ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯರ ಆಯ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮೂರು ವರ್ಷಗಳ ಅವಧಿಗೆ ನೂತನ ವ್ಯವಸ್ಥಾಪನಾ ಸಮಿತಿಯನ್ನು ಆಯ್ಕೆ ಮಾಡಲಾಗಿದೆ.

Click Here

Call us

Call us

ನೂತನ ಸಮಿತಿಗೆ ಪಾಳಿಯಲ್ಲಿರುವ ಪ್ರಧಾನ ಅರ್ಚಕರಾದ ಡಾ. ಕೆ. ರಾಮಚಂದ್ರ ಅಡಿಗ, ಮಹಿಳಾ ಮೀಸಲಾತಿಯಲ್ಲಿ ರತ್ನಾ ರಮೇಶ್‌ ಕುಂದರ್‌ ಕೊಲ್ಲೂರು, ಸಂಧ್ಯಾ ರಮೇಶ್‌ ಮಚ್ಚಟ್ಟು, ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಗೋಪಾಲಕೃಷ್ಣ ರಾಮನಗರ ಸೇನಾಪುರ, ಸಾಮಾನ್ಯ ವರ್ಗದಿಂದ ಕೆರಾಡಿ ಚಂದ್ರಶೇಖರ ಶೆಟ್ಟಿ, ಗಣೇಶ್‌ ಕಿಣಿ ಬೆಳ್ವೆ, ಡಾ. ಅತುಲ್‌ಕುಮಾರ ಶೆಟ್ಟಿ ಚಿತ್ತೂರು, ಜಯಾನಂದ ಹೋಬಳಿದಾರ ಬೈಂದೂರು ಹಾಗೂ ಶೇಖರ ಪೂಜಾರಿ ಕಾರ್ಕಡ ಆಯ್ಕೆಯಾಗಿದ್ದಾರೆ.

Click here

Click Here

Call us

Visit Now

ಸಮಿತಿಗೆ ಈ ಬಾರಿ 158 ಅರ್ಜಿಗಳು ಬಂದಿದ್ದು, ಅರ್ಜಿದಾರರ ಅರ್ಹತೆ, ವಿಳಾಸ ಹಾಗೂ ಹಿನ್ನೆಲೆಯನ್ನು ಪರಿಶೀಲಿಸಿ ನೂತನ ಸಮಿತಿ ಸದಸ್ಯರ ಆಯ್ಕೆ ಮಾಡಲಾಗಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ವ್ಯವಸ್ಥಾಪನ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಯಾಗಿರುತ್ತಾರೆ. ನೂತನ ಸದಸ್ಯರು ಪ್ರಥಮ ಸಭೆಯಲ್ಲಿ ತಮ್ಮಲ್ಲಿಯೇ ಒಬ್ಬರನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗೆ ಕಳಿಸಬೇಕಿದೆ. ಸಮಿತಿಯ ಅವಧಿ ಮೂರು ವರ್ಷದ ಅವಧಿಯದ್ದಾಗಿದೆ.

Leave a Reply

Your email address will not be published. Required fields are marked *

fifteen + eleven =