ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಿರಂತರ ಕೃಷಿ ಕಾಯಕದ ನಡುವೆ ಕೃಷಿಕರ ಜೀವಾಳ ಸಾಕು ಪ್ರಾಣಿಗಳು. ಅವುಗಳನ್ನು ಸಲಹಿ ಕ್ರೀಡೆಯಲ್ಲಿ ಭಾಗವಹಿಸುವಂತೆ ತರಬೇತಿ ನೀಡಿ ಊರಿನ ಜನರೆಲ್ಲಾ ಸಂಭ್ರಮಿಸುವ ಕಂಬಳೋತ್ಸವವು ನಿರಂತರವಾಗಿ ನಡೆಯುತ್ತಿರಲಿ ಎಂದು ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಹೇಳಿದರು. ಅವರು ತಗ್ಗರ್ಸೆ ಹೆಗ್ಡೆಯವರ ಮನೆ ಕಂಬಳಗದ್ದೆಯಲ್ಲಿ ಭಾನುವಾರ ನಡೆದ ಸಾಂಪ್ರದಾಯಿಕ ಕಂಬಳೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಐಎಫ್ಎಸ್ ಅಧಿಕಾರಿ ಜಗನ್ನಾಥ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಕೆ. ಬಾಬು ಶೆಟ್ಟಿ, ಕಂಬಳ ಸಮಿತಿ ಬೈಂದೂರು ತಾಲೂಕು ಅಧ್ಯಕ್ಷ ವೆಂಕಟ ಪೂಜಾರಿ ಸಸಿಹಿತ್ಲು ಉಪಸ್ಥಿತರಿದ್ದರು. ತಗ್ಗರ್ಸೆ ಹೆಗ್ಡೆ ಕುಟುಂಬದ ಟಿ. ನಾರಾಯಣ ಹೆಗ್ಡೆ ತಗ್ಗರ್ಸೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಜನ್ಮನೆ ರತ್ನಾಕರ ಶೆಟ್ಟಿ ಅರೆಶಿರೂರು ಧನ್ಯವಾದ ಸಲ್ಲಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸ್ವರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ವರ್ಧೆಗಳ ವಿಜೇತರು: ಕಂಬಳೋತ್ಸವ ಹಲಗೆ ವಿಭಾಗದಲ್ಲಿ ಆತ್ಮಜ &…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಬೈಂದೂರು ತಾಲ್ಲೂಕು ಭಾರತ ಸೇವಾ ದಳದ ಆಶ್ರಯದಲ್ಲಿ ಇಲ್ಲಿನ ಗಾಧಿ ಮೈದಾನದಲ್ಲಿ ಸೋಮವಾರ ಭಾರತ ಸೇವಾದಳದ ರಾಷ್ಟ್ರೀಯ ಭಾವೈಕ್ಯತಾ ಮೇಳ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಭಾವೈಕ್ಯತೆ ಮೂಡಿಸುವ ಉದ್ದೇಶ ಹೊಂದಿರುವ ರಾಷ್ಟ್ರೀಯ ಭಾವೈಕ್ಯತಾ ಮೇಳದಲ್ಲಿ ಭಾಗವಹಿಸುವ ಮಕ್ಕಳಲ್ಲಿ ದೇಶಭಕ್ತಿ, ದೇಶದ ಎಲ್ಲರೂ ಒಂದೇ ಎಂಬ ಭಾವನೆ ಮೂಡುವಂತಾದರೆ ಕಾರ್ಯಕ್ರಮ ಸಾರ್ಥಕವೆನಿಸುತ್ತದೆ. ಮೇಳದ ಜತೆಗೆ ಶಾಲೆಗಳಲ್ಲಿ ಮಕ್ಕಳಿಗೆ ಸೇವಾದಳದ ಧ್ಯೇಯವನ್ನು ರೂಢಿಸಿಕೊಳ್ಳಲಾಗುವ ತರಬೇತಿ ನೀಡಬೇಕು ಎಂದು ಹೇಳಿದರು. ಮಕ್ಕಳ ಭವಷ್ಯ ರೂಪಿಸುವ ಇಂತಹ ಕಾರ್ಯಕ್ರಮಗಳನ್ನು ನಡೆಸಲು ಶಾಲೆಗಳಿಗೆ ಸರ್ಕಾರದಿಂದ ಅನುದಾನ ಇಲ್ಲದಿರುವುದು ಸರಿಯಲ್ಲ. ಆ ನಿಟ್ಟಿನಲ್ಲಿ ಪ್ರಯತ್ನ ನಡೆಸುವ ಭರವಸೆ ನೀಡಿದ ಅವರು ಶೀಘ್ರದಲ್ಲಿ ಬೈಂದೂರಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದರು. ತಾಲ್ಲೂಕು ಸೇವಾದಳದ ಅಧ್ಯಕ್ಷ ದೀಪಕ್ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಉಬ್ಜೇರಿ ಸ್ವಾಗತಿಸಿದರು. ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ಹಾಗೂ ರುಡ್ಸೆಡ್ ಬ್ರಹ್ಮಾವರ ಈ ಸಂಸ್ಥೆಗಳ ಜಂಟಿ ಅಶ್ರಯದಲ್ಲಿ ನಾರಾಯಣ ವಿಶೇಷ ಮಕ್ಕಳ ಶಾಲೆಯ ಮಕ್ಕಳು ಮತ್ತು ಅವರ ಹೆತ್ತವರಿಗಾಗಿ ೧೦ ದಿನಗಳ ಕಾಲ ನಡೆದ ಬಟ್ಟೆ ಬ್ಯಾಗ್, ಪೆಪರ್ ಬ್ಯಾಗ್ ಮತ್ತು ಎನ್ವಲಪ್ ತಯಾರಿ ಕುರಿತು ವೃತ್ತಿ ತರಬೇತಿ ಶಿಬಿರ ಸಮಾರೋಪ ಸಮಾರಂಭ ಭಾನುವಾರ ನಡೆಯಿತು. ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ವೇದಿಕೆಯಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಚಂದ್ರ ನಾಯ್ಕ್., ರುಡ್ಸೆಟ್ ನಿರ್ದೇಶಕರಾದ ಪಾಪ ನಾಯಕ್, ಉಪ್ಪಿನಕುದ್ರು ಗೊಂಬೆಮನೆಯ ಅಧ್ಯಕ್ಷರಾದ ಭಾಸ್ಕರ ಕೂಗ್ಗ ಕಾಮತ್, ರುಡ್ಸೆಡ್ ಉಪನ್ಯಾಸಕ ಸಂತೋಷ್, ತಲ್ಲೂರು ಪ್ಯಾಮಿಲಿ ಟ್ರಸ್ಟ್ ಮ್ಯಾನೆಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಉಪಸ್ಥಿತರಿದ್ದರು. ಆಡಳಿತಾಧಿಕಾರಿ ಚಂದ್ರಶೇಖರ್ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಪ್ರೇಮ ವಂದಿಸಿದರು. ಟ್ರಸ್ಟಿವಸಂತ ಶ್ಯಾನುಭೋಗ ಅವರು ಕಾರ್ಯಕ್ರಮ ನಿರೂಪಿಸಿದರು. ವಿಶೇಷ ಮಕ್ಕಳು ಮತ್ತು ಅವರ ಪೋಷಕರು ತಯಾರಿಸಿದ ಬಟ್ಟೆ ಬ್ಯಾಗ್ ಮತ್ತು ಪೇಪರ್…
ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಶತಮಾನದ ಇತಿಹಾಸ ಹೊಂದಿರುವ ಸಾಂಪ್ರದಾಯಿಕ ತಗ್ಗರ್ಸೆ ಕಂಬಳವು ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ವಿಧಿವತ್ತಾಗಿ, ವಿಜೃಂಭಣೆಯಿಂದ ನಡೆಯಿತು. ಹಲವು ಜೊತೆ ಕೋಣಗಳು ಹರಕೆ ಹಾಗೂ ಸ್ವರ್ಧೆಯಲ್ಲಿ ಭಾಗವಹಿಸಿ ಕಂಬಳದ ಮೆರಗು ಹೆಚ್ಚಿಸಿದವು. ಕಂಬಳದ ದಿನ ಬೆಳಿಗ್ಗೆ ಗದ್ದೆಯ ಅಲಂಕಾರ, ಪೂಜೆ ಕಾರ್ಯಾದಿಗಳು ನೆರವೇರಿದ ಬಳಿಕ ಮಧ್ಯಾಹ್ನ ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಯಿತು.