ಕೊಲ್ಲೂರು ಸರಕಾರಿ ಹಿ.ಪ್ರಾ. ಶಾಲೆ: ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ,
ಕೊಲ್ಲೂರು:
ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚಿಗೆ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಎಸ್.ಡಿ.ಎಂ.ಸಿ ಹಾಗೂ ಶಾಲಾ ಶಿಕ್ಷಕರ ವತಿಯಿಂದ ನಡೆಯಿತು.

Call us

Call us

ವರ್ಗಾವಣೆಗೊಂಡ ಶಿಕ್ಷಕರಾದ ರಾಘವೇಂದ್ರ, ಯಶೋದಾ, ಉಷಾ, ಮತ್ತು ವಿನೋದ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ್ ಅಡಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಭಟ್ ಮತ್ತು ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶೈಲೇಶ್ ರಾವ್ ಹಾಗೂ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಗ್ರೀಷ್ಮಾ ಗಿರಿಧರ್ ಭಿಡೆ ಮತ್ತು ಎಸ್.ಡಿ.ಎಂ.ಸಿ ಸದಸ್ಯರಾದ ಯೋಗೇಶ್ ಭಟ್, ರಾಮಚಂದ್ರ ಭಟ್, ನವೀನ್ ಕುಮಾರ್, ಜನಾರ್ಧನ್, ಗೋವಿಂದ, ನೇತ್ರಾವತಿ, ಶಾರದಾ, ಶೋಭಾ ಉಪಸ್ಥಿತರಿದ್ದರು.

ಶಾಲಾ ಮುಖ್ಯಶಿಕ್ಷಕಿ ಶಾರದಾ ಸ್ವಾಗತಿಸಿದರು. ಸಹಶಿಕ್ಷಕಿ ಶೈಲಜಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಹಶಿಕ್ಷಕಿ ನಿರ್ಮಲಾ ಕಾರ್ಯಕ್ರಮ ವಂದಿಸಿದರು. ಸನ್ಮಾನ ಪತ್ರವನ್ನು ಸಹಶಿಕ್ಷಕಿರಾದ ರಾಜೇಶ್ವರಿ ಮತ್ತು ಸುಮಿತ್ರಾ ವಾಚಿಸಿದರು. ದಾನಿಗಳಾದ ಯೋಗೇಂದ್ರನಾಥ್ ಅವರ ಮೊಮ್ಮಗ ಆರ್ಯನ್ ಹುಟ್ಟುಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ಸಿಹಿಯೂಟ ನೀಡಿದರು.

Leave a Reply

Your email address will not be published. Required fields are marked *

one + 11 =