ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಅ.06: ರೈತರು ಸರಕಾರದ ಸೌಲಭ್ಯಗಳಿಂದ ವಂಚಿತರಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ Former Registration unified Beneficiary Information System (FRUITS) ಎಂಬ ತಂತ್ರಾಂಶದಲ್ಲಿ ರೈತರ ಮಾಹಿತಿಯನ್ನು ತಕ್ಷಣ ದಾಖಲಿಸುವ ಅಗತ್ಯವಿದ್ದು, ಅದಕ್ಕಾಗಿ ರೈತರು ತಮ್ಮ ಆಧಾರ್ ನಂಬರ್, ಬ್ಯಾಂಕ್ ಖಾತೆಯ ನಂಬರ್ ಹಾಗೂ ರೈತರಿಗೆ ಸಂಬಂಧಪಟ್ಟ ಎಲ್ಲಾ ಕೃಷಿ ಜಮೀನುಗಳ ಸರ್ವೆ ನಂಬರ್ ಅಗತ್ಯವಿದೆ.
ಆದುದರಿಂದ ಬೈಂದೂರು ತಾಲೂಕಿನ ಸಮಸ್ತ ರೈತರು ತಮ್ಮ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ಮತ್ತು ಎಲ್ಲಾ ಕೃಷಿ ಜಮೀನುಗಳ ಮಾಹಿತಿಯನ್ನು ಎರಡು ದಿನಗಳ ಒಳಗೆ ತಮ್ಮ ತಮ್ಮ ವ್ಯಾಪ್ತಿಯ ಗ್ರಾಮ ಲೆಕ್ಕಿಗರ ಕಛೇರಿಗೆ ತಲುಪಿಸುವಂತೆ ಬೈಂದೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.