Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಲೋಕರ್ಪಾಣೆ
    alvas nudisiri

    ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಲೋಕರ್ಪಾಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ಐಬಿಎಂ ಸಾಫ್ಟ್ವೇರ್ ಲ್ಯಾಬ್ಸ್ ಸಹಯೋಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಸ್ಥಾಪಿಸಲಾದ, ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ನ್ನು ಬುಧವಾರ ಉದ್ಘಾಟಿಸಲಾಯಿತು.

    Click Here

    Call us

    Click Here

    ಉದ್ಯಮ–ಶೈಕ್ಷಣಿಕ ಸಹಯೋಗವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನಗಳ ನೇರ ಪ್ರಾಯೋಗಿಕ ಅನುಭವ ಕಲ್ಪಿಸಲು ಈ ಲ್ಯಾಬ್ ಸ್ಥಾಪಿಸಲಾಗಿದೆ.

    ಐಬಿಎಂ ವಾಟ್ಸನ್‌ಎಕ್ಸ್.ಎಐ, ವಾಟ್ಸನ್‌ಎಕ್ಸ್ ಆರ್ಕೆಸ್ಟ್ರೇಟ್ ಹಾಗೂ ಎಐ ಆಧಾರಿತ ಡೆವಲಪರ್ ಉಪಕರಣಗಳಿಂದ ಸಜ್ಜುಗೊಂಡಿರುವ ಈ ಲ್ಯಾಬ್, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಎಂಟರ್‌ಪ್ರೈಸ್ ಎಐ ವೇದಿಕೆಗಳು ಹಾಗೂ ನೈಜ ಕೈಗಾರಿಕಾ ಅನ್ವಯಿಕೆಗಳ ಕುರಿತು ನೇರ ಅನುಭವ ನೀಡಲಿದೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಐಬಿಎಂ ಇಂಡಿಯಾದ ವಾಟ್ಸನ್‌ಎಕ್ಸ್ ಎಐ ವಿಭಾಗದ ಕಾರ್ಯಕ್ರಮ ನಿರ್ದೇಶಕ ಹಾಗೂ ಮುಖ್ಯಸ್ಥ ರತೀಶ್ ಮುರಳೀಧರನ್,  ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಸ್ಥಾಪಿಸಿದ ಎಂಜಿನಿಯರಿಂಗ್ ಕಾಲೇಜಾಗಿ ಹೊಸ ಮೈಲಿಗಲ್ಲು ನಿರ್ಮಿಸಿದೆ.  

    ಎಐ ತಂತ್ರಜ್ಞಾನವು ಶಕ್ತಿಯುತ ಸಾಧನಗಳನ್ನು ಎಲ್ಲರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡಿ ಜ್ಞಾನವನ್ನು ವ್ಯಾಪಕವಾಗಿ ತಲುಪಿಸಿದೆ. ಆದರೆ ಭವಿಷ್ಯದಲ್ಲಿ ಯಶಸ್ಸು ತಂತ್ರಜ್ಞಾನದಿಂದ ಮಾತ್ರ ನಿರ್ಧಾರವಾಗುವುದಿಲ್ಲ; ಕಲಿಯುವ ಆಸಕ್ತಿ, ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯ ಮತ್ತು ಸಮಾಜಕ್ಕೆ ಉಪಯುಕ್ತ ಪರಿಹಾರಗಳನ್ನು ಕಂಡುಹಿಡಿಯುವ ಮನೋಭಾವವೂ ಮುಖ್ಯ ಎಂದರು.

