Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆ.7 ಮತ್ತು 8ರಂದು ಆಳ್ವಾಸ್ ಪ್ರಗತಿ – 2026: ಬ್ರಹತ್‌ ಉದ್ಯೋಗ ಮೇಳ
    alvas nudisiri

    ಆ.7 ಮತ್ತು 8ರಂದು ಆಳ್ವಾಸ್ ಪ್ರಗತಿ – 2026: ಬ್ರಹತ್‌ ಉದ್ಯೋಗ ಮೇಳ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ,.
    ಮೂಡುಬಿದಿರೆ:
    ದೇಶದ ಯುವಜನರ ಉದ್ಯೋಗ ಕನಸುಗಳಿಗೆ ಬಲ ತುಂಬುತ್ತಿರುವ ರಾಜ್ಯದ ಪ್ರತಿಷ್ಠಿತ ಉಚಿತ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ-2026’ರ 16ನೇ ಆವೃತ್ತಿ ಆ.7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದ್ದಾರೆ.

    Click Here

    Call us

    Click Here

    ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2007ರಿಂದ ನಿರಂತರವಾಗಿ ಆಯೋಜಿಸಲಾಗುತ್ತಿರುವ ಆಳ್ವಾಸ್ ಪ್ರಗತಿ, ಉದ್ಯೋಗಾಕಾಂಕ್ಷಿಗಳು ಮತ್ತು ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ಕಂಪನಿ ಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ವಿಶ್ವಾಸಾರ್ಹ ಉದ್ಯೋಗ ಮೇಳವಾಗಿ ಗುರುತಿಸಿಕೊಂಡಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾಮಾಜಿಕ ಹೊಣೆಗಾರಿಕೆ ಯೋಜನೆಯ ಅಂಗವಾಗಿ ಈ ಮೇಳವನ್ನು ಸಂಪೂರ್ಣ ಉಚಿತ ವಾಗಿ ಆಯೋಜಿಸಲಾಗುತ್ತಿದ್ದು, ಗ್ರಾಮೀಣ ಹಾಗೂ ಹಿಂದುಳಿದ ಭಾಗಗಳ ಯುವಜನರಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು.

    ಈ ವರ್ಷದ ಉದ್ಯೋಗ ಮೇಳದಲ್ಲಿ ಈಗಾಗಲೇ 276ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಸುಮಾರು 15,860ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿರಲಿವೆ ಎಂದರು.

    ಕಳೆದ ವರ್ಷದ ಆಳ್ವಾಸ್ ಪ್ರಗತಿಯಲ್ಲಿ 2,873 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ ದೊರೆತಿದ್ದು, 3,734 ಮಂದಿ ಮುಂದಿನ ಹಂತದ ನೇಮಕಾತಿಗೆ ಆಯ್ಕೆಯಾಗಿದ್ದರು. ಇದುವರೆಗೆ ಒಟ್ಟು 40,848 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗ ಪಡೆದಿದ್ದು, 66,432ಕ್ಕೂ ಹೆಚ್ಚು ಅಭ್ಯರ್ಥಿಗಳು ವಿವಿಧ ಸಂಸ್ಥೆಗಳಲ್ಲಿ ಮುಂದಿನ ಹಂತಕ್ಕೆ ಶಾರ್ಟ್‌ಲಿಸ್ಟ್‌ನಲ್ಲಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದರು ಎಂದರು.

    ಈ ಬಾರಿಯ ಉದ್ಯೋಗ ಮೇಳದಲ್ಲಿ ಐಟಿ/ಐಟಿಇಎಸ್, ಉತ್ಪಾದನಾ, ಬ್ಯಾಂಕಿಂಗ್‌ ಮತ್ತು ಹಣಕಾಸು, ಆರೋಗ್ಯ ಔಷಧ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ, ನಿರ್ಮಾಣ, ಆತಿಥ್ಯ ಹಾಗೂ ಮಾರಾಟ ಮತ್ತು ಚಿಲ್ಲರೆ ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖ ಸಂಸ್ಥೆಗಳು ನೇಮಕಾತಿ

    Click here

    Click here

    Click here

    Call us

    Call us

    ನಡೆಸಲಿವೆ. ಈ ಬಾರಿ ಮಹಿಳಾ ಅಭ್ಯರ್ಥಿಗಳಿಗಾಗಿ ವಿಶೇಷ ನೇಮಕಾತಿ ಅಭಿಯಾನ ನಡೆಯಲಿದೆ ಎಂದವರು ಹೇಳಿದರು

