ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡಟ್ಟು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಯದ ವಾತಾವರಣ ಸೃಷ್ಟಿಸಿದ್ದ ಚಿರತೆಯೊಂದು ಮಂಗಳವಾರ ರಾತ್ರಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಬಿದ್ದಿದೆ. ಗುಡ್ಡಟ್ಟು ಭಾಗದಲ್ಲಿ ಚಿರತೆ ಸಾಕಷ್ಟು ಉಪಟಳ ನೀಡುತ್ತಿದೆ ಎಂಬ ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಬೋನು ಇರಿಸಿದ್ದ ಶಂಕರನಾರಾಯಣ ವಲಯದ ಅರಣ್ಯಾಧಿಕಾರಿಗಳು, ಸುಮಾರು ಐದು ವರ್ಷ ಪ್ರಾಯದ ಗಂಡು ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅಭಯಾರಣ್ಯಕ್ಕೆ ರವಾನಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜ ಪ್ರಗತಿಯನ್ನು ಸಾಧಿಸಲು ಆರ್ಥಿಕ ವ್ಯವಸ್ಥೆ ಮುಂಚೂಣಿಯಲ್ಲಿ ಇರಬೇಕು. ಇಂದು ಸಹಕಾರಿ ಕ್ಷೇತ್ರವೂ ಬೆಳೆದಿದೆ ಜೊತೆಗೆ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರು ಹಾಗೂ ಅದರ ಉಪಯೋಗ ಪಡೆದವರ ಉನ್ನತಿಯೂ ಆಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು. ಅವರು ಶಿರೂರು ಮೇಲ್ಪೇಟೆಯಲ್ಲಿ ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ೭ನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ ಸಹಕಾರಿ ಕ್ಷೇತ್ರ ಕೃಷಿಕರು, ಕಾರ್ಮಿಕರ ವರ್ಗಕ್ಕೆ ರಕ್ಷಣಾ ಕವಚವಾಗಿ ಸಹಕಾರಿ ಕ್ಷೇತ್ರ ಕಾರ್ಯನಿರ್ವಹಿಸುತ್ತಿದೆ. ದೇಶದಲ್ಲಿ ಆರ್ಥಿಕ ಮುಗ್ಗಟ್ಟಿರುವ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಗ ಮೇಲೆ ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರ ಮತ್ತಷ್ಟು ವಿಸ್ತರಿಸಿಕೊಳ್ಳಲು ಸಾಧ್ಯವಾಗುತ್ತಿದೆ ಎಂದರು. ಭಟ್ಕಳದ ಮಾಜಿ ಶಾಸಕ ಜೆ.ಡಿ. ನಾಯ್ಕ್ ಕಂಪ್ಯೂಟರ್ ಉದ್ಘಾಟನೆ ಮಾಡಿದರು. ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಹೆಗ್ಡೆ ಭದ್ರತಾ ಕೊಠಡಿ ಉದ್ಘಾಟಿಸಿದರು. ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸತ್ಯ, ನ್ಯಾಯಕ್ಕಾಗಿ ಹೋರಾಟ ಮಾಡಿರುವ ಕೋಟಿ ಚೆನ್ನಯರನ್ನು ದೈವವಾಗಿ ತುಳುನಾಡಿನ ಸಂಸ್ಕೃತಿಯೊಂದಿಗೆ ಆರಾಧಿಸಿಕೊಂಡು ಬರಲಾಗುತ್ತಿದ್ದು, ಅವರ ತತ್ವಾದರ್ಶಗಳಿಂದ ಭಕ್ತರ ಮನದಲ್ಲಿ ನೆಲೆಯಾಗಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾರಂಭದಲ್ಲಿಯೇ ವೀರ ಪುರುಷರಾದ ಕೋಟಿ ಚೆನ್ನಯ್ಯರ ಅದ್ಭುತ ಗರಡಿ ನಿರ್ಮಾಣಗೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಬುಧವಾರ ಬೈಂದೂರು ನಾಕಟ್ಟೆಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಭೇಟಿ ನೀಡಿ ಮಾತನಾಡಿ ಕೋಟಿ ಚೆನ್ನಯರ ಮೂಲ ಗರಡಿಗಳಲ್ಲಿ ಕಟ್ಟಕಡೆಯದಾದರೂ ಕೂಡ ಉಳಿದೆಲ್ಲಾ ಗರಡಿಗಳನ್ನು ಮೀರಿಸುವಂತೆ ಬೈಂದೂರಿನ ಗರಡಿ ನಿರ್ಮಾಣಗೊಳ್ಳುತ್ತಿದೆ. ಇದು ಇಡಿ ಊರಿಗೆ ಮೆರಗು ನೀಡುತ್ತಿದೆ ಎಂದರು. ಈ ಸಂದರ್ಭ ಖಂಬದಕೋಣೆ ರೈತರ ಸೇವಾ ಸಹಕಾರಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೋಹನ ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ಬಿ. ದೊಟ್ಟಯ್ಯ ಪೂಜಾರಿ, ಯಡ್ತರೆ ಗ್ರಾಪಂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಇಲ್ಲಿನ ಶ್ರೀ ಕುಂದೇಶ್ವರ ದೇವಸ್ಥಾನ ದೀಪೋತ್ಸವಕ್ಕೆ ಸಹಸ್ರಾರು ಭಕ್ತರ ಸಾಕ್ಷಿಯಾದರು. ಮಂಗಳವಾರ ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿದ್ದು, ಸಂಜೆ ಪ್ರಣತಿ ದೀಪ ಬೆಳಗಿಸಲು ಸಹಸ್ರಾರು ಭಕ್ತರು ಕೈಜೋಡಿಸಿದರು. ಹಣತೆಯಿಂದ ಹಣತೆಗೆ ದೀಪ ಬೆಳಗಿಸಿ ಸಂಭ್ರಮಿಸಿದರು. ಶ್ರೀ ಕುಂದೇಶ್ವರ ದೇವಸ್ಥಾನಕ್ಕೆ ಐತಿಹಾಸಿಕ ಹಿನ್ನೆಲೆಯಿದ್ದು, ಕುಂದೇಶ್ವರ ರಾಜ ದೇವಸ್ಥಾನ ಪ್ರತಿಷ್ಠಾಪನೆ ಮಾಡಿದ್ದರಿಂದ ಕುಂದೇಶ್ವರ ಎಂಬ ಹೆಸರು ಬರಲು ಕಾರಣ ಎಂಬ ನಂಬಿಕೆಯಿದೆ. ಪ್ರಾತಕಾಲ ಪೂಜೆ, ರುದ್ರಾಭಿಷೇಕ ಹಾಗೂ ಶಿವನಿಗೆ ಪ್ರಿಯವಾದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಮಧ್ಯಾಹ್ನ ಮಹಾ ಅನ್ನಸಂತರ್ಣೆ ಕೂಡಾ ನಡೆಯಿತು. ಕುಂದೇಶ್ವರ ದೇವಸ್ಥಾನ ಬೀದಿ ದೀಪಾಲಂಕೃತವಾಗಿದ್ದು, ದೇವಸ್ಥಾನಕ್ಕೆ ಅಳವಡಿಸಿದ ಬಣ್ಣದ ದೀಪಗಳಿಂದ ಮತ್ತಷ್ಟು ಮೆರಗು ಬಂದಿತ್ತು. ಕುಂದೇಶ್ವರ ದೇವಸ್ಥಾನ ಪುಷ್ಕ್ಕರಣಿಗೆ ವಿಶೇಷ ವಿದ್ಯುತ್ ದೀಪ ಅಲಂಕಾರ ಮಾಡಿದ್ದು, ಪುಸ್ಕರಣಿಗೊಂದು ಹೊಸ ಕಳೆ ಮೂಡಿಸಿತ್ತು. ಹಾಗೆ ದೇವಸ್ಥಾನ ಬಳಿ ಇರುವ ಅಶ್ವಥಕಟ್ಟೆ ಬಳಿ ನಿರ್ಮಿಸಿದ ಬೃಹತ್ ಆಂಜನೇಯ ಮೂರ್ತಿ ಎಲ್ಲರ ಆಕರ್ಷಿಣೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ನ.26: ಕುಂದಾಪುರ ತಾಲೂಕು ಪಂಚಾಯತಿಯ ಡಾ. ವಿಎಸ್ ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆ ಸದಸ್ಯರ ಜಟಾಪಟಿ, ಅಧಿಕಾರಿಗಳಿಗೆ ತರಾಟೆ ಮೊದಲಾದವುಗಳಿಗೆ ಸಾಕ್ಷಿಯಾಯಿತು. ಆಲೂರಿನಲ್ಲಿ ನಡೆಯುತ್ತಿರುವ ಕೆಂಪುಕಲ್ಲು ಗಣಿ ನಿಂತ ಬಗ್ಗೆ ಸದಸ್ಯೆ ಇಂದಿರಾ ಶೆಟ್ಟಿ ಮಾತನಾಡಿ ಆಲೂರು ಶಾಲೆಯ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕೆಂಪುಕಲ್ಲು ಗಣಿ ನಡೆಸಲು ಅವಕಾಶ ಮಾಡಿಕೊಡಬೇಕು. ಕಲ್ಲು ಕ್ವಾರಿ ನಿಂತಿದ್ದರಿಂದ ಬಡವರಿಗೆ ಕೆಲಸ ಇಲ್ಲದಂತಾಗಿದೆ. ಕಲ್ಲುಕ್ವಾರಿ ನಿಯಮಗಳನ್ನು ಸರಳಿಕರಿಸಿ ಕೆಂಪುಕಲ್ಲು ಗಣಿಗೆ ಮತ್ತೆ ಅವಕಾಶ ಮಾಡಿಕೊಡಬೇಕು. ಹಿಂದೆಲ್ಲಾ ದಾಳಿ ಮಾಡುವಾಗ ಮಾಹಿತಿ ಕೊಟ್ಟು ಅಧಿಕಾರಿಗಳು ದಾಳಿ ನಡೆಸುತ್ತಿದ್ದರು. ಈ ಭಾರಿ ಮಾಹಿತಿ ನೀಡದೇ ದಾಳಿ ನಡೆಸಿದ್ದು ಏಕೆ ಎಂದು ಪ್ರಶ್ನಿಸಿದ್ದು ಗಣಿ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಯನ್ನು ತೆರೆದಿಟ್ಟಿತು. ಇದಕ್ಕೆ ಉತ್ತರಿಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಭೂವಿಜ್ಞಾನಿ ಮಹೇಶ್ ಜಿಲ್ಲೆಯಲ್ಲಿ ಒಂದು ಕೆಂಪುಕಲ್ಲು ಗಣಿ ಹೊರತುಪಡಿಸಿ ಉಳಿದೆಲ್ಲ ಗಣಿಗಾರಿಕೆಯೂ ಅಕ್ರಮವಾಗಿ ನಡೆಯುತ್ತಿದೆ. ಗಣಿ ನಡೆಸುವವರಿಗೆ ಪರವಾನಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ) ಕುಂದಾಪುರ ವಲಯದ ಬೆಳ್ಳಿ ಹಬ್ಬದ ಸವಿ ನೆನೆಪು ಹಾಗೂ ೨೬ನೇ ಪದಗ್ರಹಣ ಸಮಾರಂಭ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉದ್ಯಮಿ ಸುರೇಶ್ ಡಿ ಪಡುಕೋಣೆ ಮಾತನಾಡಿ ಛಾಯಾಗ್ರಾಹಕರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಇತರರ ಬಾಳಿಗೆ ಬೆಳಕಾಗುವ ಕೆಲಸಕ್ಕೆ ಮುಂದಾಗಿರುವುದು ಶ್ಲಾಘನೀಯ ಕಾರ್ಯ. ತಮ್ಮ ಮನಸ್ಸು, ಕನಸುಗಳನ್ನು ಜನರಿಗೆ ಅರ್ಪಿಸಿ ಪ್ರಾಮಾಣಿಕ ಸೇವೆ ನೀಡುವ ಛಾಯಗ್ರಾಹಕರಿಗೆ ದೇವರು ಎಂದಿಗೂ ಒಳ್ಳೇದನ್ನೇ ಕರುಣಿಸುತ್ತಾನೆ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್ಕೆಪಿಎ ಉಡುಪಿ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿಗಾರ್ ಮಾತನಾಡಿ, ಹಿಂದಿನಿಂದಲೂ ಎಸ್ಕೆಪಿಎ ಕುಂದಾಪುರ ವಲಯ ಸಮಾಜಸೇವೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದೆ. ಪ್ರಮೋದ್ ಚಂದನ್ ಅವರ ಮುಂದಾಳತ್ವದಲ್ಲಿ ಸಂಘವು ಅನೇಕ ಚಟುವಟಿಕೆಗಳನ್ನು ನಡೆಸಿದೆ. ನೂತನ ಅಧ್ಯಕ್ಷ ರಾಜಾ ಮಠದಬೆಟ್ಟು ನಾಯಕತ್ವದಲ್ಲಿ ಶೀಘ್ರವೇ ಈ ಭಾಗದಲ್ಲಿ ಛಾಯಾಗ್ರಾಹಕರಿಗೆ ಅಗತ್ಯವಿರುವ ಛಾಯಾ ಭವನ ನಿರ್ಮಾಣಗಳ್ಳಲಿ. ತನ್ಮೂಲಕ ಛಾಯಾಗ್ರಾಹಕರಿಗೆ ಈ…
ಬೈಂದೂರು ಚಂದ್ರಶೇಖರ ನಾವಡ. ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂದ ಕುವೆಂಪುರವರ ಸಂದೇಶವನ್ನು ಅಕ್ಷರಶ: ಪಾಲಿಸಿ ಕನ್ನಡ ನಾಡು-ನುಡಿ-ಸಂಸ್ಕೃತಿಯ ಕಂಪನ್ನು ಗಲ್ಫ್ ದೇಶಗಳಲ್ಲಿ ಪಸರಿಸಿದ ಪ್ರೀತಿಯಿಂದ ‘ಬೀಜಿ’ ಎಂದು ಕರೆಯಲ್ಪಡುವ ಬಿ ಜಿ ಮೋಹನ್ ದಾಸ್ ರವರ ಅನುಪಮ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಬೈಂದೂರು ತಾಲೂಕಿನ ಬಿಜೂರಿನಲ್ಲಿ ಜನಿಸಿ ಉದ್ಯೋಗ ನಿಮಿತ್ತ ದೀರ್ಘ ಕಾಲ ತಾಯ್ನಾಡಿನಿಂದ ದೂರದ ದುಬಾಯಿಯಲ್ಲಿ ವಾಸವಾಗಿದ್ದ ಅವರು ಅಲ್ಲಿ ನೆಲೆಸಿದ್ದ ಕನ್ನಡಿಗರಲ್ಲಿ ತಾಯ್ನಾಡಿನಿಂದ ದೂರವಿರುವ ನೋವು ಕಾಡದಂತೆ ಶ್ರಮಿಸಿದರು. ಸಾಹಿತ್ಯ, ಸಿನಿಮಾ, ನಾಟಕ, ಯಕ್ಷಗಾನ, ಕ್ರೀಢೆ ಮೊದಲಾದ ಚವಟುಟಿಕೆಗಳನ್ನು ನಿರಂತರವಾಗಿ ಸಂಘಟಿಸಿದರು. ನಾಡಿನ ಹಿರಿಯ ಕಲಾವಿದರು, ಸಾಹಿತಿಗಳು ಸಾಧಕರನ್ನು ದುಬಾಯಿ ಕನ್ನಡ ಸಂಘದ ಆಶ್ರಯದಲ್ಲಿ ಬರಮಾಡಿಕೊಂಡರು. ಕೊಲ್ಲಿಯಲ್ಲಿ ನೆಲೆಸಿದ ಮಣ್ಣಿನ ಮಕ್ಕಳಲ್ಲಿ ಧರ್ಮ-ಜಾತಿ ಮೀರಿದ ಭ್ರಾತ್ರತ್ವ ಪ್ರೇಮ ಬೆಳೆಸಿ, ಬದುಕಿನ ಕಷ್ಟ-ಸುಖಗಳಲ್ಲಿ ಪರಸ್ಪರ ಸಹಭಾಗಿಗಳಾಗುವಂತೆ ಪ್ರೋತ್ಸಾಹಿಸಿ ಕುವೆಂಪುರವರ ವಿಶ್ವಮಾನವ ಕಲ್ಪನೆಯನ್ನು ಸಾಕಾರಗೊಳಿಸಲು ಶ್ರಮಿಸಿದ…
ಕುಂದಾಪ್ರ ಡಾಟ್ ಕಾಂ’ ಸುದ್ದಿ. ಕುಂದಾಪುರ, ನ.26: ಕೋಡಿಯ ಶ್ರೀ ಚಕ್ರಮ್ಮ ದೇವಸ್ಥಾನದ ಆಡಳಿತ ಮೋಕ್ತೇಸರ, ಪಾತ್ರಿ,ಮಾಧವ ಪೂಜಾರಿ ನಿಧನರಾದರು. ಕುಂದಾಪುರದ ಹಿರಿಯ ಧಾರ್ಮಿಕ ನೇತಾರರಲ್ಲಿ ಓರ್ವರಾಗಿದ್ದ ಅವರು ತಮ್ಮ ಬರಹಗಳ ಮೂಲಕವೂ ಜನಪ್ರೀಯರಾಗಿದ್ದರು. ಸ್ವತಹ ಪತ್ರಿಕೆಯನ್ನೂ ನಡೆಸಿದ್ದರು. ಕೋಡಿಯ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಯಲ್ಲೂ ಪಾಲ್ಗೊಂಡಿದ್ದರು. ಇವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ವೈದ್ಯರ ಜೀವನದಲ್ಲಿ ನೋವು ನಲಿವುಗಳ ಅಪಾರ ಅನುಭಗಳು ಉಂಟಾಗುತ್ತವೆ. ಕರ್ತವ್ಯನಿಷ್ಠ ವೈದ್ಯ, ಸಮಾಜಕ್ಕೆ ಅನುಕೂಲವಾಗುವ ಸೇವೆಯನ್ನೇ ನೀಡುತ್ತಾನೆ. ಹಲವು ಮನೋಭಾವದ ಜನರೊಂದಿಗೆ ಸ್ಪಂದಿಸಿದಾಗ ಇಲ್ಲಿ ತಾಳ್ಮೆ, ವೃತ್ತಿ ಪ್ರಜ್ಞೆ ಎರಡೂ ಬೇಕಾಗುತ್ತದೆ. ಅಂತಹ ಅಪೂರ್ವ ಅನುಭವಗಳನ್ನು ಸ್ವಾರಸ್ಯಕರವಾಗಿ ತನ್ನ “ನೆನಪಿನಾಳದಿಂದ” ಕೃತಿಯಲ್ಲಿ ಕುಂದಾಪುರದ ಖ್ಯಾತ ವೈದ್ಯ ಡಾ| ಎ. ರಂಜಿತ್ ಕುಮಾರ್ ಶೆಟ್ಟಿ ನಿರೂಪಿಸಿದ್ದಾರೆ. ಇದು ಸಮಾಜದ ಪ್ರತಿಯೊಬ್ಬರೂ ಓದಲೇ ಬೇಕಾದ ಪುಸ್ತಕ. ವೈದ್ಯರ ಹಾಗೂ ಸಮಾಜದ ಕೆಲವರ ನಡುವೆ ಸಂಬಂಧಗಳು ಸಡಿಲವಾಗುತ್ತಿರುವಾಗ ಇಂತಹ ಕೃತಿ ಓದಿದರೆ ತಿಳುವಳಿಕೆ ಮೂಡುತ್ತದೆ” ಎಂದು ಮೂಡಬಿದಿರೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಹೇಳಿದರು. ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ “ಕುಂದಪ್ರಭ” ಆಶ್ರಯದಲ್ಲಿ ನಡೆದ ಡಾ.ಎ. ರಂಜಿತ್ ಕುಮಾರ್ ಶೆಟ್ಟಿಯವರ “ನೆನಪಿನಾಳದಿಂದ” ಪುಸ್ತಕ ಬಿಡುಗಡೆ ಸಮಾರಂಭ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ವೈದ್ಯಕೀಯ ಸೇವೆಯಲ್ಲಿ ತನ್ನ ಅನುಭವಗಳ ಬುತ್ತಿ ಬಿಚ್ಚಿ ಹೇಳಿದ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರದ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸುವ ಸದುದ್ದೇಶದೊಂದಿಗೆ ಒಂದಿಷ್ಟು ಸಮಾನ ಮನಸ್ಕರು ಜೊತೆಯಾಗಿ ಹಮ್ಮಿಕೊಂಡಿರುವ ’ಕ್ಲೀನ್ ಕುಂದಾಪುರ ಪ್ರಾಜೆಕ್ಟ್’ ಅಭಿಯಾನಕ್ಕೆ ಕುಂದಾಪುರದ ಪೊಲೀಸರು ಕೈಜೋಡಿಸಿದ್ದು, ಭಾನುವಾರ ಕೋಡಿ ಕಡಲ ಕೀನಾರೆಯಲ್ಲಿ ಜರುಗಿದ ಸ್ವಚ್ಛತಾ ಕಾರ್ಯದಲ್ಲಿ ಕುಂದಾಪುರದ ಎಎಸ್ಪಿ ಹರಿರಾಮ್ ಶಂಕರ್ ಸೇರಿದಂತೆ ಉಪವಿಭಾಗದ ವಿವಿಧ ಪೊಲೀಸ್ ಠಾಣಾ ಸಿಬ್ಬಂಧಿಗಳು ಸ್ವಯಂಪ್ರೇರಣೆಯಿಂದ ಭಾಗವಹಿಸಿದರು. ಕೋಡಿ ಸೀವಾಕ್ ಸಮೀಪ ನಡೆಯುತ್ತಿದ್ದ ಸ್ವಚ್ಛತಾ ಕಾರ್ಯದಲ್ಲಿ ಕುಂದಾಪುರ ವಿಭಾಗದ ಎಎಸ್ಪಿ ಹರಿರಾಮ್ ಶಂಕರ್, ವೃತ್ತನಿರೀಕ್ಷಕ ಮಂಜಪ್ಪ ಡಿ.ಆರ್ ಅವರ ನೇತೃತ್ವದಲ್ಲಿ ಕುಂದಾಪುರ ವೃತ್ತ ನಿರೀಕ್ಷಕರ ಕಛೇರಿ, ಕುಂದಾಪುರ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ, ಕುಂದಾಪುರ ಸಂಚಾರಿ ಪೊಲೀಸ್ ಠಾಣೆ, ಕೊಲ್ಲೂರು, ಗಂಗೊಳ್ಳಿ ಹಾಗೂ ಅಮಾಸೆಬೈಲು ಪೊಲೀಸ್ ಠಾಣೆಯ ಸುಮಾರು ೩೦ಕ್ಕೂ ಹೆಚ್ಚು ಸಿಬ್ಬಂಧಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದದರು. ಎಎಸ್ಪಿ ಹರಿರಾಮ್ ಶಂಕರ್ ಅವರ ಪತ್ನಿ ಅನಂತಾ ಅವರು ಭಾಗವಹಿಸಿದ್ದು ವಿಶೇಷವಾಗಿತ್ತು. ಕಳೆದು ಕೆಲವು ತಿಂಗಳುಗಳಿಂದ ಪ್ರತಿ ಭಾನುವಾರ ನಿರಂತರವಾಗಿ ನಡೆಯುತ್ತಿರುವ…
