ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾದ ಶಂಕರ ಪೂಜಾರಿ ಕಾಡಿನತಾರು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಕಾಡಿನತಾರು ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.

Click Here

Call us

Call us

ಮೂಲತಃ ಬೈಂದೂರು ತಾಲೂಕು ಬಿಜೂರಿನವರಾದ ಶಂಕರ ಪೂಜಾರಿ ಅವರು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ್ದು, ಓಟ, ರಿಲೇ ಮೊದಲಾದ ವಿಭಾಗದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ತನಕವೂ ಭಾಗವಹಿಸಿದ್ದಾರೆ.  2014ರಲ್ಲಿ ನಡೆದ 26ನೇ ಮಲೇಷಿಯಾ ಅಥ್ಲೆಟಿಕ್ ಚಾಂಪಿಯನ್’ಶಿಪ್’ನಲ್ಲಿ 2 ಚಿನ್ನ ಹಾಗೂ ಎರಡು ಬೆಳ್ಳಿಯ ಪದಕ ಗೆದ್ದಿದ್ದರು. ಇತ್ತಿಚಿಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟ್ ಸ್ಪೋರ್ಟ್ಸ್ 2021 ಕ್ರೀಡಾಕೂಟ 100 ಹಾಗೂ 200 ಮೀಟರ್ ಓಟದ ಸ್ವರ್ಧೆಯಲ್ಲಿ ಅವರು ಬೆಳ್ಳಿಯ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಶಂಕರ ಪೂಜಾರಿ ಅವರು ಪ್ರಸ್ತುತ ಅವರು ಯಡ್ತಾಡಿ ಸೈಬ್ರಕಟ್ಟೆಯಲ್ಲಿ ನೆಲೆಸಿದ್ದಾರೆ.

Click here

Click Here

Call us

Visit Now

ಇದನ್ನೂ ಓದಿ
► ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾದ ಲೋಕಾಯುಕ್ತ ಇನ್ಸ್‌ಪೆಕ್ಟರ್ ರಾಘವೇಂದ್ರ ಎಮ್ – https://kundapraa.com/?p=46453 .

Leave a Reply

Your email address will not be published. Required fields are marked *

6 + nineteen =