ಕುಂದಾಪುರ ಚಿತ್ತೂರಿನ ಗುರುರಾಜ್ ಪೂಜಾರಿಗೆ ಏಕಲವ್ಯ ಪ್ರಶಸ್ತಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕ್ರೀಡಾ ಕ್ಷೇತ್ರದ ಸಾಧಕರಿಗೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಕೊಡಮಾಡುವ ಏಕಲವ್ಯ ಪ್ರಶಸ್ತಿಗೆ ಚಿತ್ತೂರಿನ ಯುವಕ, ಅಥ್ಲೆಟಿ ಗುರುರಾಜ್ ಪೂಜಾರಿ ಆಯ್ಕೆಯಾಗಿದ್ದಾರೆ.

Call us

Click here

Click Here

Call us

Call us

Visit Now

Call us

ಚಿತ್ತೂರು ಗ್ರಾಮದ ಜಡ್ಡು ಮಹಾಬಲ ಪೂಜಾರಿ ಹಾಗು ಪದ್ದು ದಂಪತಿಗಳ ಆರು ಮಕ್ಕಳಲ್ಲಿ ಐದನೇಯವರಾದ ಗುರುರಾಜಗೆ ಓದಿನಷ್ಟೇ ಕ್ರೀಡೆಯಲ್ಲಿಯೂ ಆಸಕ್ತಿ. ತಂದೆ ತಾಯಿಯೂ ಅಷ್ಟೇ. ಮಗನ ಮನದ ಇಂಗಿತ ಅರಿತು ಅವರ ಸಾಧನೆಗೆ ಶಕ್ತಿ ಮೀರಿ ನೆರವಾಗುತ್ತಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಕಲಿಯುತ್ತಿದ್ದ ಸಂದರ್ಭದಲ್ಲಿ ರ್ವೆಸ್ಲಿಂಗ್ ನಲ್ಲಿ ಹೆಚ್ಚು ಆಸಕ್ತಿ ತೋರುತ್ತಿದ್ದ ಗುರುರಾಜ್‌ಗೆ ಸುಕೇಶ್ ಶೆಟ್ಟಿ ಅವರು ತರಬೇತಿ ನೀಡಿದ್ದರು.

ಮುಂದೆ ಪದವಿ ವ್ಯಾಸಂಗಕ್ಕಾಗಿ ಉಜಿರೆಯ ಎಸ್.ಡಿ.ಎಂ ಕಾಲೇಜು ಸೇರಿದ ಬಳಿಕ ಗುರುರಾಜ್ ಬದುಕಿಗೊಂದು ತಿರುವು ದೊರೆತಿತ್ತು. ಈ ಅವಧಿಯಲ್ಲಿ ಎಂ. ರಾಜೇಂದ್ರ ಪ್ರಸಾದ್ ವೇಯ್ಡ್ ಲಿಫ್ಟಿಂಗ್ ತರಬೇತಿ ನೀಡಿ ಕ್ರೀಡಾ ಕ್ಷೇತ್ರದಲ್ಲಿ ಮುಂದುವರಿಯುವಂತೆ ಪ್ರೋತ್ಸಾಹಿಸಿದರು. ಗುರುರಾಜ್ ಎಸ್.ಡಿ.ಎಂ ಕ್ರೀಡಾ ತರಬೇತಿ ಸಂಸ್ಥೆಯ ಕೋಚ್ ರಾಜೇಂದ್ರ ಪ್ರಸಾದ್ ಅವರ ಮೂಲಕ ಮೂಲಕ ನಿರಂತರವಾಗಿ ತರಬೇತಿ ಪಡೆದರು. ಅಲ್ಲಿಂದೀಚೆಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯುತ್ತಲೇ ಬಂದಿರುವ ಗುರುರಾಜ್ ಸೌತ್ ಏಷ್ಯನ್ ಗೇಮ್ಸ್ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನ ಗೆದ್ದು ಹೊಸ ಭರವಸೆ ಮೂಡಿಸಿದ್ದರು. (ಕುಂದಾಪ್ರ ಡಾಟ್ ಕಾಂ ವರದಿ)

ಪುರುಷರ 56 ಕೆಜಿ ವಿಭಾಗದಲ್ಲಿಒಟ್ಟು 241 ಕೆಜಿ ಭಾರ ಎತ್ತಿದ ಅವರು ಸ್ಯಾಚ್ ವಿಭಾಗದಲ್ಲಿ 104ಕೆಜಿ ಕ್ಲೀನ್‌ಎಂಡ್‌ಜರ್ಕ್ ವಿಭಾಗದಲ್ಲಿ 137 ಕೆಜಿ ಎತ್ತುವುದರ ಮೂಲಕ ಪದಕ ಪಡೆದು ದಾಖಲೆ ಮಾಡಿದ್ಧಾರೆ. ಚಂಡಿಗಡ್ ಭಾರತೀಯ ವಾಯು ಸೇನೆಗೆ ಆಯ್ಕೆಯಾಗಿ ತರಬೇತಿ ಪಡೆಯುತ್ತಿರುವ ಗುರುರಾಜ್ ಪ್ರತಿದಿನ 4 ಘಂಟೆ ಅಭ್ಯಾಸ ಸ್ಪರ್ಧೆಗೆ ತೆರಳುತ್ತಿದ್ಧರು. ಮಗನ ಸಾಧನೆಗೆ ಪೋಷಕರು ಖುಷಿಯಾಗಿದ್ದಾರೆ. ಏಕಲವ್ಯ ಪ್ರಶಸ್ತಿಯು 2 ಲಕ್ಷ ರೂ. ನಗದು ಹಾಗೂ ಕಂಚಿನ ಪದಕವನ್ನು ಒಳಗೊಂಡಿರುತ್ತದೆ.

ಇದನ್ನೂ ಓದಿ:

Call us

► ಸೌತ್ ಏಷ್ಯನ್ ಗೇಮ್ಸ್: ಚಿನ್ನದ ಪದಕ ಗೆದ್ದ ಕುಂದಾಪುರ ಚಿತ್ತೂರಿನ ಯುವಕ – http://kundapraa.com/?p=11028
► ಕ್ರೀಡಾಕ್ಷೇತ್ರದ ಹೊಸ ಭರವಸೆ ಗುರುರಾಜ್ ಪೂಜಾರಿ – http://kundapraa.com/?p=18402 
► ಕಾಮನ್‌ವೆಲ್ತ್ ವೇಯ್ಟ್ ಲಿಫ್ಟಿಂಗ್: ಕುಂದಾಪುರ ಗುರುರಾಜ್ ಪೂಜಾರಿಗೆ ಚಿನ್ನ – http://kundapraa.com/?p=18493 

 

Leave a Reply

Your email address will not be published. Required fields are marked *

13 + 5 =