ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ರಾಜಗೋಪುರ ನಿರ್ಮಾಣಕ್ಕೆ ಶಂಕುಸ್ಥಾಪನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಪ್ಪುಂದ: ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನೂತನ ರಾಜಗೋಪುರ ನಿರ್ಮಾಣಕ್ಕೆ ಶಿಲನ್ಯಾಸ ಕಾರ್ಯಕ್ರಮ ಶುಕ್ರವಾರ ದೇವಸ್ಥಾನದಲ್ಲಿ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ನೆರವೇರಿತು.

Click Here

Call us

Call us

ತಂತ್ರಿ ಮಂಜುನಾಥ ಅಡಿಗ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಸಿದರು. ರಾಜಗೋಪುರ ನಿರ್ಮಾಣದ ದಾನಿಗಳಾದ ಯು.ಬಿ.ಶೆಟ್ಟಿ ದಂಪತಿ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಿದರು.

Click here

Click Here

Call us

Visit Now

ಈ ಸಂದರ್ಭ ಬೈಂದೂರು ತಹಶಿಲ್ದಾರ್ ಬಸಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಐಎಫ್‌ಎಸ್ ನಿವೃತ ಅಧಿಕಾರಿ ಜಗನಾಥ ಶೆಟ್ಟಿ ಉಪ್ಪುಂದ ಗ್ರಾಮ ಪಂಚಾಯತ್ ಸದಸ್ಯ ಸಂದೇಶ ಭಟ್, ನಾಗಾರಾಜ ಶೇಟ್, ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ಧರ್ಮದರ್ಶಿ ಜಯರಾಮ ಶೆಟ್ಟಿ ಬಿಜೂರು, ಬೈಂದೂರು ವಲಯ ನಾಡ ದೋಣಿ ಮೀನುಗಾರರ ಸಂಘದ ಅಧ್ಯಕ್ಷ ಆನಂದ ಖಾರ್ವಿ ಉಪ್ಪುಂದ, ಸ್ಥಳೀಯ ಮುಖಂಡರಾದ ಮದನ್ ಕುಮಾರ್ ಉಪ್ಪುಂದ, ಆಡಳಿತಾಧಿಕಾರಿ ಈ ಕುಮಾರ್, ಸೀತಾರಾಮ ಶೆಟ್ಟಿ, ದೇವಸ್ಥಾನದ ಪ್ರಧಾನ ಅರ್ಚಕ ಪ್ರಕಾಶ ಉಡುಪ ಹಾಗೂ ದೇವಸ್ಥಾನದ ಸಿಬಂದಿ ಸುರೇಶ ಭಟ್, ಗಣೇಶ ದೇವಾಡಿಗ, ಅರ್ಚಕ ವರ್ಗದವರು ಹಾಗೂ ಊರಿನ ನಾಗರಿಕರು ಉಪಸ್ಥಿತರಿದ್ದರು.

ಕರಾವಳಿ ಭಾಗದ ಪುರಾಣ ಪ್ರಸಿದ್ಧಿ ಹೊಂದಿರುವ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ರಾಜಗೋಪುರದ ನಿರ್ಮಾಣವು ಅಂದಾಜು ರೂ.1 ಕೋಟಿ ವೆಚ್ಚದಲ್ಲಿ ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ.

Call us

Leave a Reply

Your email address will not be published. Required fields are marked *

five × one =