ಸೇತುವೆಗೆ ಕಾರು ಡಿಕ್ಕಿಯಾಗಿ ದ. ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ನಿಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಂಕರನಾರಾಯಣದಿಂದ ಹಾಲಾಡಿ ಕಡೆಗೆ ಬರುತ್ತಿದ್ದ ಶಿಫ್ಟ್ ಕಾರು ಹಾಲಾಡಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ (60) ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

Click Here

Call us

Call us

ಹದ್ದೂರು ರಾಜೀವ ಶೆಟ್ಟಿ ಅವರು ಶಂಕರನಾರಾಯಣದಿಂದ ಹಾಲಾಡಿ ಕಡೆಗೆ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿಯಾದ ಪರಿಣಾಮ ರಾಜೀವ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿಮಧ್ಯೆಯೇ ಅವರು ಅಸುನೀಗಿದ್ದಾರೆ.

Click here

Click Here

Call us

Visit Now

ಹದ್ದೂರು ರಾಜೀವ ಶೆಟ್ಟಿಯವರು ವಿವಿಧ ಸಮಾಜಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು ಶಂಕರನಾರಾಯಣ ಮಂಡಲ ಪಂಚಾಯತ್ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ತಾಲೂಕು ಪಂಚಾಯತ್ ಸದಸ್ಯರಾಗಿ, ಕೆ.ಎಂ.ಎಫ್. ನಿರ್ದೇಶಕರಾಗಿ, ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲಾ ರೈತ ಸಂಘದ ಸದಸ್ಯರಾಗಿರುವ ಇವರು ಓರ್ವ ಪ್ರಗತಿಪರ ಕೃಷಿಕರು. ಹೈನುಗಾರಿಕೆಯಲ್ಲೂ ತೊಡಗಿಸಿಕೊಂಡಿದ್ದು ಬೈಲೂರು ಹಾಲುತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಂಕರನಾರಾಯಣ ಭಾಗದ ಬಿಜೆಪಿಯ ಪ್ರಮುಖ ಮುಖಂಡರಾಗಿ ಪಕ್ಷ ಸಂಘಟನೆಯಲ್ಲೂ ತೊಡಗಿಸಿಕೊಂಡಿರುತ್ತಾರೆ.

ಮೃತರು ಪತ್ನಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಮಮತಾ ಶೆಟ್ಟಿ& ಓರ್ವ ಪುತ್ರಿಯನ್ನು ಅಗಲಿರುತ್ತಾರೆ.

ಶಂಕರನಾರಾಯಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.

Call us

Leave a Reply

Your email address will not be published. Required fields are marked *

seventeen − fifteen =