ಕಂಬಳ ಗದ್ದೆಯನ್ನು ಖುರ್ಜು ನಿಲ್ಲಿಸಿ, ತೋರಣಗಳಿಂದ ಅಲಂಕರಿಸಲಾಗಿತ್ತು. ಊರಿನ ಒಂದು ನಿರ್ದಿಷ್ಟ ಕುಟುಂಬದ ಕೋಣಗಳನ್ನು ಗದ್ದೆಗೆ ಇಳಿಸಿದ ಬಳಿಕ ಕಂಬಳಕ್ಕೆ ಅಧಿಕೃತ ಚಾಲನೆ ದೊರೆಯಿತು. ವಿಶೇಷ ವೇಷಭೂಷಣ, ವಾದ್ಯ ಮುಂತಾದವುಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿಬಂದ ಕೋಣಗಳ ಪೈಕಿ ಕೆಲವನ್ನು ಕಂಬಳ ಗದ್ದೆಯಲ್ಲಿ ಹರಕೆಯ ಸಲುವಾಗಿ ಕೋಣಗಳನ್ನು ಓಡಿಸಿದರೇ, ಉಳಿದ ಕೋಣಗಳು ಸ್ವರ್ಧೆಯಲ್ಲಿ ಪಾಲ್ಗೊಂಡವು. ಕಂಠದಮನೆ ಕುಟುಂಬದ ನಾರಾಯಣ ಹೆಗ್ಡೆಯವರ ಸಾರಥ್ಯದಲ್ಲಿ ಸಾಂಪ್ರದಾಯಿಕ ಕಂಬಳ ಮುನ್ನಡೆಯುತ್ತಿದ್ದು ಊರಿನ ಜನ ಹಬ್ಬದಂತೆ ಸಂಭ್ರಮಿಸಿದರು. ವಿಶಾಲ ಗದ್ದೆಯ ಅಂಚುಗಳಲ್ಲಿ ನಿಂತು ಕಂಬಳದ ಸೊಬಗನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರದ ನೀತಿಗಳಿಂದಾಗಿ ಕಳೆದ ಮೂರು ವರ್ಷಗಳಲ್ಲಿ ಕೋಟ್ಯಂತರ ಉದ್ಯೋಗ ನಾಶವಾಗಿದೆ. ಮೇಲ್ನೋಟಕ್ಕೆ ಅಭಿವೃದ್ಧಿ ಹೊಂದಿದಂತೆ ಭಾಸವಾದರೂ ನೋಟು ಬ್ಯಾನ್, ಜಿಎಸ್ಟಿ ಕಾರಣದಿಂದ ನೇರವಾಗಿ ಕಟ್ಟಡ ಕಾರ್ಮಿಕರುಗಳ ಹೊಟ್ಟೆಗೆ ಹಿಟ್ಟಿಲ್ಲದಂತಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಹೇಳಿದರು. ಭಾನುವಾರ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಬೈಂದೂರು ತಾಲೂಕು ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಆಶ್ರಯದಲ್ಲಿ ಜರುಗಿದ ಕಟ್ಟಡ ಕಾರ್ಮಿಕರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿ ದುಡಿಮೆಯ ಪಾಲು ಕಾರ್ಮಿಕರಿಗೆ ಸಿಗುತ್ತಿಲ್ಲ. ಕೇಂದ್ರ ಸರಕಾರ 2012ರ ಬೆಲೆಗಳ ಆಧಾರದಲ್ಲಿ ಕಾರ್ಮಿಕರ ಕೂಲಿಯನ್ನು ನಿಗದಿಗೊಳಿಸಿದೆ. ಆದರೆ 2019ರ ಬೆಲೆಯಲ್ಲಿ ಸರಕಾರ ನಿಗದಿ ಮಾಡಿರುವ ಕೂಲಿ ತೆಗೆದುಕೊಂಡ ಕಾರ್ಮಿಕನ ಕುಟುಂಬ ಬದುಕಲಾರದ ಸ್ಥಿತಿ ಇದೆ. ಕೂಲಿ ಹೆಚ್ಚಿಸಬೇಕು, ಸರಕಾರದ ದುಡ್ಡಿನಿಂದಲೇ ಕಾರ್ಮಿಕರಿಗೆ ಸೌಲಭ್ಯ ಒದಗಿಸಬೇಕು ಮುಂತಾದ 12 ಬೇಡಿಕೆಗಳನ್ನು ಇರಿಸಿಕೊಂಡು ಜ.