    ಡಿಪ್ಲೊಮಾ ಹಾಗೂ ಐಟಿಐ ಅಭ್ಯರ್ಥಿಗಳಿಗೆ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗಾವಕಾಶಗಳೂ ಲಭ್ಯವಿದ್ದು, ಮಹಿಳಾ ಅಭ್ಯರ್ಥಿಗಳಿಗಾಗಿ ಟಾಟಾ ಎಲೆಕ್ಟ್ರಾನಿಕ್ಸ್ ವಿಶೇಷ ನೇಮಕಾತಿ ಅಭಿಯಾನ ಹಮ್ಮಿಕೊಂಡಿದೆ. ಕೆಲವು ಸಂಸ್ಥೆಗಳು ವಾರ್ಷಿಕ 5 ಲಕ್ಷದಿಂದ 8 ಲಕ್ಷದವರೆಗೆ ವೇತನ ಪ್ಯಾಕೇಜ್ ಹೊಂದಿರುವ ಹುದ್ದೆಗಳನ್ನೂ ಪ್ರಕಟಿಸಿವೆ. ಪದವಿ, ಸ್ನಾತಕೋತ್ತರ, ಬಿಇ/ಬಿಟೆಕ್, ಡಿಪ್ಲೊಮಾ ಐಟಿಐ ನರ್ಸಿಂಗ್ ವೈದ್ಯಕೀಯ, ಪ್ಯಾರಾ ಮೆಡಿಕಲ್ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಹಾಗೂ ಪ್ರೆಶರ್ಸ್ ಮತ್ತು ಅನುಭವಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

    ಹೊರ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳಿಗೆ ಆಗಸ್ಟ್ 6ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಐಟಿಐ ವಿದ್ಯಾರ್ಥಿಗಳಿಗೆ ಉಡುಪಿಯಿಂದ ಉಚಿತ ಬಸ್ ವ್ಯವಸ್ಥೆಯನ್ನೂ ಒದಗಿಸಲಾಗುತ್ತದೆ.

    ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್‌ಲೈನ್ ನೋಂದಣಿ ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗಾಗಿ 9611750531, 9741440490, 9008207716 ಅಥವಾ 7975223865 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದರು.

    ಸುದ್ದಿಗೋಷ್ಟಿಯಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ಮೆಕ್ಯಾನಿಕಲ್ ಇಂಜಿನಿಯರಿಂಗ್‌ ವಿಭಾಗದ ಯಕ ಪ್ರಾದ್ಯಾಪಕ ಶ್ರೀನಿವಾಸ್‌ ಸಿ.ಎಸ್ ಹಾಗೂ ಆಳ್ವಾಸ್‌ ಸಮಾಜಶಾಸ್ತ್ರ ವಿಭಾಗದ ಅಂಬಾಸಿಡ‌ರ್ ಈಶ್ವರ್ ಮಲ್ಪೆ ಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆಯಲ್ಲಿ ಆಳ್ವಾಸ್ ತಂಡದ ಸಾಧನೆ

    23/07/2026

    ಕುಂದಾಪುರ ಆರ್. ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

    22/07/2026

    ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಲೋಕರ್ಪಾಣೆ

    22/07/2026
    Leave A Reply Cancel Reply

    twelve + 17 =

    Call us

    Click Here

    Call us

    Call us

    Call us
    Highest Viewed Recently
    • ಆ.7 ಮತ್ತು 8ರಂದು ಆಳ್ವಾಸ್ ಪ್ರಗತಿ – 2026: ಬ್ರಹತ್‌ ಉದ್ಯೋಗ ಮೇಳ
    • ತೆಕ್ಕಟ್ಟೆ ಪಿಯು ಕಾಲೇಜಿನ ಹೈಸ್ಕೂಲ್‌ ವಿಭಾಗದಲ್ಲಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ
    • ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆಯಲ್ಲಿ ಆಳ್ವಾಸ್ ತಂಡದ ಸಾಧನೆ
    • ಸಿ.ಜೆ.ಪಿ ನಡೆಸುತ್ತಿರುವ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ದೇಶದ್ರೋಹಿ ಚಟುವಟಿಕೆ: ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ
    • ಕಾಣಿಯಾಗಿದ್ದ ಯುವಕನ ಬೈಕ್‌ ಬಾರ್ಕೂರು ಸೇತುವೆ ಬಳಿ, ಪಡುಕೆರೆ ಬೀಚ್‌ನಲ್ಲಿ ಮೃತದೇಹ ಪತ್ತೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.