    Click here

    Click here

    Click here

    Call us

    Call us

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕೃತಕ ಬುದ್ಧಿಮತ್ತೆಯನ್ನು ಮಾನವ ಸಾಮರ್ಥ್ಯವನ್ನು ವೃದ್ಧಿಸುವ ಸಾಧನವಾಗಿ ನೋಡಬೇಕು, ಅದು ಮಾನವನನ್ನು ಬದಲಿಸುವ ತಂತ್ರಜ್ಞಾನವಲ್ಲ. “ಮಾನವೀಯ ಸಾಮಾನ್ಯ ಜ್ಞಾನ ಮತ್ತು ಎಐ ಒಂದಾದಾಗ ವಿಶ್ವಕ್ಕೆ ಅತ್ಯುತ್ತಮ ಪರಿಹಾರಗಳನ್ನು ನೀಡಬಹುದು. ಜಾಗತೀಕರಣದಿಂದ ಹಿಡಿದು ಇಂಟರ್‌ನೆಟ್ ಕ್ರಾಂತಿಯವರೆಗೆ ಪ್ರತಿಯೊಂದು ತಂತ್ರಜ್ಞಾನ ಬದಲಾವಣೆ ಉದ್ಯೋಗಗಳ ಸ್ವರೂಪವನ್ನು ಬದಲಾಯಿಸಿದೆ ಹೊರತು ಉದ್ಯೋಗಗಳನ್ನು ಸಂಪೂರ್ಣವಾಗಿ ನಾಶ  ಪಡಿಸಿಲ್ಲ.

    ಎಐ ಕೂಡ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ. ಆದ್ದರಿಂದ ಶೈಕ್ಷಣಿಕ ಸಂಸ್ಥೆಗಳು ತಮ್ಮ ಪಠ್ಯಕ್ರಮಗಳನ್ನು ಕಾಲಾನುಗುಣವಾಗಿ ಪರಿಷ್ಕರಿಸಬೇಕು ಎಂದರು. ಈ ಐಬಿಎಂ ಎಐ ಲ್ಯಾಬ್ ಮುಂದಿನ ದಿನಗಳಲ್ಲಿ ನವೀನತೆ, ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿಗೆ ಕೇಂದ್ರವಾಗಿದ್ದು, ವಿದ್ಯಾರ್ಥಿಗಳನ್ನು ಎಐ ಆಧಾರಿತ ಭವಿಷ್ಯದ ಉದ್ಯೋಗಗಳಿಗೆ ಸಜ್ಜುಗೊಳಿಸುವ ಪ್ರಮುಖ ವೇದಿಕೆಯಾಗಲಿದೆ ಎಂದರು.

    ಈ ಸಂದರ್ಭದಲ್ಲಿ ಎಐಇಟಿಯ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ಐಬಿಎಂ ಇಂಡಿಯಾದ ಎಐ ತಜ್ಞ ಮನೋಜ್ ಬಿ. ಶೆಟ್ಟಿ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ  ನೀಡಿದರು.

    ಎಐಇಟಿ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್, ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಐಬಿಎಂ ಸಾಫ್ಟ್‌ವೇರ್ ಲ್ಯಾಬ್ಸ್ ಪ್ರತಿನಿಧಿಗಳು  ಇದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೊಠಾರಿ ಸ್ವಾಗತಿಸಿ, ರಕ್ಷಿತಾ ರೈ ಕರ‍್ಯಕ್ರಮ ನಿರೂಪಿಸಿ, ಸಂಪತ್ ಶೆಟ್ಟಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ಆರ್. ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

    22/07/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

    22/07/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ನುಡಿ ನಮನ ಕಾರ್ಯಕ್ರಮ

    21/07/2026
    Leave A Reply Cancel Reply

    five + 19 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ಆರ್. ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ
    • ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಲೋಕರ್ಪಾಣೆ
    • ರೋಟರಿ ಕ್ಲಬ್ ಗಂಗೊಳ್ಳಿ ಇದರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ
    • ಮೂಡ್ಲಕಟ್ಟೆ: ʼಮಕ್ಕಳ ಶೈಕ್ಷಣಿಕ ಪ್ರಯಾಣದಲ್ಲಿ ಪೋಷಕರ ಪಾತ್ರʼ ವಿಶೇಷ ಅಧಿವೇಶನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.