೮ರಂದು ದೊಡ್ಡ ಮುಷ್ಕರ ನಡೆಸಲು ಉದ್ದೇಶಿಸಲಾಗಿದೆ ಎಂದರು. ಈರುಳ್ಳಿ ಬೆಲೆ ಹೆಚ್ಚಿದ್ದರಿಂದ ರೈತನಿಗೆ ಅದರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶದಲ್ಲಿ ಸಂವಿಧಾನದ ಕಾರಣದಿಂದಾಗಿ ಕೋಟ್ಯಾಂತರ ದಮನಿತರು ಮುಖ್ಯವಾಹಿನಿಗೆ ಬರಲು ಸಾಧ್ಯವಾಯಿತು. ಸಮಾನತೆ, ಶಿಕ್ಷಣ, ಸ್ವಾವಲಂಭನೆ ಸೇರಿದಂತೆ ದೇಶದಲ್ಲಿ ರಚನಾತ್ಮಕ ಬದಲಾವಣೆಗಳಾದವು ಎಂದು ನ್ಯಾಯವಾದಿ ಟಿ. ಮಂಜುನಾಥ ಗಿಳಿಯಾರು ಹೇಳಿದರು. ಅವರು ನೆಹರು ಯುವ ಕೇಂದ್ರ ಉಡುಪಿ, ಡಾ. ಬಿ. ಆರ್. ಅಂಬೇಡ್ಕರ್ ಮಹಿಳಾ ಸಂಘ ರಿ. ಬೈಂದೂರು, ದಲಿತ ಸಂಘರ್ಷ ಸಮಿತಿ ಬೈಂದೂರು ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ ಬೈಂದೂರಿನ ಪರಿಶಿಷ್ಟ ವರ್ಗದ ಆಶ್ರಮ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನ ದಿನ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೬೩ನೇ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ಅವರು ಸಂವಿಧಾನ ರಚನೆಯಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದರು. ಎರಡು ವರ್ಷಗಳ ಕಾಲ ೨೭ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತಕ್ಕೆ ಪ್ರಜಾಪ್ರಭುತ್ವ ಮಾದರಿಯ, ಸಮಾನತೆಯಿಂದ ಆಡಳಿತ ಮಾಡುವ ಸಂವಿಧಾನವನ್ನು ನೀಡಿದ್ದಾರೆ ಎಂದರು. ಬೈಂದೂರು ಪೊಲೀಸ್ ವೃತ್ತನಿರೀಕ್ಷಕ ಸುರೇಶ್ ಜಿ. ನಾಯಕ್,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಜಾಕಿಸ್ತಾನದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಏಷ್ಯಾನ್ ಕ್ಲಾಸಿಕ್ ಪವರ್ ಲಿಪ್ಟ್ಂಗ್ ಸ್ಪರ್ಧೆ ಸಬ್ ಜ್ಯೂನಿಯರ್ 63 ಕೆ.