ತರಕಾರಿ ಟೆಂಪೋ ಅಪಘಾತ: ಕುಂದಾಪುರದ ಇಬ್ಬರು ಯುವಕರ ಸಾವು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜೂ.18: ತರಕಾರಿ ಸಾಗಿಸುವ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಸಹಪ್ರಯಾಣಿಕ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಇಂದು ಮಂಜಾನೆ ನಡೆದಿದೆ.

Click here

Click Here

Call us

Call us

Visit Now

Call us

Call us

ರಾಷ್ಟ್ರೀಯ ಹೆದ್ದಾರಿಯ 66ರ ಅಂಬಾಗಿಲು ಬಳಿ ಮುಂಜಾನೆ 6.30ರ ಸುಮಾರಿಗೆ ಅಪಘಾತ ನಡೆದಿದ್ದು, ಘಟನೆಯಲ್ಲಿ ಕುಂದಾಪುರ ತಾಲೂಕು ಹೇರಿಕೆರಿ ನಿವಾಸಿಗಳಾದ ದಿನೇಶ್ (35), ಮಂಜು (21) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಉಡುಪಿ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಕೊಂಡುಕೊಳ್ಳಲು ಕುಂದಾಪುರದಿಂದ ಆದಿ ಉಡುಪಿಗೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಸಂತೆಕಟ್ಟೆಯ ಸ್ವಾಗತ ಕಮಾನಿಗೆ ಟೆಂಪೋ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Call us

Leave a Reply

Your email address will not be published. Required fields are marked *

15 + nineteen =