ಕೆರೆಗೆ ಬಿದ್ದ ಕಾರು: ವಕ್ವಾಡಿಯ ಉದ್ಯಮಿ ಮೃತ, ಮಹಿಳೆ ಗಂಭೀರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಓರ್ವ ಸಾವನ್ನಪ್ಪಿ, ಮತ್ತೋರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಭಾನುವಾರ ಬಾರಕೂರು ಚೌಳಿಕೆರೆ ಬಳಿ ನಡೆದಿದೆ. ಮೃತಪಟ್ಟವರನ್ನು ವಕ್ವಾಡಿ ನಿವಾಸಿ ಸಂತೋಷ ಶೆಟ್ಟಿ(40) ಎಂದು ಗುರುತಿಸಲಾಗಿದೆ. ಗಾಯಗೊಂಡ ಮಹಿಳೆ ವಕ್ವಾಡಿಯ ಶ್ವೇತಾ(23) ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Click Here

Call us

Call us

ಬೀಜಾಡಿ ಫ್ಲೈವುಡ್ ಅಂಗಡಿ ಮಾಲಕರಾಗಿದ್ದ ವಕ್ವಾಡಿ ಸಂತೋಷ ಶೆಟ್ಟಿ ಅವರು ಬಾರಕೂರು ಕಡೆಯಿಂದ ಸಾಬರಕಟ್ಟೆ ಹೋಗುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ತಡೆಗೋಡೆ ಇಲ್ಲದ ಚೌಳಿಕೆರೆಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ತಕ್ಷಣವೇ ಸ್ಥಳೀಯರು ಕಾರಿನಲ್ಲಿದ್ದ ಸಂತೋಷ ಶೆಟ್ಟಿ ಅವರನ್ನು ರಕ್ಷಿಸುವ ಪ್ರಯತ್ನ ಮಾಡಿದರು. ಆದರೆ,  ಸಂತೋಷ ಶೆಟ್ಟಿ ಅವರು ಮೃತಪಟ್ಟರೆನ್ನಲಾಗಿದೆ. ಸಂತೋಷ್ ಶೆಟ್ಟಿ ಅವರ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶ್ವೇತಾ ಎಂಬುವವರಿಗೂ ಅಪಘಾತದಲ್ಲಿ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click here

Click Here

Call us

Visit Now

ಇದನ್ನೂ ಓದಿ:
► ಬೈಂದೂರು ಠಾಣೆಯ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢ – https://kundapraa.com/?p=38799 .

Leave a Reply

Your email address will not be published. Required fields are marked *

eight − 3 =