Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಯನ್ಸ್‌ ಕ್ಲಬ್‌ ತೆಕ್ಕಟ್ಟೆ: ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ
    ಊರ್ಮನೆ ಸಮಾಚಾರ

    ಲಯನ್ಸ್‌ ಕ್ಲಬ್‌ ತೆಕ್ಕಟ್ಟೆ: ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಲಯನ್ಸ್‌ ಕ್ಲಬ್‌ ತೆಕ್ಕಟ್ಟೆ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಕುಂಭಾಶಿಯ ಗ್ರಾಯತ್ರಿ ಸಭಾಂಗಣದಲ್ಲಿ ಬುಧವಾರ ಜರುಗಿತು.

    Click Here

    Call us

    Click Here

    ಪದಪ್ರದಾನ ಅಧೀಕಾರಿ MJF Ln ಹೃಷಿಕೇಶ್‌ ಹೆಗ್ಡೆ ಮತ್ತು ಜಿಲ್ಲಾ GAT ಆಫೀಸರ್ ಲಯನ್‌ ಅರುಣ್‌ ಹೆಗ್ಡೆ ಅವರ ನೇತೃತ್ವದಲ್ಲಿ ನೂತನ ಅಧ್ಯಕ್ಷರಾಗಿ ವಕ್ವಾಡಿ ಸಂಪತ್‌ ಕುಮಾರ್‌ ಶೆಟ್ಟಿ, ಕಾರ್ಯದರ್ಶಿಯಾಗಿ ಅರುಣ್‌ ಶೆಟ್ಟಿ ಉಳ್ತೂರು ಮತ್ತು ಖಜಾಂಚಿಯಾಗಿ ಹೆಚ್.‌ ಚಂದ್ರಕಾಂತ್‌ ಶೆಟ್ಟಿ ಮತ್ತು ಪದಾಧಿಕಾರಿಗಳ ತಂಡ ಅಧಿಕಾರ ಸ್ವೀಕರಿಸಿದರು.

    ಈ ಸಂದರ್ಭದಲ್ಲಿ ವಲಯ II ರ ವಲಯಾಧ್ಯಕ್ಷರಾದ ಲಯನ್‌ ಪ್ರವೀಣ್‌ ಹೆಗ್ಡೆ ಬನ್ನಾಡಿ, ಪ್ರಾಂತ್ಯ 2ರ ಪ್ರಾಂತ್ಯಾಧ್ಯಕ್ಷರಾದ ಲಯನ್‌ ಸರಸ್ವತಿ ಜಿ. ಪುತ್ರನ್‌, ಕಾರ್ಯದರ್ಶಿ ಲಯನ್ ಆಶಾ ಶಿವರಾಮ ಶೆಟ್ಟಿ, ಎಕ್ಸ್ಟೆಂಶನ್‌ ಚೇರ್‌ಪರ್ಸನ್‌ ಮಲ್ಯಾಡಿ ಸೀತಾರಾಮ ಶೆಟ್ಟಿ, ಮುಖ್ಯಅತಿಥಿಯಾಗಿ ಆಗಮಿಸಿದ ಗೌತಮ್‌ ಶೆಟ್ಟಿ ಟಾರ್ಪೊಡಸ್‌ ಸ್ಪೋರ್ಟ್ಸ್‌ ಕ್ಲಬ್‌ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಲಯನ್‌ ಕೆ. ಸೀತಾರಾಮ ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

    2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆ ಕೆದೂರಿನ ಅನುದೀಪ್‌ ಆಚಾರ್ಯ, ಸರಕಾರಿ ಪ್ರೌಢಶಾಲೆ ಬೇಳೂರಿನ ಕುಮಾರಿ ರೇಷ್ಮಾ ಮತ್ತು ಸರಕಾರಿ ಪ್ರೌಢಶಾಲೆ ತೆಕ್ಕಟ್ಟೆಯ ಕಿಶನ್‌ ಹಾಗೂ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ತೆಕ್ಕಟ್ಟೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಆದ್ಯಾ, ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಅರ್ಜುನ್‌ ದೇವಾಡಿಗ, ಹಾಗೂ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ರಾಧಿಕಾ ಇವರನ್ನು ಲಯನ್‌ ಕಿಶೋರ್‌ ಶೆಟ್ಟಿ ಸಭೆಗೆ ಪರಿಚಯಿಸಿ, ಗಣ್ಯರ ಮೂಲಕ ಸನ್ಮಾನಿಸಿ ವಿದ್ಯಾರ್ಥಿವೇತನ ನೀಡಲಾಯಿತು.

    ಕಳೆದ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯದಲ್ಲಿ 3ನೇ ರ್ಯಾಂಕ್‌ ಪಡೆದ ಎಕ್ಷಲೆಂಟ್‌ ಕಾಲೇಜು ಸುಣ್ಣಾರಿ ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಮಾನ್ಯ ಶೆಟ್ಟಿಯವರನ್ನು ಶಂಕರ್‌ ಶೆಟ್ಟಿ ಬವಲಾಡಿ ಸಭೆಗೆ ಪರಿಚಯಿಸಿ, ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ವಿದ್ಯಾರ್ಥಿವೇತನ ನೀಡಲಾಯಿತು.

