ಸರಕಾರಿ ಕ್ವಾರಂಟೈನ್ ಕೇಂದ್ರಕ್ಕೆ ನೋಡೆಲ್ ಅಧಿಕಾರಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸರಕಾರಿ ಕ್ವಾರಂಟೈನ್ ಕೇಂದ್ರಗಳಲ್ಲಿನ ವ್ಯವಸ್ಥೆಗಳು ಸರಿಯಾಗಿ ನಡೆಯಲು ಪ್ರತಿ ಕೇಂದ್ರಗಳಿಗೂ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು. ಕಂದಾಯ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆಯಾದಲ್ಲಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಇತರ ಇಲಾಖೆಗಳಿಂದ ಸಿಬ್ಬಂದಿಗಳ ನಿಯೋಜನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ರಾಜ್ಯ ರಾಜ್ಯ ಮುಜರಾಯಿ ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Click Here

Call us

Call us

ಕುಂದಾಪುರ ತಾಲೂಕು ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ಕೋವಿಡ್-೧೯ ಗೆ ಸಂಬಂಧಿಸಿದಂತೆ ಪ್ರಾರಂಭಿಸಲಾದ ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆಯ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಕ್ವಾರಂಟೈನ್ ವಾಸಿಗಳಿಗೆ ಆಹಾರ ನೀಡುವಲ್ಲಿ ಲೋಪ ಆಗಿಲ್ಲ, ಆದರೆ ಸರಬರಾಜು ಮಾಡುವಲ್ಲಿ ಲೋಪ ಆಗಿದೆ. ಕ್ವಾರಂಟೈನ್ ಕೇಂದ್ರಗಳಿಗೆ ಬಂದವರ ಗಂಟಲು ದ್ರವಗಳನ್ನು ಕೂಡಲೇ ತೆಗೆದು ಪರೀಕ್ಷೆ ಕಳುಹಿಸುತ್ತಿಲ್ಲ ಎನ್ನುವ ಕುರಿತು ದೂರುಗಳಿವೆ. ಸರ್ಕಾರಿ ಕ್ವಾರಂಟೈನ್ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರು ಕೇಂದ್ರಗಳಿಗೆ ಭೇಟಿ ನೀಡಿ ಸಲಹೆ ಸೂಚನೆ ನೀಡುವುದರಿಂದ ವ್ಯವಸ್ಥಿತವಾಗಿ ನಡೆಯಲು ಸಾಧ್ಯವಾಗುತ್ತದೆ. ಕ್ವಾರಂಟೈನ್ ಕೇಂದ್ರಗಳಿಗಾಗಿ ಖಾಸಗಿ ಕಟ್ಟಡ ಹಾಗೂ ವಾಹನಗಳನ್ನು ಪಡೆದುಕೊಳ್ಳಲು ಅವಕಾಶವಿದೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಗಳು ಅಸಮರ್ಪಕವಾಗುತ್ತಿದೆ ಎನ್ನುವ ದೂರುಗಳಿದ್ದು, ಸಂಬಂಧಿಸಿದ ಅಧಿಕಾರಿಗಳ ಗಮನ ಹರಿಸಬೇಕು. ದೇಶವೇ ಅತ್ಯಂತ ಕ್ಲಿಷ್ಟಕರ ಸನ್ನಿವೇಶವನ್ನು ಎದುರಿಸುತ್ತಿದ್ದು, ಎಲ್ಲರೂ ಒತ್ತಡದಲ್ಲಿಯೇ ಕೆಲಸ ಮಾಡಬೇಕಾದ ಅನೀವಾರ್ಯತೆ ಇದೆ. ಆದರೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಸರ್ಕಾರ ಯಾರಿಗೂ ರಿಯಾಯಿತಿ ನೀಡೋದಿಲ್ಲ ಎಂದು ಖಡಕ್ ಆಗಿ ಹೇಳಿದರು.

