಅಧಿಕೃತವಾಗಿ ಅರ್ಹತೆ ಪಡೆದರು.

    ಆರಾಧ್ಯ ಎಸ್. ಶೆಟ್ಟಿ ಅವರು ಕುಂದಾಪುರದ ಕಶ್ವಿ ಚೆಸ್‌ ಸ್ಕೂಲ್‌ನ ವಿದ್ಯಾರ್ಥಿನಿ ಆಗಿದ್ದಾಳೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಂಟ್ ಥಾಮಸ್ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    04/09/2026

    ನರೇಂದ್ರ ಕುಮಾರ್ ಕೋಟ ಅವರಿಗೆ ಗುರುಭ್ಯೋ ಗುರುಭ್ಯೋ ನಮಃ ಶಿಕ್ಷಕ ಪುರಸ್ಕಾರ

    04/09/2026

    ಬಿಲ್ಲವ ಯುವ ಬ್ರಿಗೇಡ್‌ನ ಪೂರ್ವಭಾವಿ ಸಭೆಯಲ್ಲಿ ಕರಾವಳಿಯ ಹಾಸ್ಯ ಕಲಾವಿದ ಬಸವ ಪೂಜಾರಿಗೆ ಸನ್ಮಾನ

    04/09/2026
    Leave A Reply Cancel Reply

    ten + one =

    Call us

    Click Here

    Call us

    Call us

    Call us
    Highest Viewed Recently
    • ಸೈಂಟ್ ಥಾಮಸ್ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಉಡುಪಿ: ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ
    • ನರೇಂದ್ರ ಕುಮಾರ್ ಕೋಟ ಅವರಿಗೆ ಗುರುಭ್ಯೋ ಗುರುಭ್ಯೋ ನಮಃ ಶಿಕ್ಷಕ ಪುರಸ್ಕಾರ
    • ಸಂಸ್ಕೃತ ವಿಶ್ವದ ಜ್ಞಾನ ಮತ್ತು ವೈಭವದ ಭಾಷೆ: ಡಾ. ಜಯಶಂಕರ್ ಕಂಗಣ್ಣಾರು
    • ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.