ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಡಿಗ್ರಾಮ ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ ಹಾಗೂ ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ನೇತೃತ್ವದಲ್ಲಿ ಪಂಚವರ್ಣ ಸಂಘಟನೆ ಕೋಟ, ಗೀತಾನಂದ ಫೌಂಡೇಶನ್ ಮಣೂರು ಮಾರ್ಗದರ್ಶನದಲ್ಲಿ ಕೋಡಿಗ್ರಾಮದಲ್ಲಿ ಮೂರನೇ ವರ್ಷದ ಪಂಚವರ್ಣ ಹಸಿರು ಹೆಜ್ಜೆ ಮನೆಗೊಂದು ಗಿಡ ನೆಡುವ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಕೋಡಿ ಹೊಸಬೇಂಗ್ರೆಯ ಕರ್ನಾಟಕ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊರಗ ಪೂಜಾರಿ ಮನೆಯಿಂದ ಮನೆಗೊಂದು ಪಾರಿಜಾತ, ಲಕ್ಷ್ಮಣ ಫಲ ಹಾಗೂ ವಿವಿಧ ಹಣ್ಣುಗಳ ಗಿಡ ನೆಡುವ ಕಾರ್ಯಕ್ರಮದ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಸಂಯೋಜಕರಾಗಿ ಅಂಗನವಾಡಿ ಕಾರ್ಯಕರ್ತೆ ಯಮುನಾ ಲಕ್ಶ್ಮಣ ಕುಂದರ್ ನೆರೆದಿದ್ದ ಪರಿಸರಾಸಕ್ತರಿಗೆ ಹಸಿರು ಹಸಿರು ಹೆಜ್ಜೆ ಮಹತ್ವ ತಿಳಿಸಿದರು.
ಕಾರ್ಯಕ್ರಮ ಸಂಯೋಜಕರಾದ ಕೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷಗಳಾದ ಪ್ರಭಾಕರ್ ಮೆಂಡನ್, ಗೀತಾ ಖಾರ್ವಿ ಹಸಿರು ಮಹತ್ವ ಸಾರಿದರು.ಕೋಡಿ ಕನ್ಯಾನ ಅಂಗನವಾಡಿ ಕಾರ್ಯಕರ್ತೆ ಪ್ರೀತಿ ಎಸ್, ಸಮನ್ವಯ ಸಂಜೆವಿನಿ ಮಾಜಿ ಅಧ್ಯಕ್ಷೆ ದೀಪಾ ಆರ್ ಖಾರ್ವಿ, ಸ್ತ್ರೀ ಶಕ್ತಿ ಸಂಘದ ಸದಸ್ಯೆ ಸುಜಾತಾ ಖಾರ್ವಿ, ಸವಿತಾ ಸೂರ್ಯ, ಭಾರತಿ ಹರೀಶ್, ಅಂಗನವಾಡಿ ಸಹಾಯಕಿ ಸವಿತಾ ಉಪಸ್ಥಿತರಿದ್ದರು.
ಕಾರ್ಯಕ್ರಮದ ವಿಶೇಷತೆ: ಕೊರಗ ಪೂಜಾರಿ ಅವರು ಅಭಿಯಾನದಲ್ಲಿ ಕೈಜೋಡಿಸಿದ ಸಂಘಟನೆಗಳಿಗೆ ಅಭಿನಂದನೆ ಸಲ್ಲಿಸಿ ಮಕ್ಕಳ ಕೈಯಿಂದ ಗಿಡ ನೆಡಿಸಿ ಪರಿಸರ ಸಂರಕ್ಷಣೆಯ ಉದ್ದೇಶ ಹಾಗೂ ಮಹತ್ವದ ಬಗ್ಗೆ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
















