ಭಿಕ್ಷಾಟನೆಯ ಹಣದಲ್ಲಿ ಸಾಲಿಗ್ರಾಮದ ದೇವಳಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ವೃದ್ಧೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಿಕ್ಷಾಟನೆಯಿಂದ ಬಂದ 1 ಲಕ್ಷ ರೂ. ಹಣವನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ ವೃದ್ಧೆಯೋರ್ವರ ಸೇವಾ ಕೈಂಕರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ತಾಲ್ಲೂಕಿನ ಗಂಗೊಳ್ಳಿ ಬಳಿಯ ಕಂಚುಗೋಡು ಮೂಲದವರಾದ ಅಶ್ವಥ್ಥಮ್ಮ (80) ಈ ದೇಣಿಗೆ ನೀಡಿದ ಭಕ್ತೆ.

Click Here

Call us

Call us

ಉಡುಪಿ ಜಿಲ್ಲೆಯ ವಿವಿದೆಡೆ ಭಿಕ್ಷಾಟನೆ ಮಾಡಿ ಸಂಗ್ರಹಿಸುವ ಹಣವನ್ನು ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ದಾನವಾಗಿ ನೀಡುವ ಕಾಯಕದಲ್ಲಿ ತೊಡಗಿದ್ದಾರೆ. ಈ ಹಿಂದೆ ಅವರು ಗಂಗೊಳ್ಳಿ ಸಮೀಪದ ಕಂಚಗೋಡು ದೇವಸ್ಥಾನಕ್ಕೆ 1.5 ಲಕ್ಷ ರೂ., ಪಂಪ ದೇವಸ್ಥಾನಕ್ಕೆ ಒಂದು ಲಕ್ಷ ರೂಪಾಯಿ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ 1.5 ಲಕ್ಷ ರೂಗಳನ್ನು ಕೂಡ ದೇಣಿಗೆ ನೀಡಿದ್ದರು.

Click here

Click Here

Call us

Visit Now

ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ 1 ಲಕ್ಷ ರೂ. ದೇಣಿಗೆಯನ್ನು ಹಸ್ತಾಂತರಿಸುವ ಸಂದರ್ಭ ದೇವಾಲಯದ ಅರ್ಚಕ ವೇದಮೂರ್ತಿ ಜನಾರ್ದನ ಅಡಿಗ ಮತ್ತು ವ್ಯವಸ್ಥಾಪಕ ಕೆ. ನಾಗರಾಜ ಅವರು ದೇವರ ಪ್ರಸಾದ ನೀಡಿ ಗೌರವಿಸಿದರು.

ಅಶ್ವಥ್ಥಮ್ಮ ದೇಶಾದ್ಯಂತ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದು, ಈ ವರ್ಷ ಅಯ್ಯಪ್ಪ ಮಾಲೆ ಧರಿಸಿದ್ದಾರೆ. ಫೆಬ್ರವರಿ 9 ರಂದು ಸಾಲಿಗ್ರಾಮ ದೇವಸ್ಥಾನದಲ್ಲಿ ತೀರ್ಥಯಾತ್ರೆಗೆ ತಮ್ಮ ಇರುಮುಡಿಯನ್ನು ಕಟ್ಟಲಿದ್ದಾರೆ.

Call us

Leave a Reply

Your email address will not be published. Required fields are marked *

7 + twenty =