ಜಿ ವಿಭಾಗದಲ್ಲಿ ವಿಭಾಗದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಕುಂದಾಪುರ ತಾಲೂಕಿನ ಉಪ್ಪಿನಕುದ್ರುವಿನ ನಾಗಶ್ರೀ ಅವರು ಒಂದು ಚಿನ್ನ ಹಾಗೂ ಮೂರು ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ಸ್ಕ್ವಾಟ್, ಬೆಂಚ್ಪ್ರೆಸ್ನಲ್ಲಿ ಬೆಳಿ, ಡೆಡ್ ಲಿಫ್ಟಿಂಗ್ನಲ್ಲಿ ಚಿನ್ನ ಹಾಗೂ ಬೌಂಡೇಜ್ನಲ್ಲಿ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಸ್ವರ್ಧೆಯಲ್ಲಿ ಒಟ್ಟು 27 ದೇಶಗಳು ಈ ಸ್ವರ್ಧೆಯಲ್ಲಿ ಭಾಗವಹಿಸಿದ್ದವು. ಇದನ್ನೂ ಓದಿ: ► ಪವರ್ ಲಿಪ್ಟ್ಂಗ್ ಚಾಂಪಿಯನ್ಶಿಪ್: ಸತೀಶ್ ಖಾರ್ವಿಗೆ 3 ಚಿನ್ನ, 1 ಬೆಳ್ಳಿ – https://kundapraa.com/?p=34057 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಮತ್ತು ಫ್ಲೈ ಓವರ್ ಕಾಮಗಾರಿ ಶೀಘ್ರ ಮುಗಿಸುವಂತೆ ಮತ್ತು ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಇಂದು ಕುಂದಾಪುರದ ಸಹಾಯಕ ಕಮೀಶನರ್ ಅವರಿಗೆ ಹೆದ್ದಾರಿ ಜಾಗೃತಿ ಹೋರಾಟ ಸಮಿತಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಸಹಾಯಕ ಕಮೀಶನರ್ ಅವರು ತಾನು ಪ್ರತಿ ವಾರದ ಕಾಮಗಾರಿಯ ವರದಿಯನ್ನು ತನಗೆ ಸಲ್ಲಿಸಬೇಕೆಂದು ಹೆದ್ದಾರಿ ಪ್ರಾಧಿಕಾರ ಮತ್ತು ನವಯುಗದ ಅಧಿಕಾರಿಗೆ ಸೂಚಿಸಿದ್ದೇನೆ ಹಾಗೂ ಹೇಗೆ ಕೆಲಸ ಮುಗಿಸುತ್ತಾರೆ ಎಂಬ ಬಗ್ಗೆ ಯೋಜನಾ ವರದಿಯನ್ನು ಸಹ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮತ್ತು ಫ್ಲೈ ಓವರ್ ಕಾಮಗಾರಿ ಶೀಘ್ರ ಮುಗಿಸುವ ಕುರಿತು ಸರ್ವ ಪ್ರಯತ್ನಗಲನ್ನೂ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಮಿತಿಯ ಕಿಶೋರ್ ಕುಮಾರ್, ರಾಜೇಶ್ ಕಾವೇರಿ ಮತ್ತು ಶಶಿಧರ ಹೆಮ್ಮಾಡಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಜೂರು ನಂದಿಕೇಶ್ವರ ಫ್ರೆಂಡ್ಸ್ ಆಶ್ರಯದಲ್ಲಿ ಬಿಜೂರು ಶಾಲಾ ಮೈದಾನದಲ್ಲಿ ಬುಧವಾರ ಜರುಗಿದ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ಸಾಧಕ ಗೋವಿಂದ ಬಾಬು ಪೂಜಾರಿ ಹಾಗೂ ಮಾಲತಿ ಗೋವಿಂದ ಪೂಜಾರಿ ದಂಪತಿಗಳನ್ನು ಸನ್ಮಾನಿಸಲಾಯಿತು. ಹುಟ್ಟೂರ ಸನ್ಮಾನ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಧಕ ಬಿಜೂರು ಗೋವಿಂದಪ್ಪ ಮೋಹನ್ದಾಸ್, ಮತ್ತು ಕ್ರೀಡಾ ಕ್ಷೇತ್ರದ ಸಾಧಕ ಶಂಕರ ಪೂಜಾರಿ ಕಾಡಿನತಾರು ಅವರುಗಳನ್ನು ಸನ್ಮಾನಿಸಲಾಯಿತು. ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ಏಕನಾಥೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ಅಣ್ಣಯ್ಯ ಶೇರುಗಾರ್ ಪುಣೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಮಾಜಿ ಉಪಾಧ್ಯಕ್ಷೆ ಶಾರದಾ ಬಿಜೂರು, ಬಿಜೆಪಿ ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಪ್ರಧಾನ ಕಾರ್ಯದರ್ಶಿ ದೀಪಕ್ಕುಮಾರ್ ಶೆಟ್ಟಿ, ಮಾಜಿ ಮಂಡಲ ಪಂಚಾಯತ್ ಸದಸ್ಯೆ ಅನುಸೂಯ ಕೆ. ಬಿಜೂರು, ಶ್ರೀ ಏಕನಾಥೇಶ್ವರಿ ದೇವಸ್ಥಾನದ ವಿಶ್ವಸ್ಥ ಹಿರಿಯಡ್ಕ ಮೋಹನ್ದಾಸ್, ಮುಂಬೈ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇತ್ತಿಚಿಗೆ ಭಾರತದ ಗಣತಂತ್ರ ದಿವಸದ ಪ್ರಯುಕ್ತ ರಾಜ್ಯ ನೆಹರು ಯುವ ಕೇಂದ್ರ ಸಂಘಟನಾದಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿದ್ದ ಬ್ರಹ್ಮಾವರ ಕ್ರಾಸ್ಲ್ಯಾಂಡ್ ಕಾಲೇಜಿನ ಅಂತಿಮ ಬಿಎ ವಿದ್ಯಾರ್ಥಿನಿ ವಫಾ ಪ್ರಥಮ ಸ್ಥಾನ ಪಡೆದಿದ್ದಾರೆ. ನೆಹರು ಯುವ ಕೇಂದ್ರ ಸಂಘಟನೆಯ ರಾಜ್ಯ ನಿರ್ದೆಶಕ ಅತುಲ್ ನಿಕಮ್ ವಫಾಗೆ ರೂ. 25,000 ಮೊತ್ತದ ಮೊದಲ ಬಹುಮಾನ, ಪ್ರಶಸ್ತಿ ಪತ್ರವನ್ನು ಹಸ್ತಾಂತರಿಸಿದರು. ಜನವರಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ವಫಾ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಭಾರತದ ಗಣತಂತ್ರ ದಿವಸದ ಪ್ರಯುಕ್ತ ಹಾಗೂ ಸಂವಿಧಾನ ದಿವಸ ವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ಕುರಿತು ಹಿಂದಿ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಭಾಷಣ ಸ್ಪರ್ಧೆಯನ್ನು ತಾಲೂಕು, ಹಾಗೂ ಜಿಲ್ಲಾ ಮಟ್ಟದಲ್ಲಿ ಉಡುಪಿಯ ನೆಹರು ಯುವ ಕೇಂದ್ರ ಭಾರತ ಸರ್ಕಾರದ ವತಿಯಿಂದ ಆಯೋಜಿಸಿತ್ತು. ತಾಲೂಕು ಮಟ್ಟದ ಸ್ಪರ್ಧೆಗಳು ಅಕ್ಟೊಬರ್ 1,2,3 ರಂದು…
