ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್: ಕುಡಿಯುವ ನೀರು ಸರಬರಾಜಿಗೆ ಚಾಲನೆ, ಆಹಾರ ಸಾಮಾಗ್ರಿ ವಿತರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವತಿಯಿಂದ ಬಿಜೂರು ಗ್ರಾಮದ ೩ ಹಾಗೂ ೪ನೇ ವಾರ್ಡಿನ ಗ್ರಾಮಸ್ಥರಿಗೆ ಮುಂದಿನ ಒಂದು ತಿಂಗಳ ಅವಧಿಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗೆ ಸೋಮವಾರ ಚಾಲನೆ ನೀಡಲಾಯಿತು ಹಾಗೂ ಅಗತ್ಯವುಳ್ಳವರಿಗೆ ಆಹಾರ ಸಾಮಾಗ್ರಿ ಕಿಟ್‌ಗಳನ್ನು ವಿತರಿಸಲಾಯಿತು.

Click Here

Call us

Call us

ಬೈಂದೂರು ಪೊಲೀಸ್ ಉಪನಿರೀಕ್ಷಕಿ ಸಂಗೀತಾ ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಎಲ್ಲರೂ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.

Click here

Click Here

Call us

Visit Now

ಈ ಸಂದರ್ಭ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ, ಬ್ಯಾಂಕ್ ಉದ್ಯೋಗಿ ಗುರುರಾಜ ಪೂಜಾರಿ ಬಿಜೂರು ಇದ್ದರು./ಕುಂದಾಪ್ರ ಡಾಟ್ ಕಾಂ/

Leave a Reply

Your email address will not be published. Required fields are marked *

5 + fifteen =