ಖಂಬದಕೋಣೆ ರೈ.ಸೇ.ಸ. ಸಂಘದ ಮಹಾಸಭೆ: ರೂ. 5.07 ಕೋಟಿ ಲಾಭ, ಸದಸ್ಯರಿಗೆ 15% ಡಿವಿಡೆಂಟ್

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 46ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ಜರುಗಿತು.

Call us

Click Here

Click here

Click Here

Call us

Visit Now

Click here

ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 46 ವರ್ಷಗಳುದ್ದಕ್ಕೆ ಏರುಗತಿಯ ಪ್ರಗತಿಯನ್ನು ದಾಖಲಿಸುತ್ತ ಬಂದಿದೆ. ವರದಿ ವರ್ಷದಲ್ಲಿ ರೂ.1015 ಕೋಟಿ ವ್ಯವಹಾರ ನಡೆಸಿ, ರೂ 5.07 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಹೇಳಿದರು.

ಸಂಘವು ವರ್ಷದಲ್ಲಿ ರೂ. 219.17 ಕೋಟಿ ಠೇವಣಿ ಸಂಗ್ರಹಿಸಿ, ರೂ. 177.66 ಕೋಟಿ ಸಾಲ ನೀಡಿದೆ. ವಿವಿಧ ಸಂಸ್ಥೆಗಳಲ್ಲಿ ರೂ. 91.21 ಕೋಟಿ ಹೂಡಿಕೆ ಮಾಡಿದೆ. ರೂ.27.98 ಕೋಟಿ ನಿಧಿಗಳು, ರೂ.2.41 ಕೋಟಿ ಪಾಲು ಬಂಡವಾಳ ಹೊಂದಿದೆ. ರೂ.16.88 ಕೋಟಿ ಕೃಷಿ ಸಾಲ, 18.96 ಕೋಟಿ ರೈತ ಸಿರಿ ಸ್ವ-ಸಹಾಯ ಗುಂಪುಗಳ ಸಾಲ ನೀಡಲಾಗಿದೆ ಎಂದರು.

ಸಂಘದಲ್ಲಿ 8100ಕ್ಕೂ ಮಿಕ್ಕಿ ಸದಸ್ಯರನ್ನೊಳಗೊಂಡ ಸ್ವಸಹಾಯ ಗುಂಪುಗಳನ್ನು ರಚನೆ ಮಾಡಲಾಗಿದ್ದು, ಅವಶ್ಯಕತೆಗನುಗುಣವಾಗಿ ಸಾಲ ಸೌಲಭ್ಯ, ಗಂಪುಗಳ ಅಭಿವೃದ್ಧಿ ಪ್ರಗತಿಗಾಗಿ ಸದಸ್ಯರಿಗೆ ಉದ್ಯೋಗ ಮಾಹಿತಿ, ಗುತ್ತಿಗೆ ಆಧಾರದಲ್ಲಿ 13 ಮಂದಿ ರೈತಸಿರಿ ಪ್ರತಿನಿಧಿಗಳನ್ನು ನೇಮಿಸಿಕೊಳ್ಳಲಾಗಿದೆ. 900ಕ್ಕೂ ಮಿಕ್ಕಿ ಸದಸ್ಯರನ್ನೊಳಗೊಂಡ ರೈತ ಕೂಟವನ್ನು ರಚಿಸಲಾಗಿದ್ದು, ಪ್ರತಿ ತಿಂಗಳ ಕೊನೆಯ ಶನಿವಾರ ಮಾಸಿಕ ಸಭೆ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ ಎಂದರು.

ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡ್, ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಕೆ. ಮೋಹನ ಪೂಜಾರಿ, ಬಿ. ಎಸ್. ಸುರೇಶ ಶೆಟ್ಟಿ, ಗುರುರಾಜ್ ಹೆಬ್ಬಾರ್, ವೀರೇಂದ್ರ ಶೆಟ್ಟಿ, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಭರತ್ ದೇವಾಡಿಗ, ಹೂವ ನಾಯ್ಕ್, ದಿನಿತಾ ಶೆಟ್ಟಿ, ಜಲಜಾಕ್ಷಿ ಪೂಜಾರಿ ಉಪಸ್ಥಿತರಿದ್ದರು.

Call us

ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಪ್ರಬಂಧಕ ಚಂದಯ್ಯ ಶೆಟ್ಟಿ ವಂದಿಸಿದರು.

Leave a Reply

Your email address will not be published. Required fields are marked *

eleven + 16 =