ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಆಶಾ ಕಾರ್ಯಕರ್ತರ ಕಿಟ್ ವಿತರಣೆಗೆ ಚಾಲನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಶಾ ಕಾರ್ಯಕರ್ತರಿಗೆ ಆಹಾರದ ಕಿಟ್ ನೀಡಲಾಗುತ್ತಿದ್ದು, ಗುರುವಾರ ಇಲ್ಲಿನ ರೋಟರಿ ಭವನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಿಟ್ ವಿತರಣೆಗೆ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಚಾಲನೆ ನೀಡಿದರು.

Click Here

Call us

Call us

ಈ ಸಂದರ್ಭ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್. ರಾಜು ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಸುರೇಶ್ ಬಟವಾಡಿ, ಗೌರಿ ದೇವಾಡಿಗ, ಬೈಂದೂರು ತಹಶೀಲ್ದಾರ್ ಬಸಪ್ಪ ಪಿ. ಪೂಜಾರ್, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ರೈತಸಂಘದ ದೀಪಕ್‌ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ, ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರೇಮಾನಂದ, ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಹನಾ, ಎಸ್‌ಸಿಡಿಸಿ ಬ್ಯಾಂಕ್ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ, ಬೈಂದೂರು ಶಾಖೆ ಪ್ರಬಂಧಕ ವೆಂಕಟೇಶ್ ಮೊದಲಾದವರು ಇದ್ದರು.

Click here

Click Here

Call us

Visit Now

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಆಶಾ ಕಾರ್ಯಕರ್ತರಿಗೆ ಕಿಟ್ ವಿತರಿಸಲಾಗುತ್ತಿದೆ.

Leave a Reply

Your email address will not be published. Required fields are marked *

eighteen − sixteen =