Click here

Click Here

Call us

Visit Now

ಕ್ವಾರಂಟೈನ್ ಕೇಂದ್ರಗಳಿಗೆ ತುರ್ತು ಅವಶ್ಯಕ ಆಹಾರ ವಸ್ತುಗಳನ್ನು ಖರೀದಿ ಮಾಡದಲ್ಲಿ ಅದರ ವೆಚ್ಚವನ್ನು ಜಿಲ್ಲಾಡಳಿತದಿಂದ ಭರಿಸಲಾಗುವುದು. ಕೇಂದ್ರಗಳಲ್ಲಿ ಇರುವ ಮಕ್ಕಳಿಗೆ ಅವಶ್ಯಕವಾಗಿರುವ ಹಾಲುಗಳನ್ನು ಸ್ಥಳೀಯ ಅಂಗನವಾಡಿ ಕೇಂದ್ರಗಳ ಸಹಕಾರದಿಂದ ನೀಡಲು ವ್ಯವಸ್ಥೆ ಮಾಡಲಾಗುವುದು ಇದರ ವೆಚ್ಚವನ್ನು ಜಿಲ್ಲಾಡಳಿತ ಭರಿಸಲಿದೆ. ಮಕ್ಕಳ ಹಾಗೂ ಗರ್ಭೀಣಿಯರ ಪರೀಕ್ಷಾ ವರದಿ ನೆಗಟಿವ್ ಬಂದಲ್ಲಿ ಅವರನ್ನು ಹೋಂ ಕ್ವಾರಂಟೈನ್‌ಗಾಗಿ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿಗಳ ಸೂಚನೆಯಂತೆ ತಾತ್ಕಾಲಿಕವಾಗಿ ಸೇವಾ ಸಿಂಧು ಆಪ್ ಬಂದ್ ಆಗಿರುವುದರಿಂದ ಆಕ್ರಮವಾಗಿ ಹೊರ ರಾಜ್ಯದಿಂದ ಬರುವವರ ಮೇಲೆ ನಿಗಾ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಅಭಿಪ್ರಾಯ ಮಂಡನೆ ಮಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಹಾಗೂ ಡಾ.ಕೆ.ಪ್ರೇಮಾನಂದ, ಕುಂದಾಪುರ ಹಾಗೂ ಬೈಂದೂರು ತಾಲ್ಲೂಕಿನ 62 ಕೇಂದ್ರಗಳಲ್ಲಿ 3,982 ಮಂದಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. 487 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಕರಾವಳಿಯ 3 ಜಿಲ್ಲೆಗಳಿಗೆ ಹೊಂದಿಕೊಂಡಂತೆ ಒಂದೇ ಪರೀಕ್ಷಾ ಕೇಂದ್ರ ಇರುವುದರಿಂದಾಗಿ ಶೀಘ್ರ ಪರೀಕ್ಷೆ ಹಾಗೂ ವರದಿ ವಿಳಂಭವಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೆ 1918 ವರದಿಗಳು ಬಂದಿದ್ದು, 542 ಮಂದಿಯ ವರದಿ ಬರಲು ಬಾಕಿ ಇದೆ. ಪ್ರಸ್ತುತ ಪರಿಸ್ಥಿತಿಯನ್ನು ನಿಭಾಯಿಸಲು ಆರೋಗ್ಯ ಇಲಾಖೆಯಲ್ಲಿ ತಜ್ಞ ಹಾಗೂ ತರಬೇತಿ ಹೊಂದಿದ ಸಿಬ್ಬಂದಿಗಳ ಕೊರತೆ ಇರುವುದರಿಂದ ಪರೀಕ್ಷಾ ಕಾರ್ಯ ವಿಳಂಭವಾಗುತ್ತಿದೆ ಎಂದರು.

ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು, ಎಎಸ್‌ಪಿ ಹರಿರಾಂಶಂಕರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾಬು ಹೆಗ್ಡೆ ತಗ್ಗರ್ಸೆ, ಗೌರಿ ದೇವಾಡಿಗ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಕುಂದರ್, ಉಪಾಧ್ಯಕ್ಷ ರಾಮ್‌ಕಿಶನ್ ಹೆಗ್ಡೆ, ಸದಸ್ಯರಾದ ಪ್ರವೀಣ್‌ಕುಮಾರ ಶೆಟ್ಟಿ ಕಡ್ಕೆ, ಕರಣ್ ಪೂಜಾರಿ, ಕಾರ್ಯನಿರ್ವಹಣಾಧಿಕಾರಿಗಳಾದ ಕೇಶವ್ ಶೆಟ್ಟಿಗಾರ್, ಭಾರತಿ, ತಹಶೀಲ್ದಾರ್‌ಗಳಾದ ತಿಪ್ಪೇಸ್ವಾಮಿ, ಬಿ.ಪಿ.ಪೂಜಾರ್, ಸರ್ಕಲ್ ಇನ್ಸ್‌ಪೆಕ್ಟರ್‌ಗಳಾದ ಗೋಪಿಕೃಷ್ಣ, ಸುರೇಶ್ ನಾಯಕ್, ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಇದ್ದರು.

Call us

Leave a Reply

Your email address will not be published. Required fields are marked *

9 − 8 =