    Click here

    Click here

    Click here

    Call us

    Call us

    ಕೃಷಿಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಕೆದೂರು ಭಾಸ್ಕರ್‌ ಶೆಟ್ಟಿಯವರನ್ನು ಗುರುತಿಸಿ ಸನ್ಮಾನಿಸಲಾಯಿತು, ಕೆದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಟಿ.ವಿ. ವಿತರಿಸಲಾಯಿತು ಹಾಗೂ ಸರಕಾರಿ ಪ್ರೌಢಶಾಲೆ ಕೆದೂರಿನ ವಿದಾರ್ಥಿಗಳಿಗೆ ಲಯನ್‌ ಆಶಾ ಕೆ. ಶೆಟ್ಟಿ ಮತ್ತು ಕೆ. ಕರುಣಾಕರ್‌ ಶೆಟ್ಟಿ ಅವರು ಸತತ ಮೂರು ವರ್ಷದಿಂದ ನೀಡುತ್ತಿರುವ ಕ್ರೀಡಾ ಸಮವಸ್ತ್ರವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಉದಯ್‌ ಶೆಟ್ಟಿ ಅವರಿಗೆ ಹಸ್ತಾಂತರಿಸಲಾಯಿತು.

    ಅನಾರೋಗ್ಯದಿಂದ ಬಳಲುತ್ತಿರುವ ಕೆದೂರು ಶ್ರೀಮತಿ ಶೆಟ್ಟಿಯವರ ಚಿಕಿತ್ಸೆಗೆ ಕ್ಲಬ್‌ ನ ದಾನಿಗಳಿಂದ ಸಂಗ್ರಹಿಸಿದ ಮೊತ್ತ ಸುಮಾರು 25,000/- ರೂಪಾಯಿಗಳನ್ನು ಅವರ ಸಂಬಂಧಿಕರಿಗೆ ನೀಡಲಾಯಿತು.

    ಕಾರ್ಯಕ್ರಮದಲ್ಲಿ ಲಯನ್‌ ಜ್ಯೋತಿ ಶೆಟ್ಟಿ ಪ್ರಾರ್ಥಿಸಿದರು, ಲಯನ್‌ ರಾಜೇಂದ್ರ ಶೆಟ್ಟಿ ಧ್ವಜವಂದನೆ ಮಾಡಿದರು, ನೀತಿಸಂಹಿತೆಯನ್ನು ಲಯನ್‌ ಸದಾರಾಮ ಶೆಟ್ಟಿ ವಾಚಿಸಿದರು. ಅತಿಥಿಗಳ ಪರಿಚಯವನ್ನು ಲಯನ್‌ ಸರೋಜಿನಿ ಜೆ. ಶೆಟ್ಟಿ, ಲಯನ್‌ ಧರ್ಮರಾಜ ಮುದಲಿಯಾರ್‌, ಲಯನ್‌ ರಮೇಶ್‌ ಶೆಟ್ಟಿ ನೆರವೇರಿಸಿದರು. ಕಾರ್ಯಕ್ರಮ ನಿರೂಪಣೆಯಲ್ಲಿ ಲಯನ್‌ ಜಯಕರ್‌ ಹೆಗ್ಡೆ ಮತ್ತು ಲಯನ್‌ ಹರ್ಷವರ್ಧನ್‌ ಶೆಟ್ಟಿ ಸಹಕರಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರಾವಳಿ ಮಹಿಳಾ ಕಥಾ ಸ್ಪರ್ಧೆ ಫಲಿತಾಂಶ: ವಿಜಯಶ್ರೀ ಎಂ. ಹಾಲಾಡಿ ಅವರ ಕಥೆ ಪ್ರಥಮ

    24/07/2026

    ಬಾಸ್ಕೆಟ್ ಬಾಲ್ ಪಂದ್ಯಾವಳಿ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

    24/07/2026

    ಕೋಡಿಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಸಿರು ಹೆಜ್ಜೆ ಮೂರನೇ ವರ್ಷದ ಅಭಿಯಾನ

    24/07/2026
    Leave A Reply Cancel Reply

    twenty − 17 =

    Call us

    Click Here

    Call us

    Call us

    Call us
    Highest Viewed Recently
    • ಕರಾವಳಿ ಮಹಿಳಾ ಕಥಾ ಸ್ಪರ್ಧೆ ಫಲಿತಾಂಶ: ವಿಜಯಶ್ರೀ ಎಂ. ಹಾಲಾಡಿ ಅವರ ಕಥೆ ಪ್ರಥಮ
    • ಬಾಸ್ಕೆಟ್ ಬಾಲ್ ಪಂದ್ಯಾವಳಿ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
    • ಕೋಡಿಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಸಿರು ಹೆಜ್ಜೆ ಮೂರನೇ ವರ್ಷದ ಅಭಿಯಾನ
    • ಲಯನ್ಸ್‌ ಕ್ಲಬ್‌ ತೆಕ್ಕಟ್ಟೆ: ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ
    • ಮಾದಕ ದ್ರವ್ಯಗಳಿಂದ ದೂರವಿದ್ದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಅಬ್ದುಲ್ ರಹೀಮ್ ಹುಸೇನ್ ಶೇಖ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.